ಎಮ್ಮೆಕೆರೆ ಈಜುಕೊಳದಲ್ಲಿ ರಾಷ್ಟç ಅಂತಾರಾಷ್ಟ್ರೀಯ ಈಜು ಪಟುಗಳಿಗೆ ಪ್ರವೇಶ ಉಚಿತವಾಗಿಯೇ ನೀಡಲಾಗುತ್ತದೆ. ಈಜುಕೊಳದಲ್ಲಿ ಉತ್ತಮ ಗುಣಮಟ್ಟದ ತರಬೇತಿಗಾಗಿ ಎನ್.ಐ.ಎಸ್. ಶಿಕ್ಷಣ ಹೊಂದಿರುವ ವಿಶ್ವಾಮಿತ್ರ ಪ್ರಶಸ್ತಿ ಪಡೆದ ತರಬೇತುದಾರರನ್ನು ನೇಮಕ ಮಾಡಲಾಗಿದ್ದು, ಆ ಹಿನ್ನೆಲೆಯಲ್ಲಿ ತರಬೇತಿಗೆ ಮಾತ್ರ ಈ ಈಜುಪಟುಗಳಿಂದ ಶುಲ್ಕ ಪಡೆಯಲಾಗುತ್ತದೆ ಎಂದು ಎಮ್ಮೆಕೆರೆ ಈಜುಕೊಳದ ನಿರ್ದೇಶಕ ನವೀನ್ ಪ್ರತಿಕ್ರಿಯಿಸಿದ್ದಾರೆ.
ಇವರು ಎಮ್ಮೆಕೆರೆ ಈಜುಕೊಳದ ಕುರಿತಂತೆ ದ.ಕ. ಈಜು ಸಂಸ್ಥೆಯು ಮಾಡಿರುವ ಆರೋಪಕ್ಕೆ ಮಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಪ್ರತಿಕ್ರಿಯೆ ನೀಡಿ, ಈಜುಕೊಳದಲ್ಲಿ ಸಾರ್ವಜನಿಕರಿಗೆ, ಮಕ್ಕಳಿಗೆ ಹಾಗೂ ಕ್ರೀಡಾಪಟುಗಳಿಗೆ ಪ್ರವೇಶಕ್ಕೆ ಅವಕಾಶವಿದೆ. ಒಟ್ಟು 80 ಮಂದಿ ಈಜುಪಟುಗಳು ಎಮ್ಮೆಕೆರೆಯಲ್ಲಿ ಸದ್ಯ ತರಬೇತು ಪಡೆಯುತ್ತಿದ್ದಾರೆ. ಈಜು ಗೊತ್ತಿಲ್ಲದ ವರಿಗೆ ಈಜು ಕಲಿಸಲು ಹಾಗೂ ಕ್ರೀಡಾಪಟುಗಳಿಗೆ ತರಬೇತಿ ನೀಡುವ ಉದ್ದೇಶದಿಂದ ಲೆವೆಲ್ 1ರಿಂದ ಲೆವೆಲ್ 7ರವರೆಗೆ ತರಬೇತಿ ನೀಡುವ ಎನ್ಐಎಸ್ ತರಬೇತುದಾರರನ್ನು ನಿಯೋಜಿಸಲಾಗಿದೆ ಎನ್ನುತ್ತಾ ಕೆಲ ವಿಚಾರಗಳನ್ನು ಬಿಚ್ಚಿಟ್ಟಿದ್ದಾರೆ. ಇನ್ನು ಈ ಸುದ್ದಿಗೋಷ್ಟಿಯಲ್ಲಿ ವಿವಿಧ ಸ್ವಿಮ್ಮಿಂಗ್ ಕ್ಲಬ್ಗಳ ಪ್ರಮುಖರಾದ ರಾಮಕೃಷ್ಣ ಡಾ. ನಾಗೇಂದ್ರ, ಲೋಕರಾಜ್ ವಿಟ್ಲ ರೂಪಾ ಜಿ. ಪ್ರಭು, ಇವಾ ಉಪಸ್ಥಿತರಿದ್ರು.
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…
ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ (ರಿ) ದುಬೈ ಘಟಕದ ನಾಲ್ಕನೇ ವರ್ಷದ ದುಬೈ "ಗಡಿನಾಡ ಉತ್ಸವ -2025" ಕಾರ್ಯಕ್ರಮವು ನಗರದ…
ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿದ ಕಾರ್ಯಕ್ರಮದಲ್ಲಿ ನೂಕು ನುಗ್ಗಲು ಉಂಟಾಗಿ 11ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು…
ಪ್ರತೀ ಕಲಾವಿದರ ಕುಟುಂಬದೊಂದಿಗೆ ಅವರ ಕಷ್ಟ ಸುಖದಲ್ಲಿ ಇರುವಂತಹ ವಾತಾವರಣ ನಿರ್ಮಿಸಬೇಕು. ಕಲಾವಿದರ ಸಂಘಟನಾತ್ಮಕ ಬಲವನ್ನು ಹೆಚ್ಚಿಸುವ ಕೆಲಸವಾಗಲು ಎಲ್ಲರ…