ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಂತಿ ಸೌಹಾರ್ದತೆಯ ನೆಲೆಗಾಗಿ ಕೆಪಿಸಿಸಿ ಸಮಿತಿಯನ್ನು ಜಾರಿಗೆ ತರಲಾಗಿದೆ ಎಂದು ಕೆಪಿಸಿಸಿ ಉಪಾಧ್ಯಕ್ಷ ವಿ.ಆರ್.ಸುದರ್ಶನ್ ಹೇಳಿದ್ದಾರೆ.
ಇವರು ಜಿಲ್ಲಾ ಕಾಂಗ್ರೆಸ್ ಕಛೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕರಾವಳಿಯಲ್ಲಿ ಶಾಂತಿ ಸ್ಥಾಪನೆಗೆ ಈ ಸಮಿತಿಯನ್ನು ರಚಿಸಲಾಗಿದೆ. ಹಲವಾರು ಉದ್ಯಮಗಳು, ಆರ್ಥಿಕ ಶೈಕ್ಷಣಿಕ ಸಂಸ್ಥೆಗಳು ಇಲ್ಲಿದೆ. ಆದ್ರೆ ಸೌಹಾರ್ದೆಯನ್ನು ಹಾಳು ಮಾಡುವ 2ಶೇಕಡದಷ್ಟು ಜನರಿಂದ ಇಂದು ನಮ್ಮ ಸಮಾಜದಲ್ಲಿ ಅಶಾಂತಿ ಇದೆ. ಈಗಾಗಲೇ ನಾಗರಿಕರಿಂದ ಅಭಿಪ್ರಾಯವನ್ನು ಸಂಗ್ರಹಿಸುವ ಪ್ರಕ್ರಿಯೆಯಲ್ಲಿ ಸಮಿತಿಯು ಕಾರ್ಯಾಚರಣೆ ನಡೆಸ್ತಾ ಇದೆ ಎಂದಿದ್ದಾರೆ.