ಹುಟ್ಟುತ್ತಾ ಅಣ್ಣತಮ್ಮಂದಿರು ಬೆಳೆಯುತ್ತಾ ದಾಯಾದಿಗಳು ಎಂಬ ಮಾತು ಈ ಪ್ರಕರಣದಲ್ಲಿ ನಿಜವಾಗಿ ಬಿಟ್ಟಿದೆ. ರೈಲ್ವೇ ಟ್ರಾಕ್ನಲ್ಲಿ ಅಣ್ಣನನ್ನು ತಮ್ಮನೇ ಬೆನ್ನಟ್ಟಿ ಮೈಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಕೊಲೆಗೆ ಯತ್ನಿಸಿದ ಘಟನೆ ಕೋಡಿಂಬಾಳದ ಕೊರಿಯರ್ ಬಳಿ ನಡೆದಿದೆ. ಗಂಭೀರ ಸುಟ್ಟ ಗಾಯದೊಂದಿಗೆ ಆಸ್ಪತ್ರೆಗೆ ದಾಖಲಾದ ಯುವಕನನ್ನು 45ರ ಪ್ರಾಯದ ಹನುಮಂತಯ್ಯ ಎಂದು ಗುರುತಿಸಲಾಗಿದೆ.
ಗದಗ ಮೂಲದ ಅಣ್ಣ ತಮ್ಮಂದಿರು ಪುತ್ತೂರಿನಲ್ಲಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ. ಜೂ.8ರ ಮದ್ಯಾಹ್ನದ ಮಂಗಳೂರು- ಬೆಂಗಳೂರು ರೈಲು ಮಾರ್ಗದಲ್ಲಿ ಸಂಚರಿಸುವ ಪ್ಯಾಸೆಂಜರ್ ರೈಲಿನಲ್ಲಿ ಬಂದು ಬಜಕರೆ ರೈಲು ನಿಲ್ದಾಣದಲ್ಲಿ ಇಬ್ಬರು ಇಳಿದಿದ್ದಾರೆ. ರೈಲು ಹೋದ ಬಳಿಕ ಸುಮಾರು 500_ಮೀ ಮುಂದಕ್ಕೆ ಕರೆದುಕೊಂಡು ಬಂದು ತಮ್ಮ ನಿಂಗಪ್ಪ ಎಂಬಾತ ಏಕಾಎಕಿ ತನ್ನ ಕೈಯಲ್ಲಿದ್ದ ಪೆಟ್ರೋಲನ್ನು ಅಣ್ಣನ ಮೇಲೆ ಎರಚಿ ಬೆಂಕಿ ಹಚ್ಚಿರುವುದಾಗಿ ಹೇಳಲಾಗಿದೆ. ಬೆಂಕಿಯಲ್ಲಿ ಹೊತ್ತಿ ಉರಿಯುತ್ತಿದ್ದ ಗಾಯಾಳು ಪಕ್ಕದಲ್ಲೇ ಇದ್ದ ಚರಂಡಿ ನೀರಿಗೆ ಜಿಗಿದ ಕಾರಣ ಬೆಂಕಿ ನಂದಿದೆ. ಭಾರೀ ಕಿರುಚಾಟ ಕೇಳಿ ಬಂದ ಹಿನ್ನಲೆ ಸ್ಥಳೀಯರು ಹೋಗಿ ಗಮನಿಸಿದಾಗ ಗಂಭೀರ ಸ್ಥಿತಿಯಲ್ಲಿ ಇರುವುದು ಕಂಡು ಬಂದಿದೆ. ಕೂಡಲೇ ಗಾಯಾಳುವನ್ನು ಕಡಬ ಸಮುದಾಯ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆಗಾಗಿ ದಾಖಲಿಸಿ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ಕರೆದೊಯ್ಯಲಾಗಿದೆ. ಘಟನಾ ಸ್ಥಳಕ್ಕೆ ತೆರಳಿದ ಕಡಬ ಪೊಲೀಸರು ಬೆಂಕಿ ಹಚ್ಚಿರುವ ತಮ್ಮ ಲಿಂಗಪ್ಪ ಎಂಬಾತನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ರೈಲೇ ಹಳಿಯಲ್ಲಿ ಈ ಘಟನೆ ನಡೆದಿರುವುದರಿಂದ ಪೊಲೀಸರು ರೈಲ್ವೇ ಇಲಾಖೆಗೆ ಹಸ್ತಾಂತರ ಮಾಡುವ ಸಾಧ್ಯತೆ ಇದೆ.
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…
ಬಂಟ್ವಾಳ ಪುರಸಭೆ ವ್ಯಾಪ್ತಿಯಲ್ಲಿ ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟಿದ್ದು, ಸಾರ್ವಜನಿಕರ ಆರೋಗ್ಯ ಹಾಗೂ ಪರಿಸರದ ಮೇಲೆ ಗಂಭೀರ ಪರಿಣಾಮ ಬೀರುವ…
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…