ಎಮ್ಮೆಕೆರೆ ಈಜುಕೊಳದಲ್ಲಿ ರಾಷ್ಟç ಅಂತಾರಾಷ್ಟ್ರೀಯ ಈಜು ಪಟುಗಳಿಗೆ ಪ್ರವೇಶ ಉಚಿತವಾಗಿಯೇ ನೀಡಲಾಗುತ್ತದೆ. ಈಜುಕೊಳದಲ್ಲಿ ಉತ್ತಮ ಗುಣಮಟ್ಟದ ತರಬೇತಿಗಾಗಿ ಎನ್.ಐ.ಎಸ್. ಶಿಕ್ಷಣ ಹೊಂದಿರುವ ವಿಶ್ವಾಮಿತ್ರ ಪ್ರಶಸ್ತಿ ಪಡೆದ ತರಬೇತುದಾರರನ್ನು ನೇಮಕ ಮಾಡಲಾಗಿದ್ದು, ಆ ಹಿನ್ನೆಲೆಯಲ್ಲಿ ತರಬೇತಿಗೆ ಮಾತ್ರ ಈ ಈಜುಪಟುಗಳಿಂದ ಶುಲ್ಕ ಪಡೆಯಲಾಗುತ್ತದೆ ಎಂದು ಎಮ್ಮೆಕೆರೆ ಈಜುಕೊಳದ ನಿರ್ದೇಶಕ ನವೀನ್ ಪ್ರತಿಕ್ರಿಯಿಸಿದ್ದಾರೆ.
ಇವರು ಎಮ್ಮೆಕೆರೆ ಈಜುಕೊಳದ ಕುರಿತಂತೆ ದ.ಕ. ಈಜು ಸಂಸ್ಥೆಯು ಮಾಡಿರುವ ಆರೋಪಕ್ಕೆ ಮಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಪ್ರತಿಕ್ರಿಯೆ ನೀಡಿ, ಈಜುಕೊಳದಲ್ಲಿ ಸಾರ್ವಜನಿಕರಿಗೆ, ಮಕ್ಕಳಿಗೆ ಹಾಗೂ ಕ್ರೀಡಾಪಟುಗಳಿಗೆ ಪ್ರವೇಶಕ್ಕೆ ಅವಕಾಶವಿದೆ. ಒಟ್ಟು 80 ಮಂದಿ ಈಜುಪಟುಗಳು ಎಮ್ಮೆಕೆರೆಯಲ್ಲಿ ಸದ್ಯ ತರಬೇತು ಪಡೆಯುತ್ತಿದ್ದಾರೆ. ಈಜು ಗೊತ್ತಿಲ್ಲದ ವರಿಗೆ ಈಜು ಕಲಿಸಲು ಹಾಗೂ ಕ್ರೀಡಾಪಟುಗಳಿಗೆ ತರಬೇತಿ ನೀಡುವ ಉದ್ದೇಶದಿಂದ ಲೆವೆಲ್ 1ರಿಂದ ಲೆವೆಲ್ 7ರವರೆಗೆ ತರಬೇತಿ ನೀಡುವ ಎನ್ಐಎಸ್ ತರಬೇತುದಾರರನ್ನು ನಿಯೋಜಿಸಲಾಗಿದೆ ಎನ್ನುತ್ತಾ ಕೆಲ ವಿಚಾರಗಳನ್ನು ಬಿಚ್ಚಿಟ್ಟಿದ್ದಾರೆ. ಇನ್ನು ಈ ಸುದ್ದಿಗೋಷ್ಟಿಯಲ್ಲಿ ವಿವಿಧ ಸ್ವಿಮ್ಮಿಂಗ್ ಕ್ಲಬ್ಗಳ ಪ್ರಮುಖರಾದ ರಾಮಕೃಷ್ಣ ಡಾ. ನಾಗೇಂದ್ರ, ಲೋಕರಾಜ್ ವಿಟ್ಲ ರೂಪಾ ಜಿ. ಪ್ರಭು, ಇವಾ ಉಪಸ್ಥಿತರಿದ್ರು.
ನೆರೆಮನೆಯ ದನಗಳು ತನ್ನ ತೋಟಕ್ಕೆ ಬಂದು ಹಾನಿಗೊಳಿಸಿವೆ ಎಂಬ ಆಕ್ರೋಶದಿಂದ ಹಟ್ಟಿಯಲ್ಲಿ ಕಟ್ಟಿಹಾಕಿದ್ದ ದನಗಳಿಗೆ ಕತ್ತಿಯಿಂದ ಕಡಿದು ಹಲ್ಲೆ ನಡೆಸಿ…
ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನಿಸಿದ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಮಂಗಳೂರು ದಕ್ಷಿಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಿಷೇಧಿತ ಮಾದಕ…
ಪುರಸಭಾ ವ್ಯಾಪ್ತಿಯ ಪಾಣೆಮಂಗಳೂರು ಎಂಬಲ್ಲಿ ನೇತ್ರಾವತಿ ನದಿಯಿಂದ ಅಕ್ರಮವಾಗಿ ಮರಳು ತೆಗೆದು ಮಾರಾಟ ಮಾಡುತ್ತಿದ್ದಾರೆ ಎಂದು ಆರೋಪ ವ್ಯಕ್ತಪಡಿಸಿ, ಇವರ…
ಖಾಸಗಿ ಸಂಸ್ಥೆಗಳಿಗೆ ಸಂಬಂಧಿಸಿದಂತೆ ಶಾಲಾ ಮಕ್ಕಳನ್ನು ಕರೆದುಕೊಂಡು ಹೋಗುವ ಸ್ಕೂಲ್ ಬಸ್ಗಳು ಕಾನೂನು ಮತ್ತು ನಿಯಮಗಳನ್ನು ಪಾಲಿಸುತ್ತಿದೆಯಾ ಎಂಬ ಬಗ್ಗೆ…
ಕೆಲ ದಿನಗಳಿಂದ ಸುರಿಯುತ್ತಿರುವ ಮಳೆಗೆ ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿಯಿಂದ ಹಳೇ ಸೇತುವೆ ಕಡೆಗೆ ಸಾಗುವ ದಾರಿಯ…
ಹೆಬ್ರಿ ಸಮೀಪದ ಹೊಸೂರು ಎಂಬಲ್ಲಿ ಇಸ್ಪೀಟ್ ಜೂಜಾಟ ನಡೆಸುತ್ತಿದ್ದ ಆರೋಪದಲ್ಲಿ ಏಳು ಮಂದಿಯನ್ನು ಹೆಬ್ರಿ ಪೊಲೀಸರು ಬಂಧಿಸಿದ್ದಾರೆ. ಜೂಜಾಟ ನಡೆಯುತ್ತಿರುವ…