ಜನ ಮನದ ನಾಡಿ ಮಿಡಿತ

ಮಂಗಳೂರು: ಕಾಲ್ತುಳಿತ ಪ್ರಕರಣವನ್ನ ಖಂಡಿಸಿ, ಮಂಗಳೂರಿನಲ್ಲಿ ದ.ಕ. ಜಿಲ್ಲಾ ಬಿಜೆಪಿಯಿಂದ ಪ್ರತಿಬಟನೆ

ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ನಡೆದ ಕಾಲ್ತುಳಿತದಲ್ಲಿ 11 ಮಂದಿ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್, ಗೃಹಸಚಿವ ಡಾ. ಜಿ.ಪರಮೇಶ್ವರರು ರಾಜೀನಾಮೆ ನೀಡಬೇಕು. ಪ್ರಕರಣದ ಬಗ್ಗೆ ನಿವೃತ್ತ ನ್ಯಾಯಾಧೀಶರ ಮೂಲಕ ಸಮಗ್ರ ತನಿಖೆ ನಡೆಸಬೇಕು ಎಂದು ಆಗ್ರಹಿಸಿ ನಗರದಲ್ಲಿ ದ.ಕ ಜಿಲ್ಲಾ ಬಿಜೆಪಿ ಪ್ರತಿಭಟನೆ ನಡೆಸಿದೆ.

ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಅವರು, ಕಾಂಗ್ರೆಸ್ ಸರಕಾರಕ್ಕೆ ಶಾಂತಿ ಸುವ್ಯವಸ್ಥೆ ಕಾಪಾಡುವ, ಆಡಳಿತ ನಡೆಸುವ ಸಾಮರ್ಥ್ಯವಿಲ್ಲ. ಆಡಳಿತ ವೈಫಲ್ಯಕ್ಕೆ ಕಾಲ್ತುಳಿತ ಘಟನೆಯೂ ಉದಾಹರಣೆಯಾಗಿದೆ. ಸಿಎಂ, ಡಿಸಿಎಂ, ಸಚಿವರ ಮನೆಯವರಿಗೆ ಮೋಜು ಮಸ್ತಿ, ಸೆಲ್ಪಿಗಾಗಿ ತರಾತುರಿಯಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು ಎಂದು ಆಪಾದಿಸಿದ್ದಾರೆ. ಇನ್ನು ಈ ಪ್ರತಿಭಟನೆಯಲ್ಲಿ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಪ್ರೇಮಾನಂದ ಶೆಟ್ಟಿ, ಯತೀಶ್ ಆಳ್ವ, ಉಪಾಧ್ಯಕ್ಷ ರವೀಂದ್ರ ಶೆಟ್ಟಿ ಉಳಿದೊಟ್ಟು, ಯುವ ಮೋರ್ಚಾ ಜಿಲ್ಲಾಧ್ಯಕ್ಷ ನಂದನ್ ಮಲ್ಯ ಸೇರಿದಂತೆ ಹಲವರು ಭಾಗಿಯಾಗಿದ್ರು.

Leave a Reply

Your email address will not be published. Required fields are marked *

ಉಡುಪಿ: ಮಾನವೀಯತೆಯಿಂದ ಸಮಾಜದಲ್ಲಿ ಶಾಂತಿ ಸೌಹಾರ್ದತೆ ನೆಲೆಸಲು ಸಾಧ್ಯ ; ನ್ಯಾ.ಸಂತೋಷ್ ಹೆಗ್ಡೆ

ಉಡುಪಿ: ಮರವಂತೆ ಬೀಚ್‌ನಲ್ಲಿ ತಪ್ಪಿದ ಬಾರೀ ದುರಂತ; ಐವರ ರಕ್ಷಣೆ

ಸುಬ್ರಹ್ಮಣ್ಯ: ಗುಂಡ್ಯ ಹೊಳೆಯಲ್ಲಿ ನೀರಲ್ಲಿ ಮುಳುಗಿ ಚೇತನ್ ಮೃತ್ಯು…!!

ಮೈಸೂರು: ಮೋದಿ ಬದುಕಿರುವುದು ಪ್ರಚಾರದಿಂದ; ಸಿಎಂ ಸಿದ್ದರಾಮಯ್ಯ

ಮಂಗಳೂರು: ಕೇಂದ್ರ ಸರ್ಕಾರಕ್ಕೆ ಧನ್ಯವಾದಗಳು ಎಂದ ಸುಹಾಸ್ ಶೆಟ್ಟಿ ತಾಯಿ

ಮಂಗಳೂರು: ಹೃದಯಾಘಾತದಿಂದ ನಿಧನ ಹೊಂದಿದ ಯಕ್ಷಗಾನ ಕಲಾವಿದ..!!

ಮಂಗಳೂರು: ಎನ್‌ಐಗೆ ಸುಹಾಸ್ ಪ್ರಕರಣ ;ಸತ್ಯಾಂಶಗಳು ಹೊರಬೀಳಲಿವೆ..?

ಕಾರ್ಕಳ: ಉದಯ ಕುಮಾರ್ ಮುನಿಯಾಲು ಹುಟ್ಟುಹಬ್ಬದ ಪ್ರಯುಕ್ತ ಬೃಹತ್ ರಕ್ತದಾನ ಶಿಬಿರ

ಕಡಬ: ರೈಲ್ವೇ ಟ್ರಾಕ್‌ನಲ್ಲಿ ಅಣ್ಣನಿಗೆ ಪೆಟ್ರೋಲ್ ಸುರಿದ ತಮ್ಮ..??!

error: Content is protected !!