ಪೋಲೀಸ್ ಇಲಾಖೆಯ ಗಡಿಪಾರು ನೋಟೀಸ್ ವಿಚಾರಣೆ ಇಂದು ಪುತ್ತೂರಿನ ಸಹಾಯಕ ಆಯುಕ್ತರ ಕಛೇರಿಯಲ್ಲಿ ನಡೆದಿದೆ. ದಕ್ಷಿಣಕನ್ನಡ ಪೋಲೀಸ್ ವರಿಷ್ಠಾಧಿಕಾರಿ ವ್ಯಾಪ್ತಿಗೆ ಸಂಬ0ಧಪಟ್ಟವರ ಸುಮಾರು 36 ಮಂದಿ ಹಳೆ ಆರೋಪಿಗಳಿಗೆ ಗಡಿಪಾರು ಪಟ್ಟಿ ಮಾಡಲಾಗಿದೆ.
ಈ ಪಟ್ಟಿಯಲ್ಲಿ 8 ಮಂದಿಗೆ ಮಾತ್ರ ಪೋಲೀಸ್ ಇಲಾಖೆಯಿಂದ ನೋಟೀಸ್ ಕೊಡಲಾಗಿದ್ದು, ನೋಟೀಸ್ ಜಾರಿಯಾದ 8 ಮಂದಿಯ ವಕೀಲರು ಸಹಾಯಕ ಆಯುಕ್ತರ ಮುಂದೆ ಹಾಜರಾಗಿದ್ದಾರೆ. ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ, ಹಕೀಂ ಕೂರ್ನಡ್ಕ, ಅಬ್ದುಲ್ ರಹಮಾನ್, ಅಝೀಜ್, ಮಹಮ್ಮದ್ ಶಕೀರ್, ಅಬ್ದುಲ್ ಅಝೀಜ್, ಅಶ್ರಫ್, ಮನೋಜ್ ಕುಮಾರ್ ವಿಚಾರಣೆಗೆ ಹಾಜರಾಗಿದ್ದಾರೆ. ಜೂನ್ 21ಕ್ಕೆ ಮುಂದಿನ ವಿಚಾರಣೆ ಮುಂದೂಡಿಕೆಯಾಗಿದ್ದು, ಪುತ್ತೂರು ನಗರ, ಪುತ್ತೂರು ಗ್ರಾಮಾಂತರ, ಉಪ್ಪಿನಂಗಡಿ, ಬೆಳ್ತಂಗಡಿ, ಪೂಂಜಾಲುಕಟ್ಟೆ ಠಾಣಾ ವ್ಯಾಪ್ತಿಗೆ ಸೇರಿದವರ ಪಟ್ಟಿ ಕೂಡ ಇದೆ.