ಕಳೆದ ವರ್ಷ ಗುಡ್ಡ ಕುಸಿದು ದುರಂತ ಘಟಿಸಿದ್ದ ಉತ್ತರ ಕನ್ನಡ ಜಿಲ್ಲೆ ಅಂಕೋಲಾ ತಾಲೂಕಿನ ಶಿರೂರಿಗೆ ಶುಕ್ರವಾರ ಭೇಟಿ ನೀಡಿದ ಪತ್ರಕರ್ತರ ಚಾರಣ ಬಳಗದ ಮಂಗಳೂರು ಇದರ ಸದಸ್ಯರು ಉಳವರೆ ಸರಕಾರಿ ಪ್ರಾಥಮಿಕ ಶಾಲಾ ಮಕ್ಕಳಿಗೆ ಪುಸ್ತಕ ಹಾಗೂ ಕಲಿಕಾ ಸಾಮಗ್ರಿಗಳನ್ನು ವಿತರಣೆ ಮಾಡಿದ್ದಾರೆ. ಇವರಿಗೆ ಕಲ್ಲೂರು ಎಜುಕೇಷನ್ ಟ್ರಸ್ಟ್ , ಯು.ಆರ್. ಫೌಂಡೇಶನ್ ಸಾಥ್ ನೀಡಿತ್ತು.
ಕಾರ್ಯಕ್ರಮದ ಮುಖ್ಯ ಅತಿಥಿಯಾಗಿದ್ದ ಕಲ್ಲೂರು ಎಜುಕೇಷನ್ ಟ್ರಸ್ಟ್ನ ವಿಠಲ್ ನಾಯಕ್ ಮಾತನಾಡಿ, ಕಳೆದ ವರ್ಷ ಶಿರೂರಿನಲ್ಲಿ ಗುಡ್ಡ ಕುಸಿತದ ಸಂದರ್ಭ ಇಲ್ಲಿಗೆ ಆಗಮಿಸಿದ್ದ ಪತ್ರಕರ್ತರು ತಮ್ಮ ಕರ್ತವ್ಯದ ಜೊತೆಗೆ ಮನೆ ಮಠ ಕಳೆದುಕೊಂಡಿದ್ದ ಸಂತ್ರಸ್ತರಿಗೆ ಆಹಾರ ಪದಾರ್ಥ ಹಾಗೂ ಅಗತ್ಯ ಸಮಾಗ್ರಿಗಳನ್ನು ವಿತರಿಸಿದ್ರು. ಈಗ ಇಲ್ಲಿನ ಶಾಲಾ ಮಕ್ಕಳಿಗೂ ಪುಸ್ತಕ, ಅಗತ್ಯ ಸಾಮಗ್ರಿಗಳನ್ನು ವಿತರಿಸಿ ಮಾದರಿಯಾಗಿದ್ದಾರೆ ಎಂದ್ರು. ಇದೇ ವೇಳೆ ಪತ್ರಕರ್ತ ಶಶಿ ಬೆಳ್ಳಾಯರು ಮಾತನಾಡಿದ್ದಾರೆ. ಇನ್ನು ಈ ಕಾರ್ಯಕ್ರಮದಲ್ಲಿ ಪತ್ರಕರ್ತ ಆರಿಫ್ ಯು.ಆರ್.ಕಲ್ಕಟ್ಟ , ಕಲ್ಲೂರು ಎಜುಕೇಷನ್ ಟ್ರಸ್ಟ್ನ ಟ್ರಸ್ಟಿ ಶ್ರೇಯಸ್ ನಾಯಕ್, ಪತ್ರಕರ್ತರಾದ ಮೋಹನ್ ಕುತ್ತಾರ್, ಶಿವು ಕಿದೂರು, ಎಚ್.ಟಿ. ಶಿವಕುಮಾರ್, ಗಿರೀಶ್ ಮಳಲಿ ಸೇರಿದಂತೆ ಅನೇಕರು ಭಾಗಿಯಾಗಿದ್ರು.
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…
ಬಂಟ್ವಾಳ ಪುರಸಭೆ ವ್ಯಾಪ್ತಿಯಲ್ಲಿ ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟಿದ್ದು, ಸಾರ್ವಜನಿಕರ ಆರೋಗ್ಯ ಹಾಗೂ ಪರಿಸರದ ಮೇಲೆ ಗಂಭೀರ ಪರಿಣಾಮ ಬೀರುವ…
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…