ಕೈ ಕಾಲು ತೊಳೆಯುವ ವೇಳೆ ಕೆರೆಗೆ ಬಿದ್ದು ಕಾಲೇಜು ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ಕಾರಿಂಜದಲ್ಲಿ ನಡೆದಿದೆ.
ವಗ್ಗ ಕಾರಿಂಜ ಕ್ರಾಸ್ ನಿವಾಸಿ ಶ್ರೀಧರ್ ಮೂಲ್ಯ ಅವರ ಮಗ ಚೇತನ್ (19) ಮೃತಪಟ್ಟ ವಿದ್ಯಾರ್ಥಿ. ಕಾರಿಂಜೇಶ್ವರ ದೇವಾಲಯದ ಕೆಳಗೆ ಇರುವ ಕೆರೆಯಲ್ಲಿ ಕಾಲು ತೊಳೆಯಲು ಇಳಿದ ವೇಳೆ ಆಯತಪ್ಪಿ ಕೆರೆಗೆ ಬಿದ್ದು ಈ ದುರ್ಘಟನೆ ನಡೆದಿದೆ ಎನ್ನಲಾಗಿದೆ. ಚೇತನ್ ಪ್ರತಿ ಶನಿವಾರ ಕಾರಿಂಜ ದೇವಾಲಯಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆಯುತ್ತಿದ್ದ, ಇಂದು ಅದೇ ರೀತಿ ಸ್ನೇಹಿತ ಪ್ರಶ್ವಿತ್ನ ಜೊತೆಗೆ ದೇವಸ್ಥಾನಕ್ಕೆ ತೆರಳಿದ್ದ. ಈ ವೇಳೆ ದೇವಾಲಯದ ಕೆರೆಯಲ್ಲಿ ಕಾಲು ತೊಳೆಯಲು ಮೆಟ್ಟಿಲು ಇಳಿಯುತ್ತಿದ್ದಂತೆ ಕಾಲು ಜಾರಿ ಕೆರೆಯೊಳಗೆ ಚೇತನ್ ಬಿದ್ದಿದ್ದಾನೆ. ಜೊತೆಯಲ್ಲಿ ಇದ್ದ ಪ್ರಶ್ವಿತ್ ಗೆ ಈಜು ತಿಳಿಯದ ಕಾರಣ ಆತ ಸ್ಥಳೀಯರಿಗೆ ಪೋನ್ ಮಾಡಿದ್ದಾನೆ. ಕೂಡಲೇ ಸ್ಥಳೀಯರು ಸೇರಿದ್ದು, ಶ್ರವಣ್ ಜೈನ್ ಹಾಗೂ ಉದಯ ಎಂಬಿಬ್ಬರು ಕೆರೆಗೆ ಹಾರಿ ಹುಡುಕಲು ಆರಂಭಿಸಿ, ಚೇತನ್ ನನ್ನು ಕೆರೆಯಿಂದ ಮೇಲಕ್ಕೆ ಎತ್ತಿ ಹಾಕಿದ್ದಾರೆ, ಆದರೆ ಅದಾಗಲೇ ಚೇತನ್ ಅವರ ಪ್ರಾಣ ಪಕ್ಷಿ ಹಾರಿಹೋಗಿತ್ತು. ಬಂಟ್ವಾಳ ಗ್ರಾಮಾಂತರ ಪೋಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ.
ಬೀರತಮ್ಮನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೀರತಮ್ಮನಹಳ್ಳಿ ಕೆರೆಗೆ ಕಿಡಿಗೇಡಿಗಳು ಕ್ರಿಮಿನಾಶಕ ವಸ್ತು ಹಾಕಿದ ಪರಿಣಾಮ ಲಕ್ಷಾಂತರ ರೂಪಾಯಿ ಮೌಲ್ಯದ ಮೀನುಗಳ…
ಚರ್ಚ್ ರಸ್ತೆಯ ಹೋಲಿ ರೋಸರಿ ಚರ್ಚ್ ಎದುರು ಉದ್ಯಮಿ ಐವನ್ ರಿಚರ್ಡ್ ಮಸ್ಕರೇನಸ್ ಅವರನ್ನು ಗುಂಡಿಕ್ಕಿ ಹತ್ಯೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ…
ಉಡುಪಿ ಜಿಲ್ಲೆಯ ಕುಂದಾಪುರದಲ್ಲಿ ಬೆಳ್ಳಂಬೆಳಗ್ಗೆ ನಡೆದ ಗುಂಡಿನ ದಾಳಿಯಲ್ಲಿ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ನಡೆದಿದೆ. ಬಾರ್ಕೂರು-ಕಚ್ಚೂರು ಮೂಲದ ಐವನ್ ರಿಚರ್ಡ್…
ಬಂಟ್ವಾಳ ತಾಲೂಕಿನ ತೆಂಕಬೆಳ್ಳೂರು ಗ್ರಾಮದ ಕಾಗುಡ್ಡೆ ಎಂಬಲ್ಲಿ ರಾತ್ರಿ ಸುರಿದ ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಮನೆಯ ಚಾವಣಿ…
ಬಂಟ್ವಾಳ ತಾಲೂಕಿನ ಸಜೀಪಮೂಡ ಗ್ರಾಮದ ಕೊಳಕೆ ಎಂಬಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಸಂಭವಿಸಿದಂತಹ ಅವಘಡದಲ್ಲಿ ಮನೆಯ ಪೀಠೋಪಕರಣಗಳು ಹಾಗೂ ದಿನನಿತ್ಯ…
ವಾಷಿಂಗ್ಟನ್ ಕರ್ನಾಟಕದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಯು. ಟಿ. ಖಾದರ್ ಫರೀದ್ ಅವರ ಸಾರ್ವಜನಿಕ ಸೇವೆ…