ಇತರೆ

ಮಂಗಳೂರು: ನಂತೂರ್ ಜಂಕ್ಷನ್‌ನಲ್ಲಿ ಮೂರು ದಿಕ್ಕುಗಳಲ್ಲಿ ಎಡಭಾಗಗಳು ಸಿಗ್ನಲ್‌ನಿಂದ ಮುಕ್ತ

ಮಂಗಳೂರು ನಗರದ ಅತ್ಯಂತ ವಾಹನ ದಟ್ಟನೆಯ ಪ್ರದೇಶವಾದ ನಂತೂರು ಜಂಕ್ಷನ್‌ನಲ್ಲಿ ವಾಹನಗಳಿಗೆ ಫ್ರೀ ಲೆಫ್ಟ್ ಅಂದರೆ ಎಡಭಾಗದಲ್ಲಿ ತಿರುವು ತೆಗೆದುಕೊಂಡು ಚಲಿಸುವ ವಾಹನಗಳಿಗೆ ಮುಕ್ತ ಎಡಭಾಗವನ್ನು ಕಲ್ಪಿಸಲಾಗಿದೆ. ಈ ಸಂಬ0ಧಿತ ಕಾಮಗಾರಿಯನ್ನು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ಪೂರ್ಣಗೊಳಿಸಿದೆ.

ನಂತೂರು ಜಂಕ್ಷನ್ನಿನ ಮೂರು ದಿಕ್ಕುಗಳಲ್ಲಿ ಎಡಭಾಗವನ್ನು ಸಿಗ್ನಲ್‌ನಿಂದ ಮುಕ್ತಗೊಳಿಸಿ ವಾಹನಗಳ ಮುಕ್ತ ಚಲನೆಗೆ ಅವಕಾಶ ಮಾಡಿಕೊಡಲಾಗಿದೆ. ನಂತೂರು ಜಂಕ್ಷನ್ನಿನಲ್ಲಿ ಕದ್ರಿ ಮಲ್ಲಿಕಟ್ಟೆಯಿಂದ ಸುರತ್ಕಲ್ ಗೆ ಸಾಗುವ ರಸ್ತೆಯ ಎಡ ಭಾಗದಲ್ಲಿ ಮುಕ್ತ ವಾಹನ ಸಂಚಾರಕ್ಕೆ ಈ ಮೊದಲೇ ಅವಕಾಶ ಒದಗಿಸಲಾಗಿತ್ತು. ಕೊಚ್ಚಿ-ಪನ್ವೇಲ್ ರಾಷ್ಟ್ರೀಯ ಹೆದ್ದಾರಿ 66,ಮತ್ತು ಮಂಗಳೂರು-ಬೆ0ಗಳೂರು ರಾಷ್ಟ್ರೀಯ 75 ಹಾಗು ಮಂಗಳೂರು-ಮಡಿಕೇರಿ ಟ್ರಂಕ್ ರಸ್ತೆ ಅಂದರೆ ಕದ್ರಿಯಿಂದ ಬರುವ ರಸ್ತೆ ಸೇರುವ ನಂತೂರು ಜಂಕ್ಷನ್ ನಲ್ಲಿ ಬೆಳಿಗ್ಗೆ ಮತ್ತು ಸಂಜೆಯ ವೇಳೆ ತೀವ್ರವಾದ ವಾಹನ ದಟ್ಟಣೆ ಇರುತ್ತದೆ. ಇಲ್ಲಿ ರಸ್ತೆಯನ್ನು ಅಗಲಗೊಳಿಸಬೇಕು ಎಂಬ ಬೇಡಿಕೆ ಅನೇಕ ವರ್ಷಗಳಿಂದ ಇತ್ತು. ಆದರೆ ನ್ಯಾಯಾಲಯದಲ್ಲಿ ಪ್ರಕರಣಗಳು ಇದ್ದುದರಿಂದ ರಸ್ತೆ ವಿಸ್ತರಣೆಗೆ ಅಡ್ಡಿಯಾಗಿತ್ತು. ಈಗ ಅವು ಪರಿಹಾರವಾಗಿವೆ.

