ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಬಜ್ಪೆಯ ಕಿನ್ನಿಪದವು ಎಂಬಲ್ಲಿ ಮೇ 1, 2025 ರಂದು ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿಯನ್ನು ದುಷ್ಕರ್ಮಿಗಳು ಬರ್ಬರವಾಗಿ ತಲವಾರಿನಿಂದ ಕೊಚ್ಚಿ ಕೊಲೆಗೈದಿದ್ರು. ಈ ಘಟನೆಯು ಕರಾವಳಿ ಭಾಗದಲ್ಲಿ ಭಾರೀ ಕೋಮು ಉದ್ವಿಗ್ನತೆಗೆ ಕಾರಣವಾಗಿತ್ತು. ಈ ಪ್ರಕರಣದ ತನಿಖೆಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆಗೆ ವಹಿಸಲು ಕೇಂದ್ರ ಗೃಹ ಸಚಿವಾಲಯ ಆದೇಶಿಸಿದೆ.
ಈ ನಿರ್ಧಾರಕ್ಕೆ ಸುಹಾಸ್ ಶೆಟ್ಟಿಯವರ ತಾಯಿ ಸುಲೋಚನಾ ಅವರು ಕೇಂದ್ರ ಸರ್ಕಾರಕ್ಕೆ ಧನ್ಯವಾದ ಸಲ್ಲಿಸಿದ್ದಾರೆ. ಇದೇ ವೇಳೆ ಸುಹಾಸ್ ಶೆಟ್ಟಿಯವರ ತಾಯಿ ಸುಲೋಚನಾ ಅವರು, ತಮ್ಮ ಮಗನ ಕೊಲೆಯ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. “ನನ್ನ ಮಗನನ್ನು ಚಿತ್ರಹಿಂಸೆಗೊಳಪಡಿಸಿ, ಭೀಕರವಾಗಿ ಕೊಲೆ ಮಾಡಲಾಗಿದೆ. ಆತ ಬಜರಂಗದಳ ಕಾರ್ಯಕರ್ತನಾಗಿದ್ದ ಕಾರಣಕ್ಕೆ ಈ ಕೃತ್ಯ ನಡೆದಿದೆ. ಕರ್ನಾಟಕ ಸರ್ಕಾರದ ಮೇಲೆ ನಮಗೆ ಯಾವುದೇ ನಂಬಿಕೆ ಇರಲಿಲ್ಲ. ರಾಜ್ಯ ಸರ್ಕಾರದ ಯಾವುದೇ ನಾಯಕರು ನಮ್ಮ ಮನೆಗೆ ಭೇಟಿ ನೀಡಿಲ್ಲ, ಏನಾಯಿತು ಎಂದು ವಿಚಾರಿಸಿಲ್ಲ. ಅವರು ಕೇವಲ ಮುಸ್ಲಿಂ ಸಮುದಾಯದವರೊಂದಿಗೆ ಸಭೆಗಳನ್ನು ನಡೆಸಿ ಹೋಗುತ್ತಿದ್ದರು. ಇದರಿಂದ ಸರ್ಕಾರ ಅವರ ಪರವಾಗಿದೆ ಎಂದು ಅನಿಸುತ್ತಿತ್ತು,” ಎಂದು ಸುಲೋಚನಾ ಅವರು ಆರೋಪಿಸಿದ್ದಾರೆ.
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ್ಯರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್ನಲ್ಲಿ ಖಾಸಗಿ ಬಸ್ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…
ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕ ಕಳ್ಳತನ ಪ್ರಕರಣದಲ್ಲೂ ಭಾಗಿಯಾಗಿದ್ದು, ಈತನನ್ನು ಪೊಲೀಸರು ಬಂಧಿಸಿದ್ದಾರೆ. ಪೌಜಾನ್…