ಇತರೆ

ಮುಲ್ಕಿ: ಸದನದಲ್ಲಿ ಬಿಜೆಪಿ ಶಾಸಕರ ಅಮಾನತು ಸರಿಯಾದ ಕ್ರಮ: ಬಿಜೆಪಿ ಶಾಸಕರ ಅಮಾನತು ಬಗ್ಗೆ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್

ಮುಲ್ಕಿ: ರಾಜ್ಯ ಗಣಿ ವಿಜ್ಞಾನ ಮತ್ತು ತೋಟಗಾರಿಕಾ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ರವರು ಮುಲ್ಕಿ ಇತಿಹಾಸ ಪ್ರಸಿದ್ಧ ಬಪ್ಪನಾಡು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ಭೇಟಿ ನೀಡಿದರು.

ಕ್ಷೇತ್ರದ ಅರ್ಚಕ ಶ್ರೀಪತಿ ಉಪಾಧ್ಯಾಯ ಶ್ರೀ ದೇವರಿಗೆ ವಿಶೇಷ ಪ್ರಾರ್ಥನೆ ಸಲ್ಲಿಸಿ ಸಚಿವರಿಗೆ ಪ್ರಸಾದ ನೀಡಿ ಗೌರವಿಸಿದರು. ಈ ಸಂದರ್ಭ ಮಾಧ್ಯಮದವರು ಬಿಜೆಪಿ ಶಾಸಕರನ್ನು ಸದನದಿಂದ ಅನರ್ಹಗೊಳಿಸಿದ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿ ಸದನದಲ್ಲಿ ಬಾವಿಗಿಳಿದು ಪ್ರತಿಭಟನೆ ನಡೆಸಿದ ಬಿಜೆಪಿ ಶಾಸಕರನ್ನು ಸದನದಿಂದ ಅಮಾನತುಗೊಳಿಸಿರುವುದು ಸರಿಯಾದ ಕ್ರಮ. ಕಾನೂನಿಗೆ ಯಾರೂ ಅತೀತರಲ್ಲ ಎಂದು ಸರಕಾರದ ನಡೆಯನ್ನು ಸಮರ್ಥಿಸಿಕೊಂಡರು. ಗಲಾಟೆ ಮಾಡಿದ ಯಾರೇ ಅದರೂ ಶಿಕ್ಷೆಗೆ ಅರ್ಹರು. ರೀತಿ ರಿವಾಜುಗಳಂತೆ ನಡೆದುಕೊಳ್ಳಬೇಕು. ಅದನ್ನೂ ಮೀರಿದರೆ ಅಮಾನತು ಸಹಜ ಎಂದವರು ಹೇಳಿದರು. ಸರಕಾರದ 5 ಗ್ಯಾರಂಟಿಗಳು ಜನಮೆಚ್ಚುಗೆಗಳಿಸಿದೆ. ಬರುವ ದಿನಗಳಲ್ಲಿ ಸರಕಾರ ತೋಟಗಾರಿಕೆ ಹಾಗೂ ಕೃಷಿಗೆ ಹೆಚ್ಚಿನ ಪ್ರೋತ್ಸಾಹ ನೀಡುತ್ತಿದ್ದು ಅಭಿವೃದ್ಧಿ ಕಾರ್ಯಕ್ರಮಗಳು ನಡೆಯಲಿದೆ. ಅಕ್ರಮ ಮರಳುಗಾರಿಕೆ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು ಈ ಬಗ್ಗೆ ಕಾನೂನು ಬಿಗಿಗೊಳಿಸಲು ಅಧಿಕಾರಿಗಳಿಗೆ ತಾವು ಸೂಚಿಸಿದ್ದಾಗಿ ಹೇಳಿದರು. ಕ್ಷೇತ್ರದ ಆಡಳಿತ ಮೊಕ್ತೇಸರ ಎನ್.ಎಸ್.ಮನೋಹರ ಶೆಟ್ಟಿ, ಕ.ಸಾ.ಪ.ಮಾಜೀ ರಾಜ್ಯಾಧ್ಯಕ್ಷ ಡಾ.ಹರಿಕೃಷ್ಣ ಪುನರೂರು ಮುಖ್ಯ ಕಾರ್ಯನಿಹಣಾಧಿಕಾರಿ ಜಯಮ್ಮ ಪಿ., ತೋಟಗಾರಿಕಾ ಇಲಾಖಾ ಅಧಿಕಾರಿ ಕೆ.ಪ್ರವೀಣ್, ನ ಪಂ ಸದಸ್ಯ ಬಾಲಚಂದ್ರ ಕಾಮತ್, ಉಪಸ್ಥಿತರಿದ್ದರು.