ದಕ್ಷಿಣ ಕನ್ನಡ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಈ ವೃತ್ತದಲ್ಲಿ ವಾಹನ ಸಂಚಾರವನ್ನು ಸುಗಮಗೊಳಿಸಲು ಎಡಭಾಗದಲ್ಲಿ ಮುಕ್ತ ವಾಹನ ಸಂಚಾರಕ್ಕೆ ಅವಕಾಶ ಮಾಡಿಕೊಡುವಂತೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವನ್ನು ಕೋರಿದ್ದರು. ಅಲ್ಲಿದ್ದ ಹೊಂಡಗಳನ್ನು, ಬಿರುಕುಗಳನ್ನು ಮುಚ್ಚಿ ವಾಹನಗಳ ಸುಗಮ ಸಂಚಾರಕ್ಕೆ ತಡೆಯಾಗುವ ಎಲ್ಲ ಸಮಸ್ಯೆಗಳನ್ನು ಪರಿಹರಿಸಬೇಕು ಎಂದು ಸೂಚಿಸಿದ್ದರು. ವೃತ್ತದಲಿದ್ದ ಹೊಂಡಗಳಿ0ದ ಇಲ್ಲಿ ವಾಹನ ಸಂಚಾರ ನಿಧಾನಗೊಳ್ಳುತ್ತಿತ್ತು. ಒಂದು ವಾರದಿಂದ ಮಳೆ ಬಿಡುವು ನೀಡಿರುವುದರಿಂದ ಕಾಮಗಾರಿಯನ್ನು ಕೈಗೆತ್ತಿಕೊಂಡ ಹೆದ್ದಾರಿ ಪ್ರಾಧಿಕಾರ ಶನಿವಾರದಂದು ಎಡ ಮುಕ್ತ ಸಂಚಾರಕ್ಕೆ ಅವಶ್ಯವಾದ ರಸ್ತೆಯ ಕಾಮಗಾರಿಯನ್ನು ಪೂರ್ಣಗೊಳಿಸಿದೆ. ಇದರಿಂದಾಗಿ ಸುರತ್ಕಲ್ ಭಾಗದಿಂದ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಬರುವ ವಾಹನಗಳು ನಂತೂರು ಜಂಕ್ಷನ್ನಿನಲ್ಲಿ ಸುಲಭವಾಗಿ ಎಡಕ್ಕೆ ತಿರುವು ತೆಗೆದುಕೊಂಡು ಬಿ.ಸಿ.ರಸ್ತೆ, ಕಡೆಗೆ ಸಂಚರಿಸಬಹುದಾಗಿದೆ. ಬಿ.ಸಿ.ರಸ್ತೆ ಕಡೆಯಿಂದ ಬರುವ ವಾಹನಗಳು ಈ ಜಂಕ್ಷನ್ನಿನಲ್ಲಿ ಎಡಕ್ಕೆ ತಿರುವು ಪಡೆದುಕೊಂಡು ಪಂಪ್ ವೆಲ್ ಕಡೆಗೆ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಸಾಗಬಹುದಾಗಿದೆ. ಮತ್ತು ಪಂಪ್ ವೆಲ್ ಕಡೆಯಿಂದ ಬರುವ ವಾಹನಗಳು ಕದ್ರಿ ಮಲ್ಲಿಕಟ್ಟೆಗೆ ಮುಕ್ತವಾಗಿ ಸಾಗಬಹುದಾಗಿದೆ. ಮುಗ್ರೋಡಿ ಕನ್ಸ್ಟ್ರಕ್ಷನ್ ಸಂಸ್ಥೆಯ ಮೂಲಕ ಈ ರಸ್ತೆಗಳಿಗೆ ಬಿಟುಮನ್ ಅಂದರೆ ಡಾಮಾರ್ ಮೇಲ್ಪದರವನ್ನು ಇಲಾಖೆ ಒದಗಿಸಿದೆ. ನಂತೂರು ಜಂಕ್ಷನ್ನಿನ ಎಲ್ಲಾ ನಾಲ್ಕು ಕಡೆಗಳಲ್ಲಿ ಮುಕ್ತ ಎಡ ಸಂಚಾರವನ್ನು ಒದಗಿಸಿರುವುದರಿಂದ ನಿರ್ದಿಷ್ಟವಾಗಿ ಬೆಳಿಗ್ಗೆ ಮತ್ತು ಸಂಜೆ ಈ ವೃತ್ತ ಎದುರಿಸುತ್ತಿದ್ದ ವಾಹನ ದಟ್ಟಣೆ ಮತ್ತು ಸಂಚಾರ ಅವ್ಯವಸ್ಥೆಗೆ ಕಡಿವಾಣ ಬೀಳುವ ನಿರೀಕ್ಷೆ ಇದೆ.

ಅಭಿಮತ ಟಿವಿ

Abhimatha TV is a trusted channel renowned for its dedication to honest journalism and its unwavering commitment to showcasing the rich culture, heritage, and traditions of Tulunadu. With a focus on delivering unbiased news and promoting the region's vibrant art forms, rituals, and cultural events, Abhimatha TV has become a beacon of authenticity and pride for the community. Established in 2018, the channel was founded by Mamatha P. Shetty (Managing Partner) and Kanyana Sadhashiva Shetty (Chief Promoter) with a mission to provide truthful reporting and celebrate the essence of our heritage.

