ಕಳೆದ ವರ್ಷ ಗುಡ್ಡ ಕುಸಿದು ದುರಂತ ಘಟಿಸಿದ್ದ ಉತ್ತರ ಕನ್ನಡ ಜಿಲ್ಲೆ ಅಂಕೋಲಾ ತಾಲೂಕಿನ ಶಿರೂರಿಗೆ ಶುಕ್ರವಾರ ಭೇಟಿ ನೀಡಿದ ಪತ್ರಕರ್ತರ ಚಾರಣ ಬಳಗದ ಮಂಗಳೂರು ಇದರ ಸದಸ್ಯರು ಉಳವರೆ ಸರಕಾರಿ ಪ್ರಾಥಮಿಕ ಶಾಲಾ ಮಕ್ಕಳಿಗೆ ಪುಸ್ತಕ ಹಾಗೂ ಕಲಿಕಾ ಸಾಮಗ್ರಿಗಳನ್ನು ವಿತರಣೆ ಮಾಡಿದ್ದಾರೆ. ಇವರಿಗೆ ಕಲ್ಲೂರು ಎಜುಕೇಷನ್ ಟ್ರಸ್ಟ್ , ಯು.ಆರ್. ಫೌಂಡೇಶನ್ ಸಾಥ್ ನೀಡಿತ್ತು.
ಕಾರ್ಯಕ್ರಮದ ಮುಖ್ಯ ಅತಿಥಿಯಾಗಿದ್ದ ಕಲ್ಲೂರು ಎಜುಕೇಷನ್ ಟ್ರಸ್ಟ್ನ ವಿಠಲ್ ನಾಯಕ್ ಮಾತನಾಡಿ, ಕಳೆದ ವರ್ಷ ಶಿರೂರಿನಲ್ಲಿ ಗುಡ್ಡ ಕುಸಿತದ ಸಂದರ್ಭ ಇಲ್ಲಿಗೆ ಆಗಮಿಸಿದ್ದ ಪತ್ರಕರ್ತರು ತಮ್ಮ ಕರ್ತವ್ಯದ ಜೊತೆಗೆ ಮನೆ ಮಠ ಕಳೆದುಕೊಂಡಿದ್ದ ಸಂತ್ರಸ್ತರಿಗೆ ಆಹಾರ ಪದಾರ್ಥ ಹಾಗೂ ಅಗತ್ಯ ಸಮಾಗ್ರಿಗಳನ್ನು ವಿತರಿಸಿದ್ರು. ಈಗ ಇಲ್ಲಿನ ಶಾಲಾ ಮಕ್ಕಳಿಗೂ ಪುಸ್ತಕ, ಅಗತ್ಯ ಸಾಮಗ್ರಿಗಳನ್ನು ವಿತರಿಸಿ ಮಾದರಿಯಾಗಿದ್ದಾರೆ ಎಂದ್ರು. ಇದೇ ವೇಳೆ ಪತ್ರಕರ್ತ ಶಶಿ ಬೆಳ್ಳಾಯರು ಮಾತನಾಡಿದ್ದಾರೆ. ಇನ್ನು ಈ ಕಾರ್ಯಕ್ರಮದಲ್ಲಿ ಪತ್ರಕರ್ತ ಆರಿಫ್ ಯು.ಆರ್.ಕಲ್ಕಟ್ಟ , ಕಲ್ಲೂರು ಎಜುಕೇಷನ್ ಟ್ರಸ್ಟ್ನ ಟ್ರಸ್ಟಿ ಶ್ರೇಯಸ್ ನಾಯಕ್, ಪತ್ರಕರ್ತರಾದ ಮೋಹನ್ ಕುತ್ತಾರ್, ಶಿವು ಕಿದೂರು, ಎಚ್.ಟಿ. ಶಿವಕುಮಾರ್, ಗಿರೀಶ್ ಮಳಲಿ ಸೇರಿದಂತೆ ಅನೇಕರು ಭಾಗಿಯಾಗಿದ್ರು.
ನೆರೆಮನೆಯ ದನಗಳು ತನ್ನ ತೋಟಕ್ಕೆ ಬಂದು ಹಾನಿಗೊಳಿಸಿವೆ ಎಂಬ ಆಕ್ರೋಶದಿಂದ ಹಟ್ಟಿಯಲ್ಲಿ ಕಟ್ಟಿಹಾಕಿದ್ದ ದನಗಳಿಗೆ ಕತ್ತಿಯಿಂದ ಕಡಿದು ಹಲ್ಲೆ ನಡೆಸಿ…
ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನಿಸಿದ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಮಂಗಳೂರು ದಕ್ಷಿಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಿಷೇಧಿತ ಮಾದಕ…
ಪುರಸಭಾ ವ್ಯಾಪ್ತಿಯ ಪಾಣೆಮಂಗಳೂರು ಎಂಬಲ್ಲಿ ನೇತ್ರಾವತಿ ನದಿಯಿಂದ ಅಕ್ರಮವಾಗಿ ಮರಳು ತೆಗೆದು ಮಾರಾಟ ಮಾಡುತ್ತಿದ್ದಾರೆ ಎಂದು ಆರೋಪ ವ್ಯಕ್ತಪಡಿಸಿ, ಇವರ…
ಖಾಸಗಿ ಸಂಸ್ಥೆಗಳಿಗೆ ಸಂಬಂಧಿಸಿದಂತೆ ಶಾಲಾ ಮಕ್ಕಳನ್ನು ಕರೆದುಕೊಂಡು ಹೋಗುವ ಸ್ಕೂಲ್ ಬಸ್ಗಳು ಕಾನೂನು ಮತ್ತು ನಿಯಮಗಳನ್ನು ಪಾಲಿಸುತ್ತಿದೆಯಾ ಎಂಬ ಬಗ್ಗೆ…
ಕೆಲ ದಿನಗಳಿಂದ ಸುರಿಯುತ್ತಿರುವ ಮಳೆಗೆ ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿಯಿಂದ ಹಳೇ ಸೇತುವೆ ಕಡೆಗೆ ಸಾಗುವ ದಾರಿಯ…
ಹೆಬ್ರಿ ಸಮೀಪದ ಹೊಸೂರು ಎಂಬಲ್ಲಿ ಇಸ್ಪೀಟ್ ಜೂಜಾಟ ನಡೆಸುತ್ತಿದ್ದ ಆರೋಪದಲ್ಲಿ ಏಳು ಮಂದಿಯನ್ನು ಹೆಬ್ರಿ ಪೊಲೀಸರು ಬಂಧಿಸಿದ್ದಾರೆ. ಜೂಜಾಟ ನಡೆಯುತ್ತಿರುವ…