ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ಹಿಂದೂ ವಿರೋಧಿ ಬೆಳವಣಿಗೆಗಳನ್ನು ಖಂಡಿಸಿ ಉಡುಪಿ ಜಿಲ್ಲೆಯ ಸಮಸ್ತ ಹಿಂದೂ ಸಂಘಟನೆಗಳ ಒಕ್ಕೂಟ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿತು. ಹಿಂದೂ ಕಾರ್ಯಕರ್ತರನ್ನು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರು ಕೆಟ್ಟದಾಗಿ ನಡೆಸಿಕೊಳ್ಳುತ್ತಿದ್ದಾರೆ, ಅವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಒಕ್ಕೂಟ ಒತ್ತಾಯಿಸಿತು.
ಜಿಲ್ಲಾಧಿಕಾರಿಗಳಿಂದ ಪೂರ್ವಾನುಮತಿ ಪಡೆದು ಮನವಿ ನೀಡಲು ಬಂದಾಗಲೂ ಉಡುಪಿ ಡಿಸಿ ಗೈರು ಹಾಜರಾಗಿದ್ದ ಬಗ್ಗೆ ಒಕ್ಕೂಟದ ಸದಸ್ಯರು ಆಕ್ರೋಶ ವ್ಯಕ್ತಪಡಿಸಿದ್ರು. ಹಿಂದೂ ಕಾರ್ಯಕರ್ತರ ಖಾಸಗಿ ಜೀವನದ ವ್ಯಕ್ತಿತ್ವದ ಗೌರವವನ್ನು, ಘನತೆಯನ್ನು ಹಾಳು ಮಾಡಲಾಗುತ್ತಿದೆ. ಕೋಮು ಸೌಹಾರ್ದ ನೆಪದಲ್ಲಿ ಹಿಂದೂ ಕಾರ್ಯಕರ್ತರನ್ನು ಗುರಿಯಾಗಿಸಿ ಮಾನವ ಹಕ್ಕುಗಳ ಉಲ್ಲಂಘನೆ ಮಾಡುತ್ತಿದ್ದಾರೆ ಎಂದು ದೂರಿದರು. ಮಧ್ಯರಾತ್ರಿ ಕಾರ್ಯಕರ್ತರ ಮನೆಗೆ ತೆರಳಿ ವಿಚಾರಣೆ ನಡೆಸುವುದು ಫೋಟೋ ತೆಗೆಯುವುದು ಸರಿಯಲ್ಲ. ಸಾಮಾಜಿಕ ಜಾಲತಾಣಗಳಲ್ಲಿ ಏನೇ ಬರೆದರು ಹಿಂದೂ ಕಾರ್ಯಕರ್ತರನ್ನು ಬಂಧನ ಮಾಡಲಾಗುತ್ತಿದೆ ಎಂದು ಅಕ್ಷೇಪಿಸಿದ್ದಾರೆ. ಮಾನವ ಹಕ್ಕುಗಳ ಉಲ್ಲಂಘನೆ ವಿಷಯದಲ್ಲಿ ಉನ್ನತ ಮಠದ ತನಿಖೆ ಆಗಬೇಕು, ಪೊಲೀಸರಿಂದ ಕಿರುಕುಳಕ್ಕೆ ಒಳಗಾದ ಹಿರಿಯ ನಾಗರಿಕರಿಗೆ ಪರಿಹಾರ ನೀಡಿ ಪೊಲೀಸರು ಲಿಖಿತ ಕ್ಷಮಾಪಣೆ ಕೇಳಬೇಕು ಎಂದು ಒತ್ತಾಯಿಸಿದ್ರು.
ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ, ಜಾನಪದ ಕಲಾವಿದ ಡಾ.ಗಣೇಶ್ ಗಂಗೊಳ್ಳಿ ಅವರು ಇಂದು ನಿಧನರಾಗಿದ್ದಾರೆ. ಕಳೆದ ರಾತ್ರಿ ಸಮಾರಂಭವೊಂದರಲ್ಲಿ…
ಕೆಎಸ್ಆರ್ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರೆಸಿಡೆಂಟ್ ಕನ್ವೆನ್ಷನ್ ಹಾಲ್ ಮುಂಭಾಗ…
ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…
ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…
ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…