ಜನ ಮನದ ನಾಡಿ ಮಿಡಿತ

Advertisement

ಬಂಟ್ವಾಳ: ಕೈ ಕಾಲು ತೊಳೆಯುವ ವೇಳೆ ಕೆರೆಗೆ ಬಿದ್ದು ಕಾಲೇಜು ವಿದ್ಯಾರ್ಥಿ ಮೃತ್ಯು

ಕೈ ಕಾಲು ತೊಳೆಯುವ ವೇಳೆ ಕೆರೆಗೆ ಬಿದ್ದು ಕಾಲೇಜು ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ಕಾರಿಂಜದಲ್ಲಿ ನಡೆದಿದೆ.

 

ವಗ್ಗ ಕಾರಿಂಜ ಕ್ರಾಸ್ ನಿವಾಸಿ ಶ್ರೀಧರ್ ಮೂಲ್ಯ ಅವರ ಮಗ ಚೇತನ್ (19) ಮೃತಪಟ್ಟ ವಿದ್ಯಾರ್ಥಿ. ಕಾರಿಂಜೇಶ್ವರ ದೇವಾಲಯದ ಕೆಳಗೆ ಇರುವ ಕೆರೆಯಲ್ಲಿ ಕಾಲು ತೊಳೆಯಲು ಇಳಿದ ವೇಳೆ ಆಯತಪ್ಪಿ ಕೆರೆಗೆ ಬಿದ್ದು ಈ ದುರ್ಘಟನೆ ನಡೆದಿದೆ ಎನ್ನಲಾಗಿದೆ. ಚೇತನ್ ಪ್ರತಿ ಶನಿವಾರ ಕಾರಿಂಜ ದೇವಾಲಯಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆಯುತ್ತಿದ್ದ, ಇಂದು ಅದೇ ರೀತಿ ಸ್ನೇಹಿತ ಪ್ರಶ್ವಿತ್‌ನ ಜೊತೆಗೆ ದೇವಸ್ಥಾನಕ್ಕೆ ತೆರಳಿದ್ದ. ಈ ವೇಳೆ ದೇವಾಲಯದ ಕೆರೆಯಲ್ಲಿ ಕಾಲು ತೊಳೆಯಲು ಮೆಟ್ಟಿಲು ಇಳಿಯುತ್ತಿದ್ದಂತೆ ಕಾಲು ಜಾರಿ ಕೆರೆಯೊಳಗೆ ಚೇತನ್ ಬಿದ್ದಿದ್ದಾನೆ. ಜೊತೆಯಲ್ಲಿ ಇದ್ದ ಪ್ರಶ್ವಿತ್ ಗೆ ಈಜು ತಿಳಿಯದ ಕಾರಣ ಆತ ಸ್ಥಳೀಯರಿಗೆ ಪೋನ್ ಮಾಡಿದ್ದಾನೆ. ಕೂಡಲೇ ಸ್ಥಳೀಯರು ಸೇರಿದ್ದು, ಶ್ರವಣ್ ಜೈನ್ ಹಾಗೂ ಉದಯ ಎಂಬಿಬ್ಬರು ಕೆರೆಗೆ ಹಾರಿ ಹುಡುಕಲು ಆರಂಭಿಸಿ, ಚೇತನ್ ನನ್ನು ಕೆರೆಯಿಂದ ಮೇಲಕ್ಕೆ ಎತ್ತಿ ಹಾಕಿದ್ದಾರೆ, ಆದರೆ ಅದಾಗಲೇ ಚೇತನ್ ಅವರ ಪ್ರಾಣ ಪಕ್ಷಿ ಹಾರಿಹೋಗಿತ್ತು. ಬಂಟ್ವಾಳ ಗ್ರಾಮಾಂತರ ಪೋಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ.

Leave a Reply

Your email address will not be published. Required fields are marked *

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

error: Content is protected !!