ಕಾನೂನು ಗೌರವಿಸುವುದು ಮತ್ತು ಪಾಲನೆ ಮಾಡುವುದು ಪ್ರತಿಯೊಬ್ಬರ ಹೊಣೆಯಾಗಿದೆ. ಸ್ವಾತಂತ್ರ್ಯ ಪರಿಪಾಲನೆಯಾಗಬೇಕು ಹೊರತು ಸ್ವಾತಂತ್ರ್ಯವನ್ನು ಮೀರಿದ ವರ್ತನೆ ಸರಿಯಲ್ಲ. ಯಾರೂ ಕಾನೂನು ಮೀರುವ ಕೆಲಸ ಮಾಡಬಾರದು ಎಂದು ಜಿಲ್ಲಾ ಅಪರ ಪೊಲೀಸ್ ವರಿಷ್ಠಾಧಿಕಾರಿ ರಾಜೇಂದ್ರ ಹೇಳಿದ್ದಾರೆ. ಇವರು ಬಕ್ರೀದ್ ಹಬ್ಬದ ಹಿನ್ನಲೆಯಲ್ಲಿ ಪುತ್ತೂರಿನ ಪುರಭವನದಲ್ಲಿ ನಡೆದ ಶಾಂತಿ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ್ರು.
ಡ್ರಗ್ಸ್ ಸೇವನೆ ಮತ್ತು ಸಾಮಾಜಿಕ ಜಾಲತಾಣದ ಕಾರಣದಿಂದಾಗಿ ತೊಂದರೆಯಾಗುತ್ತಿದೆ. ಇದನ್ನು ತಡೆಯುವುದು ಕೇವಲ ಪೊಲೀಸರ ಮಾತ್ರ ಜವಾಬ್ದಾರಿಯಲ್ಲ. ಹೆತ್ತವರಿಗೆ ಮತ್ತು ಸಾರ್ವಜನಿಕರಿಗೂ ಈ ಬಗ್ಗೆ ಜವಾಬ್ದಾರಿಯಿದೆ. ಪ್ರತಿಯೊಬ್ಬರೂ ತಮ್ಮ ಜವಾಬ್ದಾರಿ ಅರಿತು ಮುಂದುವರಿದಲ್ಲಿ ಸಮಾಜದಲ್ಲಿ ಯಾವುದೇ ಅಶಾಂತಿ ಹರಡಲು ಸಾಧ್ಯವಿಲ್ಲ. ಶಾಂತಿ ಸುವ್ಯವಸ್ಥೆ ಕಾಪಾಡುವಲ್ಲಿ ಪೊಲೀಸ್ ಇಲಾಖೆಯ ಜವಾಬ್ದಾರಿ ಎಷ್ಟಿದೆಯೋ ಅಷ್ಟೇ ಸಾರ್ವಜನಿಕರದ್ದು ಇದೆ. ಸಾಮಾಜಿಕ ಜಾಲತಾಣ ಸಹಿತ ವಿವಿಧ ಮಾಧ್ಯಮಗಳ ಬಳಕೆಯ ಸಂದರ್ಭದಲ್ಲಿಯು ಜವಾಬ್ದಾರಿಯುತವಾಗಿ ವರ್ತಿಸಬೇಕು ಎಂದಿದ್ದಾರೆ.
ನೆರೆಮನೆಯ ದನಗಳು ತನ್ನ ತೋಟಕ್ಕೆ ಬಂದು ಹಾನಿಗೊಳಿಸಿವೆ ಎಂಬ ಆಕ್ರೋಶದಿಂದ ಹಟ್ಟಿಯಲ್ಲಿ ಕಟ್ಟಿಹಾಕಿದ್ದ ದನಗಳಿಗೆ ಕತ್ತಿಯಿಂದ ಕಡಿದು ಹಲ್ಲೆ ನಡೆಸಿ…
ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನಿಸಿದ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಮಂಗಳೂರು ದಕ್ಷಿಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಿಷೇಧಿತ ಮಾದಕ…
ಪುರಸಭಾ ವ್ಯಾಪ್ತಿಯ ಪಾಣೆಮಂಗಳೂರು ಎಂಬಲ್ಲಿ ನೇತ್ರಾವತಿ ನದಿಯಿಂದ ಅಕ್ರಮವಾಗಿ ಮರಳು ತೆಗೆದು ಮಾರಾಟ ಮಾಡುತ್ತಿದ್ದಾರೆ ಎಂದು ಆರೋಪ ವ್ಯಕ್ತಪಡಿಸಿ, ಇವರ…
ಖಾಸಗಿ ಸಂಸ್ಥೆಗಳಿಗೆ ಸಂಬಂಧಿಸಿದಂತೆ ಶಾಲಾ ಮಕ್ಕಳನ್ನು ಕರೆದುಕೊಂಡು ಹೋಗುವ ಸ್ಕೂಲ್ ಬಸ್ಗಳು ಕಾನೂನು ಮತ್ತು ನಿಯಮಗಳನ್ನು ಪಾಲಿಸುತ್ತಿದೆಯಾ ಎಂಬ ಬಗ್ಗೆ…
ಕೆಲ ದಿನಗಳಿಂದ ಸುರಿಯುತ್ತಿರುವ ಮಳೆಗೆ ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿಯಿಂದ ಹಳೇ ಸೇತುವೆ ಕಡೆಗೆ ಸಾಗುವ ದಾರಿಯ…
ಹೆಬ್ರಿ ಸಮೀಪದ ಹೊಸೂರು ಎಂಬಲ್ಲಿ ಇಸ್ಪೀಟ್ ಜೂಜಾಟ ನಡೆಸುತ್ತಿದ್ದ ಆರೋಪದಲ್ಲಿ ಏಳು ಮಂದಿಯನ್ನು ಹೆಬ್ರಿ ಪೊಲೀಸರು ಬಂಧಿಸಿದ್ದಾರೆ. ಜೂಜಾಟ ನಡೆಯುತ್ತಿರುವ…