ಉಡುಪಿ ಜಿಲ್ಲೆಯಾದ್ಯಂತ ಮುಸ್ಲಿಂ ಬಾಂಧವರು ಈದುಲ್ ಅಝಾ(ಬಕ್ರೀದ್) ಹಬ್ಬವನ್ನು ಇಂದು ಸಂಭ್ರಮ ಸಡಗರದಿಂದ ಆಚರಿಸಿದರು. ಉಡುಪಿ ನಗರ ಕಾಪು, ಬ್ರಹ್ಮಾವರ ಕುಂದಾಪುರ, ಬೈಂದೂರು ಹೆಬ್ರಿ, ಕಾರ್ಕಳ ತಾಲೂಕುಗಳ ವಿವಿಧ ಮಸೀದಿಗಳಲ್ಲಿ ವಿಶೇಷ ಈದ್ ನಮಾಝ್ ನೆರವೇರಿಸಲಾಯಿತು. ಮುಸ್ಲಿಮರು ಬೆಳಗ್ಗೆ ಹೊಸ ಬಟ್ಟೆ ಧರಿಸಿ ಮಸೀದಿಗೆ ತೆರಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು. ಕೆಲವು ಮಸೀದಿಗಳಲ್ಲಿ ಮಹಿಳೆಯರಿಗೂ ಈದ್ ನಮಾಝ್ ನಿರ್ವಹಿಸಲು ಪ್ರತ್ಯೇಕ ವ್ಯವಸ್ಥೆ ಕಲ್ಪಿಸಲಾಗಿತ್ತು. ನಮಾಝ್ ಬಳಿಕ ಪರಸ್ಪರ ಹಬ್ಬದ ಶುಭಾಶಯ ವಿನಿಮಯ ಮಾಡಿಕೊಂಡರು.
ಉಡುಪಿ ಜಾಮೀಯ ಮಸೀದಿಯಲ್ಲಿ ಮೌಲಾನಾ ಅಬ್ದುರ್ರಶೀದ್ ನದ್ವಿ ನೇತೃತ್ವದಲ್ಲಿ ಮತ್ತು ಉಡುಪಿ ಅಂಜುಮಾನ್ ಮಸೀದಿಯಲ್ಲಿ ಮೌಲಾನ ಇನಾಯುತುಲ್ಲಾ ರಝ್ವಿ ಹಾಗೂ ಬ್ರಹ್ಮಗಿರಿ ಹಾಶಿಮಿ ಮಸೀದಿಯ ಇಮಾಮ್ ಮೌಲಾನಾ ಉಬೇದಾರ್ ರೆಹಮಾನ್ ನದ್ವಿ ನೇತೃತ್ವದಲ್ಲಿ ಈದ್ ನಮಾಝ್ ನಿರ್ವಹಿಸಲಾಯಿತುಉಡುಪಿ ಜಿಲ್ಲಾ ಸಂಯುಕ್ತ ಜಮಾತಿನ ಕೇಂದ್ರ ಮಸೀದಿಯಾದ ಮೂಳೂರು ಜುಮಾ ಮಸೀದಿಯಲ್ಲಿ ಖತೀಬ್ ಹಾಫಿಲ್ ಮುಹಮ್ಮದ್ ಅಶ್ರಫ್ ಸಖಾಫಿ ನೇತೃತ್ವದಲ್ಲಿ ಈದ್ ವಿಶೇಷ ನಮಾಝ್ ಮತ್ತು ಖುತ್ಬಾ ಪಾರಾಯಣ ನಡೆಯಿತು. ಕುಂದಾಪುರ ಜುಮಾ ಮಸೀದಿಯಿಂದ ಬೆಳಗ್ಗೆ ಈದ್ ಮೆರವಣಿಗೆ ಹೊರಟು, ಕುಂದಾಪುರ ಈದ್ಗಾ ಮೈದಾನದಲ್ಲಿ ಧರ್ಮಗುರು ಮೌಲಾನ ಕರಾರ್ ಹುಸೇನ್ ನೇತೃತ್ವದಲ್ಲಿ ಈದ್ ವಿಶೇಷ ನಮಾಝ್ ನೆರವೇರಿಸಲಾಯಿತು. ಈ ಸಂದರ್ಭದಲ್ಲಿ ಧರ್ಮಗುರುಗಳು ಶಾಂತಿ, ಸೌಹಾರ್ದತೆಯ ಸಂದೇಶ ನೀಡಿದರು. ಸಾಮಾಜಿಕ ಜಾಲದಲ್ಲಿ ಬೇರೆ ಸಮಾಜದವರನ್ನು ನಿಂದಿಸುವುದು ಅಥವಾ ಅವಹೇಳನ ಮಾಡುವ ಪೋಸ್ಟ್ ಗಳನ್ನು ಹಾಕಬಾರದು ಎಂದು ಬ್ರಹ್ಮಗಿರಿ ಹಾಶಿಮಿ ಮಸೀದಿಯ ಇಮಾಮ್ ಮೌಲಾನಾ ಉಬೇದಾರ್ ರೆಹಮಾನ್ ನದ್ವಿ ಸಂದೇಶದಲ್ಲಿ ಕರೆ ನೀಡಿದ್ದಾರೆ. ಡ್ರಗ್ಸ್ ಸೇವನೆಯಿಂದ ಹಲವಾರು ಯುವಕರು ತಮ್ಮ ಭವಿಷ್ಯವನ್ನು ಹಾಳು ಮಾಡುತ್ತಿದ್ದಾರೆ. ಈ ಬಗ್ಗೆ ಹೆತ್ತವರು ತಮ್ಮ ಮಕ್ಕಳನ್ನು ಇಂತಹ ವಿಷ ಪದಾರ್ಥದಿಂದ ದೂರ ಇರಲು ಮಕ್ಕಳನ್ನು ಸಲಹೆ ನೀಡಬೇಕೆಂದು ಅವರು ಮನವಿ ಮಾಡಿದರು. ಹಬ್ಬದ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಉಡುಪಿ ಜಿಲ್ಲೆಯಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…
ಬಂಟ್ವಾಳ ಪುರಸಭೆ ವ್ಯಾಪ್ತಿಯಲ್ಲಿ ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟಿದ್ದು, ಸಾರ್ವಜನಿಕರ ಆರೋಗ್ಯ ಹಾಗೂ ಪರಿಸರದ ಮೇಲೆ ಗಂಭೀರ ಪರಿಣಾಮ ಬೀರುವ…
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…