ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಬಜ್ಪೆಯ ಕಿನ್ನಿಪದವು ಎಂಬಲ್ಲಿ ಮೇ 1, 2025 ರಂದು ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿಯನ್ನು ದುಷ್ಕರ್ಮಿಗಳು ಬರ್ಬರವಾಗಿ ತಲವಾರಿನಿಂದ ಕೊಚ್ಚಿ ಕೊಲೆಗೈದಿದ್ರು. ಈ ಘಟನೆಯು ಕರಾವಳಿ ಭಾಗದಲ್ಲಿ ಭಾರೀ ಕೋಮು ಉದ್ವಿಗ್ನತೆಗೆ ಕಾರಣವಾಗಿತ್ತು. ಈ ಪ್ರಕರಣದ ತನಿಖೆಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆಗೆ ವಹಿಸಲು ಕೇಂದ್ರ ಗೃಹ ಸಚಿವಾಲಯ ಆದೇಶಿಸಿದೆ.
ಈ ನಿರ್ಧಾರಕ್ಕೆ ಸುಹಾಸ್ ಶೆಟ್ಟಿಯವರ ತಾಯಿ ಸುಲೋಚನಾ ಅವರು ಕೇಂದ್ರ ಸರ್ಕಾರಕ್ಕೆ ಧನ್ಯವಾದ ಸಲ್ಲಿಸಿದ್ದಾರೆ. ಇದೇ ವೇಳೆ ಸುಹಾಸ್ ಶೆಟ್ಟಿಯವರ ತಾಯಿ ಸುಲೋಚನಾ ಅವರು, ತಮ್ಮ ಮಗನ ಕೊಲೆಯ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. “ನನ್ನ ಮಗನನ್ನು ಚಿತ್ರಹಿಂಸೆಗೊಳಪಡಿಸಿ, ಭೀಕರವಾಗಿ ಕೊಲೆ ಮಾಡಲಾಗಿದೆ. ಆತ ಬಜರಂಗದಳ ಕಾರ್ಯಕರ್ತನಾಗಿದ್ದ ಕಾರಣಕ್ಕೆ ಈ ಕೃತ್ಯ ನಡೆದಿದೆ. ಕರ್ನಾಟಕ ಸರ್ಕಾರದ ಮೇಲೆ ನಮಗೆ ಯಾವುದೇ ನಂಬಿಕೆ ಇರಲಿಲ್ಲ. ರಾಜ್ಯ ಸರ್ಕಾರದ ಯಾವುದೇ ನಾಯಕರು ನಮ್ಮ ಮನೆಗೆ ಭೇಟಿ ನೀಡಿಲ್ಲ, ಏನಾಯಿತು ಎಂದು ವಿಚಾರಿಸಿಲ್ಲ. ಅವರು ಕೇವಲ ಮುಸ್ಲಿಂ ಸಮುದಾಯದವರೊಂದಿಗೆ ಸಭೆಗಳನ್ನು ನಡೆಸಿ ಹೋಗುತ್ತಿದ್ದರು. ಇದರಿಂದ ಸರ್ಕಾರ ಅವರ ಪರವಾಗಿದೆ ಎಂದು ಅನಿಸುತ್ತಿತ್ತು,” ಎಂದು ಸುಲೋಚನಾ ಅವರು ಆರೋಪಿಸಿದ್ದಾರೆ.
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…
ಪೊಲೀಸ್ ಇಲಾಖೆಯ ನಿಜವಾದ ಕರ್ತವ್ಯನಿಷ್ಠೆ, ಸಮಯಪ್ರಜ್ಞೆ ಮತ್ತು ಮಾನವೀಯತೆಯ ಅಪರೂಪದ ಉದಾಹರಣೆಯೊಂದು ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪದಲ್ಲಿ ನಡೆದ ಅಪಘಾತದ…
ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೂಡಬಿದರೆಯ ಮಿಜಾರು ಕೊಪ್ಪದಕುಮೇರಿಯಲ್ಲಿ ಸಂಜೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ…
ನಿಯಂತ್ರಣ ತಪ್ಪಿದ ಟಿಪ್ಪರ್ ಲಾರಿಯೊಂದು ರಸ್ತೆ ಬದಿಯ ಮರವೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಂಭೀರ ಗಾಯಗೊಂಡ ಘಟನೆ ವಿಟ್ಲ…
ಶುಕ್ರವಾರ ಸಂಜೆ ಬೀಸಿದ ಬಿರುಗಾಳಿ ಮಳೆಗೆ ರಾಷ್ಟ್ರೀಯ ಹೆದ್ದಾರಿ ಮಾಣಿ ಬೊಳ್ಳುಕಲ್ಲಿನಿಂದ ಪೆರಾಜೆ ಶ್ರೀ ರಾಮಚಂದ್ರಾಪುರ ಮಠಕ್ಕೆ ಹೋಗುವ ಕಮಲ…