ಕಾನೂನು ಗೌರವಿಸುವುದು ಮತ್ತು ಪಾಲನೆ ಮಾಡುವುದು ಪ್ರತಿಯೊಬ್ಬರ ಹೊಣೆಯಾಗಿದೆ. ಸ್ವಾತಂತ್ರ್ಯ ಪರಿಪಾಲನೆಯಾಗಬೇಕು ಹೊರತು ಸ್ವಾತಂತ್ರ್ಯವನ್ನು ಮೀರಿದ ವರ್ತನೆ ಸರಿಯಲ್ಲ. ಯಾರೂ ಕಾನೂನು ಮೀರುವ ಕೆಲಸ ಮಾಡಬಾರದು ಎಂದು ಜಿಲ್ಲಾ ಅಪರ ಪೊಲೀಸ್ ವರಿಷ್ಠಾಧಿಕಾರಿ ರಾಜೇಂದ್ರ ಹೇಳಿದ್ದಾರೆ. ಇವರು ಬಕ್ರೀದ್ ಹಬ್ಬದ ಹಿನ್ನಲೆಯಲ್ಲಿ ಪುತ್ತೂರಿನ ಪುರಭವನದಲ್ಲಿ ನಡೆದ ಶಾಂತಿ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ್ರು.
ಡ್ರಗ್ಸ್ ಸೇವನೆ ಮತ್ತು ಸಾಮಾಜಿಕ ಜಾಲತಾಣದ ಕಾರಣದಿಂದಾಗಿ ತೊಂದರೆಯಾಗುತ್ತಿದೆ. ಇದನ್ನು ತಡೆಯುವುದು ಕೇವಲ ಪೊಲೀಸರ ಮಾತ್ರ ಜವಾಬ್ದಾರಿಯಲ್ಲ. ಹೆತ್ತವರಿಗೆ ಮತ್ತು ಸಾರ್ವಜನಿಕರಿಗೂ ಈ ಬಗ್ಗೆ ಜವಾಬ್ದಾರಿಯಿದೆ. ಪ್ರತಿಯೊಬ್ಬರೂ ತಮ್ಮ ಜವಾಬ್ದಾರಿ ಅರಿತು ಮುಂದುವರಿದಲ್ಲಿ ಸಮಾಜದಲ್ಲಿ ಯಾವುದೇ ಅಶಾಂತಿ ಹರಡಲು ಸಾಧ್ಯವಿಲ್ಲ. ಶಾಂತಿ ಸುವ್ಯವಸ್ಥೆ ಕಾಪಾಡುವಲ್ಲಿ ಪೊಲೀಸ್ ಇಲಾಖೆಯ ಜವಾಬ್ದಾರಿ ಎಷ್ಟಿದೆಯೋ ಅಷ್ಟೇ ಸಾರ್ವಜನಿಕರದ್ದು ಇದೆ. ಸಾಮಾಜಿಕ ಜಾಲತಾಣ ಸಹಿತ ವಿವಿಧ ಮಾಧ್ಯಮಗಳ ಬಳಕೆಯ ಸಂದರ್ಭದಲ್ಲಿಯು ಜವಾಬ್ದಾರಿಯುತವಾಗಿ ವರ್ತಿಸಬೇಕು ಎಂದಿದ್ದಾರೆ.
ಯುಎಇ ಮೂಲದ ಟೋರ್ಟಿಲ್ಲಾ ಮತ್ತು ಫ್ಲಾಟ್ಬ್ರೆಡ್ ತಯಾರಕರಾದ ಫ್ಲೋರ್ ಮಾಸ್ಟರ್ಸ್, ಆಂಧ್ರಪ್ರದೇಶದಲ್ಲಿ ವಿಶ್ವ ದರ್ಜೆಯ ಸಂಯೋಜಿತ ಫ್ಲಾಟ್ಬ್ರೆಡ್ ಉತ್ಪಾದನಾ ಪರಿಸರ…
ಕಾರಿಗೆ ಖಾಸಗಿ ಬಸ್ ಡಿಕ್ಕಿಯಾಗಿ ಕಾರಿನಲ್ಲಿದ್ದ ಪುಟ್ಟ ಮಕ್ಕಳು ಸಹಿತ ಚಾಲಕ ಅಪಾಯದಿಂದ ಪಾರಾಗಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 66ರ…
ಅಮೆರಿಕ ಮತ್ತು ಇರಾನ್ ನಡುವೆ ಪರ್ಷಿಯನ್ ಕೊಲ್ಲಿಯಲ್ಲಿನ ಮಿಲಿಟರಿ ದಾಳಿಗಳು ತಾತ್ಕಾಲಿಕವಾಗಿ ಸ್ಥಗಿತಗೊಂಡ ಬೆನ್ನಲ್ಲೇ ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ…
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…