ಕೈ ಕಾಲು ತೊಳೆಯುವ ವೇಳೆ ಕೆರೆಗೆ ಬಿದ್ದು ಕಾಲೇಜು ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ಕಾರಿಂಜದಲ್ಲಿ ನಡೆದಿದೆ.
ವಗ್ಗ ಕಾರಿಂಜ ಕ್ರಾಸ್ ನಿವಾಸಿ ಶ್ರೀಧರ್ ಮೂಲ್ಯ ಅವರ ಮಗ ಚೇತನ್ (19) ಮೃತಪಟ್ಟ ವಿದ್ಯಾರ್ಥಿ. ಕಾರಿಂಜೇಶ್ವರ ದೇವಾಲಯದ ಕೆಳಗೆ ಇರುವ ಕೆರೆಯಲ್ಲಿ ಕಾಲು ತೊಳೆಯಲು ಇಳಿದ ವೇಳೆ ಆಯತಪ್ಪಿ ಕೆರೆಗೆ ಬಿದ್ದು ಈ ದುರ್ಘಟನೆ ನಡೆದಿದೆ ಎನ್ನಲಾಗಿದೆ. ಚೇತನ್ ಪ್ರತಿ ಶನಿವಾರ ಕಾರಿಂಜ ದೇವಾಲಯಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆಯುತ್ತಿದ್ದ, ಇಂದು ಅದೇ ರೀತಿ ಸ್ನೇಹಿತ ಪ್ರಶ್ವಿತ್ನ ಜೊತೆಗೆ ದೇವಸ್ಥಾನಕ್ಕೆ ತೆರಳಿದ್ದ. ಈ ವೇಳೆ ದೇವಾಲಯದ ಕೆರೆಯಲ್ಲಿ ಕಾಲು ತೊಳೆಯಲು ಮೆಟ್ಟಿಲು ಇಳಿಯುತ್ತಿದ್ದಂತೆ ಕಾಲು ಜಾರಿ ಕೆರೆಯೊಳಗೆ ಚೇತನ್ ಬಿದ್ದಿದ್ದಾನೆ. ಜೊತೆಯಲ್ಲಿ ಇದ್ದ ಪ್ರಶ್ವಿತ್ ಗೆ ಈಜು ತಿಳಿಯದ ಕಾರಣ ಆತ ಸ್ಥಳೀಯರಿಗೆ ಪೋನ್ ಮಾಡಿದ್ದಾನೆ. ಕೂಡಲೇ ಸ್ಥಳೀಯರು ಸೇರಿದ್ದು, ಶ್ರವಣ್ ಜೈನ್ ಹಾಗೂ ಉದಯ ಎಂಬಿಬ್ಬರು ಕೆರೆಗೆ ಹಾರಿ ಹುಡುಕಲು ಆರಂಭಿಸಿ, ಚೇತನ್ ನನ್ನು ಕೆರೆಯಿಂದ ಮೇಲಕ್ಕೆ ಎತ್ತಿ ಹಾಕಿದ್ದಾರೆ, ಆದರೆ ಅದಾಗಲೇ ಚೇತನ್ ಅವರ ಪ್ರಾಣ ಪಕ್ಷಿ ಹಾರಿಹೋಗಿತ್ತು. ಬಂಟ್ವಾಳ ಗ್ರಾಮಾಂತರ ಪೋಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ.
ನೆರೆಮನೆಯ ದನಗಳು ತನ್ನ ತೋಟಕ್ಕೆ ಬಂದು ಹಾನಿಗೊಳಿಸಿವೆ ಎಂಬ ಆಕ್ರೋಶದಿಂದ ಹಟ್ಟಿಯಲ್ಲಿ ಕಟ್ಟಿಹಾಕಿದ್ದ ದನಗಳಿಗೆ ಕತ್ತಿಯಿಂದ ಕಡಿದು ಹಲ್ಲೆ ನಡೆಸಿ…
ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನಿಸಿದ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಮಂಗಳೂರು ದಕ್ಷಿಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಿಷೇಧಿತ ಮಾದಕ…
ಪುರಸಭಾ ವ್ಯಾಪ್ತಿಯ ಪಾಣೆಮಂಗಳೂರು ಎಂಬಲ್ಲಿ ನೇತ್ರಾವತಿ ನದಿಯಿಂದ ಅಕ್ರಮವಾಗಿ ಮರಳು ತೆಗೆದು ಮಾರಾಟ ಮಾಡುತ್ತಿದ್ದಾರೆ ಎಂದು ಆರೋಪ ವ್ಯಕ್ತಪಡಿಸಿ, ಇವರ…
ಖಾಸಗಿ ಸಂಸ್ಥೆಗಳಿಗೆ ಸಂಬಂಧಿಸಿದಂತೆ ಶಾಲಾ ಮಕ್ಕಳನ್ನು ಕರೆದುಕೊಂಡು ಹೋಗುವ ಸ್ಕೂಲ್ ಬಸ್ಗಳು ಕಾನೂನು ಮತ್ತು ನಿಯಮಗಳನ್ನು ಪಾಲಿಸುತ್ತಿದೆಯಾ ಎಂಬ ಬಗ್ಗೆ…
ಕೆಲ ದಿನಗಳಿಂದ ಸುರಿಯುತ್ತಿರುವ ಮಳೆಗೆ ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿಯಿಂದ ಹಳೇ ಸೇತುವೆ ಕಡೆಗೆ ಸಾಗುವ ದಾರಿಯ…
ಹೆಬ್ರಿ ಸಮೀಪದ ಹೊಸೂರು ಎಂಬಲ್ಲಿ ಇಸ್ಪೀಟ್ ಜೂಜಾಟ ನಡೆಸುತ್ತಿದ್ದ ಆರೋಪದಲ್ಲಿ ಏಳು ಮಂದಿಯನ್ನು ಹೆಬ್ರಿ ಪೊಲೀಸರು ಬಂಧಿಸಿದ್ದಾರೆ. ಜೂಜಾಟ ನಡೆಯುತ್ತಿರುವ…