ವಿಶ್ವ ಪರಿಸರ ದಿನದ ಅಂಗವಾಗಿ ನಿಟ್ಟೆ ಪರಿಗಣಿಸಲ್ಪಟ್ಟ ವಿ.ವಿ ಅಧೀನದ ನಿಟ್ಟೆ ಇನ್ಸ್ಟಿಟ್ಯೂಟ್ ಆಫ್ ಫಿಸಿಯೋಥೆರಪಿ ಕಾಲೇಜು ನೇತೃತ್ವದಲ್ಲಿ ಕೊಲ್ಲೂರು ಮೂಕಾಂಬಿಕ ದೇವಳದ ಆವರಣದಲ್ಲಿ ಸ್ವಚ್ಛತಾ ಅಭಿಯಾನದ ಅಂಗವಾಗಿ ‘ಕ್ಲೀನ್ ಸೌಪರ್ಣಿಕ ಗ್ರೀನ್ ಕೊಲ್ಲೂರು’ ಅಭಿಯಾನ ನಡೆಯಿತು.
ಕಾರ್ಯಕ್ರಮವನ್ನು ಕೊಲ್ಲೂರು ದೇವಸ್ಥಾನದ ಮುಂಭಾಗ ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಕೊಲ್ಲೂರು ಶ್ರೀ ಮೂಕಾಂಬಿಕ ದೇಗುಲ ಸಮಿತಿ ಅಧ್ಯಕ್ಷ ಬಾಬು ಶೆಟ್ಟಿ ಧ್ವಜ ಹಾರಿಸುವ ಮೂಲಕ ಚಾಲನೆ ನೀಡಿದ್ದಾರೆ. ಬಳಿಕ ಮಾತನಾಡಿದ ಇವರು, ಮಕ್ಕಳಿಂದ ನಡೆಯುವ ಒಂದು ದಿನದ ಅಭಿಯಾನದಿಂದ ದೇಗುಲದ ಆವರಣ ಅಥವಾ ಸೌಪರ್ಣಿಕ ಸ್ವಚ್ಛವಾಗಿ ಉಳಿಯುವುದಿಲ್ಲ. ಆದರೆ ಮಕ್ಕಳ ಈ ಅಭಿಯಾನದಿಂದಾಗಿ ಜನರಿಗೆ ಜಾಗೃತಿ ಮೂಡುತ್ತದೆ. ಇಂತಹಾ ಜಾಗೃತಿಗೆ ಈ ರೀತಿಯ ಕಾರ್ಯಕ್ರಮಗಳು ನಡೆಯುತ್ತಿರಬೇಕು. ಕ್ಷೇತ್ರದ ಆವರಣವನ್ನು ಸ್ವಚ್ಛವಾಗಿಡುವ ಮೂಲಕ ದೇವರಿಗೆ ಇನ್ನಷ್ಟು ಹತ್ತಿರವಾಗೋಣ ಎಂದಿದ್ದಾರೆ. ಕೊಲ್ಲೂರು ಶ್ರೀ ಮೂಕಾಂಬಿಕ ದೇಗಲುದ ಕಾರ್ಯನಿರ್ವಾಹಣಾ ಅಧಿಕಾರಿ ಪ್ರಶಾಂತ್ ಕುಮಾರ್ ಶೆಟ್ಟಿ ಪೋಸ್ಟರ್ ಬಿಡುಗಡೆ ಅನಾವರಣಗೊಳಿಸಿದ್ದಾರೆ. ಈ ಸಂದರ್ಭದಲ್ಲಿ ಪ್ರಧಾನ ಅರ್ಚಕ ಸುಬ್ರಮಣ್ಯ ಅಡಿಗ ಮಾತನಾಡಿದ್ದಾರೆ.
ತುಳುನಾಡಿನ ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿಯ ಬೆಳವಣಿಗೆಗೆ ಕಯ್ಯಾರ ಕಿಞ್ಞಣ್ಣ ರೈ ಅವರ ಕೊಡುಗೆ ಅಪಾರವಾಗಿದ್ದು, ಅವರನ್ನು ಈ ನಾಡಿನ…
ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಕಾರಣಗಿರಿ ಗ್ರಾಮ ಭಾರತಿ ಟ್ರಸ್ಟ್ ಹಾಗೂ ಕಲಾದರ್ಶನ ಮಾಸಪತ್ರಿಕೆ ಆಶ್ರಯದಲ್ಲಿ ಪ್ರಥಮ ಸುದ್ದಿ ವಾಹಕ…
72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ಅತ್ಯುತ್ತಮ ಪೋಷಕ ನಟಿ ರಾಷ್ಟ್ರೀಯ ಪ್ರಶಸ್ತಿ ಪಡೆದ ಕಾಸರಗೋಡು ವರ್ಕಾಡಿ ಮೂಲದ ರೂಪಶ್ರೀ ವರ್ಕಾಡಿ…
ಬಿಜೆಪಿಯ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನಾವಾಲಾ ಅವರು ತಮ್ಮ ಹುದ್ದೆ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನುವ…
ದೇಶದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಏರಿಳಿತ ಮುಂದುವರಿದಿದೆ. ಶುಕ್ರವಾರ ಚಿನ್ನದ ಬೆಲೆ ಪ್ರತಿ ಗ್ರಾಂಗೆ 25 ರೂಪಾಯಿ ಏರಿಕೆಯಾದರೂ,…
ತುಮಕೂರಿನಲ್ಲಿ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮೂಡಿಸುತ್ತಿದ್ದ ಪೊಲೀಸ್ ಸಿಬ್ಬಂದಿಯ ಪುತ್ರನೇ ಹೈಡ್ರೋ ಗಾಂಜಾ…