ವೈದ್ಯರ ಮೇಲೆ ಹಲ್ಲೆ ಯತ್ನ ನಡೆದು ಕೆಲ ತಿಂಗಳು ಕಳೆದಿದ್ದು, ಇದೀಗ ಮತ್ತೆ ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ಹಲ್ಲೆಗೆ ಯತ್ನಿಸಲಾಗಿದೆ.
ಈ ಬಾರಿ ಆಸ್ಪತ್ರೆಯ ಸಿಬ್ಬಂದಿ ಪುರಂದರ ಎನ್ನುವವರ ಮೇಲೆ ಮೇಲೆ ಹಲ್ಲೆಗೆ ಯತ್ನ ನಡೆದಿದೆ. ಹಲ್ಲೆಗೆ ಯತ್ನ ನಡೆಸಿದವರ ವಿರುದ್ಧ ಆಸ್ಪತ್ರೆಯ ಆರೋಗ್ಯ ರಕ್ಷಾ ಸಮಿತಿ ಸಭೆಯ ಬಳಿಕ ದೂರು ನೀಡಲು ನಿರ್ಧಾರ ಕೈಗೊಳ್ಳಲಾಗಿದೆ.