ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಂತಿ ಸೌಹಾರ್ದತೆಯ ನೆಲೆಗಾಗಿ ಕೆಪಿಸಿಸಿ ಸಮಿತಿಯನ್ನು ಜಾರಿಗೆ ತರಲಾಗಿದೆ. ಈ ಬಗ್ಗೆ ಸಮಿತಿಯ ಸದಸ್ಯ ಜಯಪ್ರಕಾಶ್ ಹೆಗ್ಡೆ ಅವರು ಮಂಗಳೂರಿನಲ್ಲಿರುವ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ನಾನು ಉಸ್ತುವಾರಿ ಸಚಿವನಾಗಿದ್ದ ಸಮಯದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈ ರೀತಿಯ ಘಟನೆಗಳು ನಡೆಯುತ್ತಿರಲಿಲ್ಲ.

ಆದ್ರೆ ಇಂದು ವೈಯುಕ್ತಿಕ ದ್ವೇಷ ಭಾಷಣವನ್ನು ಮಾಡುವವರಿಂದ ಸಮಾಜ ಹಾಳಾಗಿದೆ. ಸಾಮಾಜಿಕ ಮಾಧ್ಯಮದ ಮೂಲಕ ಗೊಂದಲದ ವಾತಾವರಣವನ್ನು ನಿರ್ಮಾಣ ಮಾಡ್ತಾ ಇದ್ದಾರೆ. ಉತ್ತೇಜನಕ್ಕೆ ತನ್ನದೇ ಆದ ಕೊಡುಗೆಯನ್ನು ನೀಡುತ್ತಿದ್ದ ಈ ಜಿಲ್ಲೆ ಇಂದು ಅಭಿವೃದ್ದಿಯಲ್ಲಿ ಹಿಂದಕ್ಕೆ ಉಳಿದಿದೆ ಎಂದು ಹತಾಶೆ ವ್ಯಕ್ತಪಡಿಸಿದ್ದಾರೆ.



