ಜನ ಮನದ ನಾಡಿ ಮಿಡಿತ

Advertisement

ಶಿರೂರು: ಮಂಗಳೂರು ಪತ್ರಕರ್ತರಿಂದ ಪುಸ್ತಕ, ಕಲಿಕಾ ಸಾಮಾಗ್ರಿ ವಿತರಣೆ

ಕಳೆದ ವರ್ಷ ಗುಡ್ಡ ಕುಸಿದು ದುರಂತ ಘಟಿಸಿದ್ದ ಉತ್ತರ ಕನ್ನಡ ಜಿಲ್ಲೆ ಅಂಕೋಲಾ ತಾಲೂಕಿನ ಶಿರೂರಿಗೆ ಶುಕ್ರವಾರ ಭೇಟಿ ನೀಡಿದ ಪತ್ರಕರ್ತರ ಚಾರಣ ಬಳಗದ ಮಂಗಳೂರು ಇದರ ಸದಸ್ಯರು ಉಳವರೆ ಸರಕಾರಿ ಪ್ರಾಥಮಿಕ ಶಾಲಾ ಮಕ್ಕಳಿಗೆ ಪುಸ್ತಕ ಹಾಗೂ ಕಲಿಕಾ ಸಾಮಗ್ರಿಗಳನ್ನು ವಿತರಣೆ ಮಾಡಿದ್ದಾರೆ. ಇವರಿಗೆ ಕಲ್ಲೂರು ಎಜುಕೇಷನ್ ಟ್ರಸ್ಟ್ , ಯು.ಆರ್. ಫೌಂಡೇಶನ್ ಸಾಥ್ ನೀಡಿತ್ತು.

ಕಾರ್ಯಕ್ರಮದ ಮುಖ್ಯ ಅತಿಥಿಯಾಗಿದ್ದ ಕಲ್ಲೂರು ಎಜುಕೇಷನ್ ಟ್ರಸ್ಟ್ನ ವಿಠಲ್ ನಾಯಕ್ ಮಾತನಾಡಿ, ಕಳೆದ ವರ್ಷ ಶಿರೂರಿನಲ್ಲಿ ಗುಡ್ಡ ಕುಸಿತದ ಸಂದರ್ಭ ಇಲ್ಲಿಗೆ ಆಗಮಿಸಿದ್ದ ಪತ್ರಕರ್ತರು ತಮ್ಮ ಕರ್ತವ್ಯದ ಜೊತೆಗೆ ಮನೆ ಮಠ ಕಳೆದುಕೊಂಡಿದ್ದ ಸಂತ್ರಸ್ತರಿಗೆ ಆಹಾರ ಪದಾರ್ಥ ಹಾಗೂ ಅಗತ್ಯ ಸಮಾಗ್ರಿಗಳನ್ನು ವಿತರಿಸಿದ್ರು. ಈಗ ಇಲ್ಲಿನ ಶಾಲಾ ಮಕ್ಕಳಿಗೂ ಪುಸ್ತಕ, ಅಗತ್ಯ ಸಾಮಗ್ರಿಗಳನ್ನು ವಿತರಿಸಿ ಮಾದರಿಯಾಗಿದ್ದಾರೆ ಎಂದ್ರು. ಇದೇ ವೇಳೆ ಪತ್ರಕರ್ತ ಶಶಿ ಬೆಳ್ಳಾಯರು ಮಾತನಾಡಿದ್ದಾರೆ. ಇನ್ನು ಈ ಕಾರ್ಯಕ್ರಮದಲ್ಲಿ ಪತ್ರಕರ್ತ ಆರಿಫ್ ಯು.ಆರ್.ಕಲ್ಕಟ್ಟ , ಕಲ್ಲೂರು ಎಜುಕೇಷನ್ ಟ್ರಸ್ಟ್ನ ಟ್ರಸ್ಟಿ ಶ್ರೇಯಸ್ ನಾಯಕ್, ಪತ್ರಕರ್ತರಾದ ಮೋಹನ್ ಕುತ್ತಾರ್, ಶಿವು ಕಿದೂರು, ಎಚ್.ಟಿ. ಶಿವಕುಮಾರ್, ಗಿರೀಶ್ ಮಳಲಿ ಸೇರಿದಂತೆ ಅನೇಕರು ಭಾಗಿಯಾಗಿದ್ರು.

Leave a Reply

Your email address will not be published. Required fields are marked *

ಉಡುಪಿ: ಜಾನಪದ ಕಲಾವಿದ ಡಾ. ಗಣೇಶ್ ಗಂಗೊಳ್ಳಿ ಇನ್ನಿಲ್ಲ….!

ಉಡುಪಿ: ಕೆಎಸ್‌ಆರ್‌ಟಿಸಿ ಬಸ್ ಡಿ*ಕ್ಕಿ ಹೊಡೆದು ಮಹಿಳೆ ಮೃ*ತ್ಯು….!

ಸುಬ್ರಹ್ಮಣ್ಯ: ಕನ್ನಡಚಿತ್ರ ನಟ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ..!

ಮಂಗಳೂರು: ಕೌಡಿಚ್ಚಾರಿನಲ್ಲಿ ಪಿಕಪ್ ವಾಹನ ಮೋರಿಗೆ ಢಿ*ಕ್ಕಿ…!

ಮಂಗಳೂರು: ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿ*ಕ್ಕಿ; ಮಹಿಳೆಗೆ ಗಾಯ….!

ಬಂಟ್ವಾಳ: ವಸತಿಗೃಹದ ಮುಂಭಾಗದಲ್ಲಿದ್ದ ಸ್ಕೂಟರ್ ಕಳವು; ಇಬ್ಬರ ಬಂಧನ!

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

error: Content is protected !!