Recent Posts

ಉಡುಪಿ: ಜಿಲ್ಲಾಧಿಕಾರಿಗಳಿಂದ ಪೂರ್ವಾನುಮತಿ ಪಡೆದ್ರೂ ಡಿಸಿ ಗೈರು

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ಹಿಂದೂ ವಿರೋಧಿ ಬೆಳವಣಿಗೆಗಳನ್ನು ಖಂಡಿಸಿ ಉಡುಪಿ ಜಿಲ್ಲೆಯ ಸಮಸ್ತ ಹಿಂದೂ ಸಂಘಟನೆಗಳ ಒಕ್ಕೂಟ…

3 hours ago

ಮಂಗಳೂರು: ನವಯುಗ ಎಕ್ಸ್ಪ್ರೆಸ್ ಪುನರಾರಂಭಕ್ಕೆ ಆಗ್ರಹ

ಮಂಗಳೂರಿನಿಂದ ಜಮ್ಮು ಕತ್ರಾಕ್ಕೆ ಸಂಚರಿಸುತ್ತಿದ್ದ ನವಯುಗ ಎಕ್ಸ್ಪ್ರೆಸ್ ರೈಲು ಸ್ಥಗಿತಗೊಂಡು ಐದು ವರ್ಷಗಳಾಗಿವೆ. ಈ ಹಿನ್ನೆಲೆಯಲ್ಲಿ ರೈಲು ಸೇವೆಯನ್ನು ಪುನರಾರಂಭಿಸುವಂತೆ…

3 hours ago

ಮಂಗಳೂರು: ಇದು ಕಂಡ್ರೋ ನಿಜವಾದ ಹಿಂದೂ-ಮುಸ್ಲಿಂ ಬಾಂಧವ್ಯ

ತುಳುನಾಡಿನ ಯುವಕರು ಹಿಂದು - ಮುಸ್ಲಿಂ ಎಂದು ಬಿಸಿ ಬಿಸಿ ವಾಗ್ವಾದದಲ್ಲಿ ತೊಡಗಿದ್ದರೆ, ಕುಪ್ಪೆಪದವು ಗ್ರಾಮ ಪಂಚಾಯತ್ ಮುಂಭಾಗ ಮಂಜೂರಾದ…

3 hours ago

ಉಡುಪಿ: ಮಾನವೀಯತೆಯಿಂದ ಸಮಾಜದಲ್ಲಿ ಶಾಂತಿ ಸೌಹಾರ್ದತೆ ನೆಲೆಸಲು ಸಾಧ್ಯ ; ನ್ಯಾ.ಸಂತೋಷ್ ಹೆಗ್ಡೆ

ಮಾನವೀಯತೆಯಿಂದ ಮಾತ್ರ ಸಮಾಜದಲ್ಲಿ ಶಾಂತಿ ಸೌಹಾರ್ದತೆ ನೆಲೆಸಲು ಸಾಧ್ಯ ಎಂದು ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಎನ್.ಸಂತೋಷ್ ಹೆಗ್ಡೆ ಹೇಳಿದ್ದಾರೆ. ಜಯಶ್ರೀಕೃಷ್ಣ…

6 hours ago

ಉಡುಪಿ: ಮರವಂತೆ ಬೀಚ್‌ನಲ್ಲಿ ತಪ್ಪಿದ ಬಾರೀ ದುರಂತ; ಐವರ ರಕ್ಷಣೆ

ಸಾಲು ಸಾಲು ದುರಂತ ಸಂಭವಿಸಿದರು ಪ್ರವಾಸಿಗರು ಮಾತ್ರ ಎಚ್ಚೆತ್ತೊಕೊಳ್ಳುತ್ತಿಲ್ಲ. ಅಪಾಯದ ಎಚ್ಚರಿಕೆ ಕೊಟ್ರೂ ಡೊಂಟ್ ಕೇರ್ ಎನ್ನದ ಪ್ರವಾಸಿಗರು ಹುಚ್ಚಾಟ…

6 hours ago

ಸುಬ್ರಹ್ಮಣ್ಯ: ಗುಂಡ್ಯ ಹೊಳೆಯಲ್ಲಿ ನೀರಲ್ಲಿ ಮುಳುಗಿ ಚೇತನ್ ಮೃತ್ಯು…!!

ನದಿ ನೀರಲ್ಲಿ ಮುಳುಗಿ ಯುವಕನೋರ್ವ ಮೃತಪಟ್ಟ ಘಟನೆ ಕಡಬ ತಾಲೂಕಿನ ಇಚ್ಲಂಪಾಡಿಯಲ್ಲಿ ಸಂಭವಿಸಿದೆ. ಇಚ್ಲಂಪಾಡಿ ಗ್ರಾಮದ ಕೆಡೆಂಬೇಲು ನಿವಾಸಿ ಜಯಾನಂದ…

6 hours ago