ಬೆಂಗಳೂರು-ಮ0ಗಳೂರು ರಾಷ್ಟ್ರೀಯ ಹೆದ್ದಾರಿ 75ರ ಬರ್ಚಿನಹಳ್ಳಿ ತಿರುವಿನಲ್ಲಿ ಶನಿವಾರ (ಜೂನ್ 7) ಬೆಳಗಿನ ಜಾವ ಭೀಕರ ಅಪಘಾತ ಸಂಭವಿಸಿದೆ. ಬೆಂಗಳೂರಿನಿ0ದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದು ರಸ್ತೆ ಬದಿಗೆ ಉರುಳಿದ್ದು, 16 ಮಂದಿ ಪ್ರಯಾಣಿಕರು ಗಾಯಗೊಂಡಿದ್ದಾರೆ.
ಘಟನೆಯ ವೇಳೆಗೆ ಬಸ್ಸಿನಲ್ಲಿ ಸುಮಾರು 30ಕ್ಕೂ ಹೆಚ್ಚು ಮಂದಿ ಪ್ರಯಾಣಿಸುತ್ತಿದ್ದರು. ಹೆಚ್ಚಿನವರು ಹಬ್ಬದ ಪ್ರಯುಕ್ತ ತಮ್ಮ ತಮ್ಮ ಊರುಗಳಿಗೆ ತೆರಳುತ್ತಿದ್ದರು. ಬೆಳಗಿನ ಜಾವ ಪ್ರಯಾಣಿಕರು ನಿದ್ದೆಯ ಮುಂಪರೆಯಲ್ಲಿರುವ ಸಂದರ್ಭದಲ್ಲಿ ಗುಂಡ್ಯ ಸಮೀಪದ ಬರ್ಚಿನಹಳ್ಳಿ ತಿರುವಿನ ಬಳಿ ಚಾಲಕನ ನಿಯಂತ್ರಣ ತಪ್ಪಿ ಬಲಭಾಗಕ್ಕೆ ಪಲ್ಟಿ ಹೊಡೆದಿದೆ ಅದೃಷ್ಟವಶಾತ್ ಯಾವುದೇ ರೀತಿಯ ಯಾವುದೇ ಜೀವಹಾನಿ ಸಂಭವಿಸಿಲ್ಲ. ಘಟನೆಯಲ್ಲಿ ಗಾಯಗೊಂಡವರನ್ನು ಫಹದ್ (20) ಮೂಡಬಿದ್ರೆ, ರಂಝೀನ್(25) ಪರಂಗಿಪೇಟೆ, ಉಮ್ಮರ್ (53)ದೇರಳಕಟ್ಟೆ, ತಮೀನ್(19) ಪುತ್ತೂರು, ಇಷಾಮ್(19) ಸಾಲ್ಮರ ಪುತ್ತೂರು, ರುಕ್ಮಯ(24) ಉಪ್ಪಿನಂಗಡಿ, ಜಾಹಿರ್ (23) ಸಾಲೆತ್ತೂರು ಬಂಟ್ವಾಳ, ಶಮೀರ್ (28) ವಿಟ್ಲ, ಆನ್ಸರ್ (26) ವಿಟ್ಲ, ಸೋಮಶೇಖರ (55) ದಾಸರಪುರ ಬೆಂಗಳೂರು, ಶರತ್(35) ದಾಸರಪುರ ಬೆಂಗಳೂರು, ಡಾ. ಮಹಂತ್ ಗೌಡ (47) ನೆಲಮಂಗಲ ಬೆಂಗಳೂರು, ಸಿಮಾಕ್ (23), ಅಬ್ದುಲ್ ರಜೀದ್ (38) ಸಂಪ್ಯ ಪುತ್ತೂರು, ಪೌಝಿಲ್ (23), ಕೈಕಂಬ ಮೂಡುಬಿದ್ರೆ, ಅಲ್ತಾಫ್(28) ಎಂದು ಗುರುತಿಸಲಾಗಿದೆ.
ಗಾಯಾಳುಗಳನ್ನು ತಕ್ಷಣ ನೆಲ್ಯಾಡಿಯ ಖಾಸಗಿ ಆಸ್ಪತ್ರೆಗೆ ಕೊಂಡೊಯ್ಯಲಾಯಿತು. ಪ್ರಥಮ ಚಿಕಿತ್ಸೆಯನ್ನು ಪಡೆದು ಅಲ್ಲಿಂದ ಹೆಚ್ಚಿನ ಚಿಕಿತ್ಸೆಗಾಗಿ 12 ಮಂದಿಯನ್ನು ಮಂಗಳೂರು ಐಲ್ಯಾಂಡ್ ಆಸ್ಪತ್ರೆಗೆ, ಓರ್ವನನ್ನು ಮಂಗಳೂರು ಕೆಎಂಸಿ ಆಸ್ಪತ್ರೆಗೆ ಹಾಗೂ ಓರ್ವನನ್ನು ಪುತ್ತೂರು ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ. ಘಟನಾ ಸ್ಥಳದಿಂದ ಸುಮಾರು 8 ಆಂಬುಲೆನ್ಸ್ಗಳಲ್ಲಿ ಗಾಯಾಳುಗಳನ್ನು ಸ್ಥಳಾಂತರಿಸಲಾಯಿತು.
ಇವರಲ್ಲಿ ಮೂವರು ತೀವ್ರ ಗಾಯ ಹೊಂದಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಘಟನೆಯ ಬಗ್ಗೆ ಮಾಹಿತಿ ತಿಳಿದ ತಕ್ಷಣ ನೆಲ್ಯಾಡಿ ಹೊರ ಠಾಣೆಯ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ.
ಯುಎಇ ಮೂಲದ ಟೋರ್ಟಿಲ್ಲಾ ಮತ್ತು ಫ್ಲಾಟ್ಬ್ರೆಡ್ ತಯಾರಕರಾದ ಫ್ಲೋರ್ ಮಾಸ್ಟರ್ಸ್, ಆಂಧ್ರಪ್ರದೇಶದಲ್ಲಿ ವಿಶ್ವ ದರ್ಜೆಯ ಸಂಯೋಜಿತ ಫ್ಲಾಟ್ಬ್ರೆಡ್ ಉತ್ಪಾದನಾ ಪರಿಸರ…
ಕಾರಿಗೆ ಖಾಸಗಿ ಬಸ್ ಡಿಕ್ಕಿಯಾಗಿ ಕಾರಿನಲ್ಲಿದ್ದ ಪುಟ್ಟ ಮಕ್ಕಳು ಸಹಿತ ಚಾಲಕ ಅಪಾಯದಿಂದ ಪಾರಾಗಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 66ರ…
ಅಮೆರಿಕ ಮತ್ತು ಇರಾನ್ ನಡುವೆ ಪರ್ಷಿಯನ್ ಕೊಲ್ಲಿಯಲ್ಲಿನ ಮಿಲಿಟರಿ ದಾಳಿಗಳು ತಾತ್ಕಾಲಿಕವಾಗಿ ಸ್ಥಗಿತಗೊಂಡ ಬೆನ್ನಲ್ಲೇ ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ…
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…