ಕಳೆದ ವರ್ಷ ಗುಡ್ಡ ಕುಸಿದು ದುರಂತ ಘಟಿಸಿದ್ದ ಉತ್ತರ ಕನ್ನಡ ಜಿಲ್ಲೆ ಅಂಕೋಲಾ ತಾಲೂಕಿನ ಶಿರೂರಿಗೆ ಶುಕ್ರವಾರ ಭೇಟಿ ನೀಡಿದ ಪತ್ರಕರ್ತರ ಚಾರಣ ಬಳಗದ ಮಂಗಳೂರು ಇದರ ಸದಸ್ಯರು ಉಳವರೆ ಸರಕಾರಿ ಪ್ರಾಥಮಿಕ ಶಾಲಾ ಮಕ್ಕಳಿಗೆ ಪುಸ್ತಕ ಹಾಗೂ ಕಲಿಕಾ ಸಾಮಗ್ರಿಗಳನ್ನು ವಿತರಣೆ ಮಾಡಿದ್ದಾರೆ. ಇವರಿಗೆ ಕಲ್ಲೂರು ಎಜುಕೇಷನ್ ಟ್ರಸ್ಟ್ , ಯು.ಆರ್. ಫೌಂಡೇಶನ್ ಸಾಥ್ ನೀಡಿತ್ತು.
ಕಾರ್ಯಕ್ರಮದ ಮುಖ್ಯ ಅತಿಥಿಯಾಗಿದ್ದ ಕಲ್ಲೂರು ಎಜುಕೇಷನ್ ಟ್ರಸ್ಟ್ನ ವಿಠಲ್ ನಾಯಕ್ ಮಾತನಾಡಿ, ಕಳೆದ ವರ್ಷ ಶಿರೂರಿನಲ್ಲಿ ಗುಡ್ಡ ಕುಸಿತದ ಸಂದರ್ಭ ಇಲ್ಲಿಗೆ ಆಗಮಿಸಿದ್ದ ಪತ್ರಕರ್ತರು ತಮ್ಮ ಕರ್ತವ್ಯದ ಜೊತೆಗೆ ಮನೆ ಮಠ ಕಳೆದುಕೊಂಡಿದ್ದ ಸಂತ್ರಸ್ತರಿಗೆ ಆಹಾರ ಪದಾರ್ಥ ಹಾಗೂ ಅಗತ್ಯ ಸಮಾಗ್ರಿಗಳನ್ನು ವಿತರಿಸಿದ್ರು. ಈಗ ಇಲ್ಲಿನ ಶಾಲಾ ಮಕ್ಕಳಿಗೂ ಪುಸ್ತಕ, ಅಗತ್ಯ ಸಾಮಗ್ರಿಗಳನ್ನು ವಿತರಿಸಿ ಮಾದರಿಯಾಗಿದ್ದಾರೆ ಎಂದ್ರು. ಇದೇ ವೇಳೆ ಪತ್ರಕರ್ತ ಶಶಿ ಬೆಳ್ಳಾಯರು ಮಾತನಾಡಿದ್ದಾರೆ. ಇನ್ನು ಈ ಕಾರ್ಯಕ್ರಮದಲ್ಲಿ ಪತ್ರಕರ್ತ ಆರಿಫ್ ಯು.ಆರ್.ಕಲ್ಕಟ್ಟ , ಕಲ್ಲೂರು ಎಜುಕೇಷನ್ ಟ್ರಸ್ಟ್ನ ಟ್ರಸ್ಟಿ ಶ್ರೇಯಸ್ ನಾಯಕ್, ಪತ್ರಕರ್ತರಾದ ಮೋಹನ್ ಕುತ್ತಾರ್, ಶಿವು ಕಿದೂರು, ಎಚ್.ಟಿ. ಶಿವಕುಮಾರ್, ಗಿರೀಶ್ ಮಳಲಿ ಸೇರಿದಂತೆ ಅನೇಕರು ಭಾಗಿಯಾಗಿದ್ರು.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ಹಿಂದೂ ವಿರೋಧಿ ಬೆಳವಣಿಗೆಗಳನ್ನು ಖಂಡಿಸಿ ಉಡುಪಿ ಜಿಲ್ಲೆಯ ಸಮಸ್ತ ಹಿಂದೂ ಸಂಘಟನೆಗಳ ಒಕ್ಕೂಟ…
ಮಂಗಳೂರಿನಿಂದ ಜಮ್ಮು ಕತ್ರಾಕ್ಕೆ ಸಂಚರಿಸುತ್ತಿದ್ದ ನವಯುಗ ಎಕ್ಸ್ಪ್ರೆಸ್ ರೈಲು ಸ್ಥಗಿತಗೊಂಡು ಐದು ವರ್ಷಗಳಾಗಿವೆ. ಈ ಹಿನ್ನೆಲೆಯಲ್ಲಿ ರೈಲು ಸೇವೆಯನ್ನು ಪುನರಾರಂಭಿಸುವಂತೆ…
ತುಳುನಾಡಿನ ಯುವಕರು ಹಿಂದು - ಮುಸ್ಲಿಂ ಎಂದು ಬಿಸಿ ಬಿಸಿ ವಾಗ್ವಾದದಲ್ಲಿ ತೊಡಗಿದ್ದರೆ, ಕುಪ್ಪೆಪದವು ಗ್ರಾಮ ಪಂಚಾಯತ್ ಮುಂಭಾಗ ಮಂಜೂರಾದ…
ಮಂಗಳೂರು ನಗರದ ಅತ್ಯಂತ ವಾಹನ ದಟ್ಟನೆಯ ಪ್ರದೇಶವಾದ ನಂತೂರು ಜಂಕ್ಷನ್ನಲ್ಲಿ ವಾಹನಗಳಿಗೆ ಫ್ರೀ ಲೆಫ್ಟ್ ಅಂದರೆ ಎಡಭಾಗದಲ್ಲಿ ತಿರುವು ತೆಗೆದುಕೊಂಡು…
ಮಾನವೀಯತೆಯಿಂದ ಮಾತ್ರ ಸಮಾಜದಲ್ಲಿ ಶಾಂತಿ ಸೌಹಾರ್ದತೆ ನೆಲೆಸಲು ಸಾಧ್ಯ ಎಂದು ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಎನ್.ಸಂತೋಷ್ ಹೆಗ್ಡೆ ಹೇಳಿದ್ದಾರೆ. ಜಯಶ್ರೀಕೃಷ್ಣ…
ಸಾಲು ಸಾಲು ದುರಂತ ಸಂಭವಿಸಿದರು ಪ್ರವಾಸಿಗರು ಮಾತ್ರ ಎಚ್ಚೆತ್ತೊಕೊಳ್ಳುತ್ತಿಲ್ಲ. ಅಪಾಯದ ಎಚ್ಚರಿಕೆ ಕೊಟ್ರೂ ಡೊಂಟ್ ಕೇರ್ ಎನ್ನದ ಪ್ರವಾಸಿಗರು ಹುಚ್ಚಾಟ…