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ಬಂಟ್ವಾಳ: ಬಿಸಿಯೂಟ ಸಿಬ್ಬಂದಿಯ ಕೈ ತುರಿಮಣೆಯಲ್ಲಿ ಸಿಲುಕಿ ಅವಘಡ; ಸಮಯಪ್ರಜ್ಞೆ ಮೆರೆದ 5ನೇ ತರಗತಿ ಬಾಲಕ

ಬಿಸಿಯೂಟದ ಸಿಬ್ಬಂದಿಯೊಬ್ಬರ ಕೈ ವಿದ್ಯುತ್ ಚಾಲಿತ ತುರಿಮಣೆಯಲ್ಲಿ ಸಿಲುಕಿಕೊಂಡ ಸಂದರ್ಭದಲ್ಲಿ ಸಮಯಪ್ರಜ್ಞೆ ಮೆರೆದ ನರಿಕೊಂಬು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ…

1 day ago

ಮಂಗಳೂರು: ಕೆಪಿಟಿ ಸಿಗ್ನಲ್ ಬಳಿ ಭಾರೀ ಗುಂಡಿ; ಅಪಾಯದಂಚಿನಲ್ಲಿ ವಾಹನ ಸವಾರರು

ನಗರದ ಕೆಪಿಟಿ ಸಿಗ್ನಲ್ ಸಮೀಪ ರಸ್ತೆಯ ಮಧ್ಯಭಾಗದಲ್ಲೇ ಭಾರೀ ಗುಂಡಿಯೊಂದು ನಿರ್ಮಾಣವಾಗಿದ್ದು, ವಾಹನ ಸವಾರರಿಗೆ ಅಪಾಯ ಎದುರಾಗಿದೆ. ಈ ಮಾರ್ಗದಲ್ಲಿ…

1 day ago

ಬಂಟ್ವಾಳ: ನರಹರಿ ಪರ್ವತ ಶ್ರೀ ಸದಾಶಿವ ದೇವಸ್ಥಾನದಲ್ಲಿ ಆಟಿ ಅಮಾವಾಸ್ಯೆ ವಿಶೇಷ ತೀರ್ಥಸ್ನಾನ

ಆಟಿ ಅಮಾವಾಸ್ಯೆಯ ಪವಿತ್ರ ದಿನದಂದು ಬಂಟ್ವಾಳ ತಾಲೂಕಿನ ಐತಿಹಾಸಿಕ ಹಾಗೂ ಪೌರಾಣಿಕ ಪ್ರಸಿದ್ಧಿಯ ನರಹರಿ ಪರ್ವತ ಶ್ರೀ ಸದಾಶಿವ ದೇವಸ್ಥಾನದಲ್ಲಿ…

1 day ago

ಬಂಟ್ವಾಳ: ಬಿ.ಸಿ.ರೋಡಿನಲ್ಲಿ ಸಾರ್ವಜನಿಕ ಪಾಲೆದ ಕೆತ್ತೆ ಕಷಾಯ ವಿತರಣೆ

ತುಳುಕೂಟ ಬಂಟ್ವಾಳ ಹಾಗೂ ಶ್ರೀ ರಕ್ತೇಶ್ವರಿ ದೇವಿ ದೇವಸ್ಥಾನ, ಬಿ.ಸಿ.ರೋಡು ಇದರ ಆಡಳಿತ ಮಂಡಳಿಯ ಆಶ್ರಯದಲ್ಲಿ ವರ್ಷಂಪ್ರತಿ ನಡೆಯುವ ಆಟಿ…

1 day ago

ಬಂಟ್ವಾಳ: ದಕ್ಷಿಣ ಕನ್ನಡದ ತಾಲೂಕು ಕಚೇರಿಗಳಲ್ಲಿ ಲೋಕಾಯುಕ್ತ ಅಧಿಕಾರಿಗಳ ಪರಿಶೀಲನೆ

ಲೋಕಾಯುಕ್ತದಲ್ಲಿ ದಾಖಲಾಗಿರುವ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಮೇಲಾಧಿಕಾರಿಗಳ ನಿರ್ದೇಶನದ ಮೇರೆಗೆ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ತಾಲೂಕು ಕಚೇರಿಗಳಿಗೆ ಲೋಕಾಯುಕ್ತ ಅಧಿಕಾರಿಗಳು…

1 day ago

ಬಂಟ್ವಾಳ: ಕಾರಿಂಜ ಶ್ರೀ ಕಾರಿಂಜೇಶ್ವರ ದೇವಸ್ಥಾನದಲ್ಲಿ ಆಟಿ ಅಮಾವಾಸ್ಯೆ ಸಂಭ್ರಮ

ಆಟಿ ಅಮಾವಾಸ್ಯೆಯ ಪ್ರಯುಕ್ತ ತಾಲೂಕಿನ ಪ್ರಸಿದ್ಧ ಕಾರಿಂಜ ಶ್ರೀ ಕಾರಿಂಜೇಶ್ವರ ದೇವಸ್ಥಾನದಲ್ಲಿ ಬುಧವಾರ ಶ್ರದ್ಧಾಭಕ್ತಿ ಹಾಗೂ ಸಂಭ್ರಮದಿಂದ ವಿವಿಧ ಧಾರ್ಮಿಕ…

1 day ago