ಕಳೆದ ವರ್ಷ ಗುಡ್ಡ ಕುಸಿದು ದುರಂತ ಘಟಿಸಿದ್ದ ಉತ್ತರ ಕನ್ನಡ ಜಿಲ್ಲೆ ಅಂಕೋಲಾ ತಾಲೂಕಿನ ಶಿರೂರಿಗೆ ಶುಕ್ರವಾರ ಭೇಟಿ ನೀಡಿದ ಪತ್ರಕರ್ತರ ಚಾರಣ ಬಳಗದ ಮಂಗಳೂರು ಇದರ ಸದಸ್ಯರು ಉಳವರೆ ಸರಕಾರಿ ಪ್ರಾಥಮಿಕ ಶಾಲಾ ಮಕ್ಕಳಿಗೆ ಪುಸ್ತಕ ಹಾಗೂ ಕಲಿಕಾ ಸಾಮಗ್ರಿಗಳನ್ನು ವಿತರಣೆ ಮಾಡಿದ್ದಾರೆ. ಇವರಿಗೆ ಕಲ್ಲೂರು ಎಜುಕೇಷನ್ ಟ್ರಸ್ಟ್ , ಯು.ಆರ್. ಫೌಂಡೇಶನ್ ಸಾಥ್ ನೀಡಿತ್ತು.
ಕಾರ್ಯಕ್ರಮದ ಮುಖ್ಯ ಅತಿಥಿಯಾಗಿದ್ದ ಕಲ್ಲೂರು ಎಜುಕೇಷನ್ ಟ್ರಸ್ಟ್ನ ವಿಠಲ್ ನಾಯಕ್ ಮಾತನಾಡಿ, ಕಳೆದ ವರ್ಷ ಶಿರೂರಿನಲ್ಲಿ ಗುಡ್ಡ ಕುಸಿತದ ಸಂದರ್ಭ ಇಲ್ಲಿಗೆ ಆಗಮಿಸಿದ್ದ ಪತ್ರಕರ್ತರು ತಮ್ಮ ಕರ್ತವ್ಯದ ಜೊತೆಗೆ ಮನೆ ಮಠ ಕಳೆದುಕೊಂಡಿದ್ದ ಸಂತ್ರಸ್ತರಿಗೆ ಆಹಾರ ಪದಾರ್ಥ ಹಾಗೂ ಅಗತ್ಯ ಸಮಾಗ್ರಿಗಳನ್ನು ವಿತರಿಸಿದ್ರು. ಈಗ ಇಲ್ಲಿನ ಶಾಲಾ ಮಕ್ಕಳಿಗೂ ಪುಸ್ತಕ, ಅಗತ್ಯ ಸಾಮಗ್ರಿಗಳನ್ನು ವಿತರಿಸಿ ಮಾದರಿಯಾಗಿದ್ದಾರೆ ಎಂದ್ರು. ಇದೇ ವೇಳೆ ಪತ್ರಕರ್ತ ಶಶಿ ಬೆಳ್ಳಾಯರು ಮಾತನಾಡಿದ್ದಾರೆ. ಇನ್ನು ಈ ಕಾರ್ಯಕ್ರಮದಲ್ಲಿ ಪತ್ರಕರ್ತ ಆರಿಫ್ ಯು.ಆರ್.ಕಲ್ಕಟ್ಟ , ಕಲ್ಲೂರು ಎಜುಕೇಷನ್ ಟ್ರಸ್ಟ್ನ ಟ್ರಸ್ಟಿ ಶ್ರೇಯಸ್ ನಾಯಕ್, ಪತ್ರಕರ್ತರಾದ ಮೋಹನ್ ಕುತ್ತಾರ್, ಶಿವು ಕಿದೂರು, ಎಚ್.ಟಿ. ಶಿವಕುಮಾರ್, ಗಿರೀಶ್ ಮಳಲಿ ಸೇರಿದಂತೆ ಅನೇಕರು ಭಾಗಿಯಾಗಿದ್ರು.
ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ, ಜಾನಪದ ಕಲಾವಿದ ಡಾ.ಗಣೇಶ್ ಗಂಗೊಳ್ಳಿ ಅವರು ಇಂದು ನಿಧನರಾಗಿದ್ದಾರೆ. ಕಳೆದ ರಾತ್ರಿ ಸಮಾರಂಭವೊಂದರಲ್ಲಿ…
ಕೆಎಸ್ಆರ್ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರೆಸಿಡೆಂಟ್ ಕನ್ವೆನ್ಷನ್ ಹಾಲ್ ಮುಂಭಾಗ…
ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…
ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…
ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…