ಜನ ಮನದ ನಾಡಿ ಮಿಡಿತ

Advertisement

ಬಂಟ್ವಾಳ: ಕೈ ಕಾಲು ತೊಳೆಯುವ ವೇಳೆ ಕೆರೆಗೆ ಬಿದ್ದು ಕಾಲೇಜು ವಿದ್ಯಾರ್ಥಿ ಮೃತ್ಯು

ಕೈ ಕಾಲು ತೊಳೆಯುವ ವೇಳೆ ಕೆರೆಗೆ ಬಿದ್ದು ಕಾಲೇಜು ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ಕಾರಿಂಜದಲ್ಲಿ ನಡೆದಿದೆ.

 

ವಗ್ಗ ಕಾರಿಂಜ ಕ್ರಾಸ್ ನಿವಾಸಿ ಶ್ರೀಧರ್ ಮೂಲ್ಯ ಅವರ ಮಗ ಚೇತನ್ (19) ಮೃತಪಟ್ಟ ವಿದ್ಯಾರ್ಥಿ. ಕಾರಿಂಜೇಶ್ವರ ದೇವಾಲಯದ ಕೆಳಗೆ ಇರುವ ಕೆರೆಯಲ್ಲಿ ಕಾಲು ತೊಳೆಯಲು ಇಳಿದ ವೇಳೆ ಆಯತಪ್ಪಿ ಕೆರೆಗೆ ಬಿದ್ದು ಈ ದುರ್ಘಟನೆ ನಡೆದಿದೆ ಎನ್ನಲಾಗಿದೆ. ಚೇತನ್ ಪ್ರತಿ ಶನಿವಾರ ಕಾರಿಂಜ ದೇವಾಲಯಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆಯುತ್ತಿದ್ದ, ಇಂದು ಅದೇ ರೀತಿ ಸ್ನೇಹಿತ ಪ್ರಶ್ವಿತ್‌ನ ಜೊತೆಗೆ ದೇವಸ್ಥಾನಕ್ಕೆ ತೆರಳಿದ್ದ. ಈ ವೇಳೆ ದೇವಾಲಯದ ಕೆರೆಯಲ್ಲಿ ಕಾಲು ತೊಳೆಯಲು ಮೆಟ್ಟಿಲು ಇಳಿಯುತ್ತಿದ್ದಂತೆ ಕಾಲು ಜಾರಿ ಕೆರೆಯೊಳಗೆ ಚೇತನ್ ಬಿದ್ದಿದ್ದಾನೆ. ಜೊತೆಯಲ್ಲಿ ಇದ್ದ ಪ್ರಶ್ವಿತ್ ಗೆ ಈಜು ತಿಳಿಯದ ಕಾರಣ ಆತ ಸ್ಥಳೀಯರಿಗೆ ಪೋನ್ ಮಾಡಿದ್ದಾನೆ. ಕೂಡಲೇ ಸ್ಥಳೀಯರು ಸೇರಿದ್ದು, ಶ್ರವಣ್ ಜೈನ್ ಹಾಗೂ ಉದಯ ಎಂಬಿಬ್ಬರು ಕೆರೆಗೆ ಹಾರಿ ಹುಡುಕಲು ಆರಂಭಿಸಿ, ಚೇತನ್ ನನ್ನು ಕೆರೆಯಿಂದ ಮೇಲಕ್ಕೆ ಎತ್ತಿ ಹಾಕಿದ್ದಾರೆ, ಆದರೆ ಅದಾಗಲೇ ಚೇತನ್ ಅವರ ಪ್ರಾಣ ಪಕ್ಷಿ ಹಾರಿಹೋಗಿತ್ತು. ಬಂಟ್ವಾಳ ಗ್ರಾಮಾಂತರ ಪೋಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ.

Leave a Reply

Your email address will not be published. Required fields are marked *

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

error: Content is protected !!