ಅಂತರರಾಷ್ಟ್ರೀಯ ಬೂಕರ್ ಪ್ರಶಸ್ತಿ ವಿಜೇತೆ ಮಡಿಕೇರಿಯ ಲೇಖಕಿ ದೀಪಾ ಭಾಸ್ತಿ ಅವರನ್ನು ಮಂಗಳೂರು ವಿಶ್ವವಿದ್ಯಾನಿಲಯ ಕುಲಪತಿ ಪಿ ಎಲ್ ಧರ್ಮ ಮಡಿಕೇರಿಯ ನಿವಾಸದಲ್ಲಿ ಭೇಟಿ ಮಾಡಿ ಅಭಿನಂದಿಸಿದರು. ಮಡಿಕೇರಿ ನಗರದಲ್ಲಿರುವ ದೀಪಾಭಾಸ್ತಿ ಅವರ ಮನೆಗೆ ಭೇಟಿ ನೀಡಿದ ಕುಲಪತಿ ದೀಪಾ ಭಾಸ್ತಿ ಹಾಗು ಮನೆಯವರೊಡನೆ ಮಾತನಾಡಿ 2004 ರಿಂದ 2006 ರವರೆಗೆ ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಪತ್ರಿಕೋದ್ಯಮ ವಿಭಾಗದಲ್ಲಿ ವ್ಯಾಸಂಗ ಮಾಡಿದ ದೀಪಾ ಭಾಸ್ತಿ ಅವರು ಇಂದು ಅಂತರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಿರುವುದು ಹೆಮ್ಮೆಯ ವಿಚಾರ.
ಕಾಲೇಜಿನ ದಿನಗಳಿಂದಲೂ ಸಾಹಿತ್ಯದ ಆಸಕ್ತಿ ಹೊಂದಿದ್ದ ದೀಪಾ ಇಂದು ಅಂತರಾಷ್ಟ್ರೀಯ ಮಟ್ಟದಲ್ಲಿ ಹೆಸರು ಮಾಡಿದ್ದು ಬಹಳ ವಿಶೇಷವಾದುದು ಎಂದರು. ದೀಪಾ ಭಾಸ್ತಿಯವರ ಸಾಧನೆಗೆ ಸಹಕಾರ ನೀಡಿದ ಪತಿ ಚೆಟ್ಟೀರ ನಾಣಯ್ಯ ಹಾಗೂ ಪೋಷಕರನ್ನು ಇದೇ ಸಂದರ್ಭ ಕುಲಪತಿ ಅಭಿನಂದಿಸಿದರು. ಹಾಗು ಇದೇ ಸಂದರ್ಭದಲ್ಲಿ ದೀಪಾ ಭಾಸ್ತಿಯವರನ್ನು ವಿಶ್ವವಿದ್ಯಾನಿಲಯಕ್ಕೆ ಆಹ್ವಾನಿಸಿದರು.
ಫೀಲ್ಡ್ ಮಾರ್ಷಲ್ ಕೆ. ಎಂ. ಕಾರ್ಯಪ್ಪ ಕಾಲೇಜಿನ ಹಳೇ ವಿದ್ಯಾರ್ಥಿ ಸಂಘದ ಅಧ್ಯಕ್ಷ ಬೊಳ್ಳಜಿರ ಬಿ.ಅಯ್ಯಪ್ಪ ಮಾತನಾಡಿ, ದೀಪಾ ಭಾಸ್ತಿ ಅವರು ಕಾಲೇಜಿನ ದಿನಗಳಿಂದಲೇ ಪರಿಚಿತರು, ಇಂದು ಕನ್ನಡದ ಹಣತೆ ವಿಶ್ವ ಮಟ್ಟದಲ್ಲಿ ರಾರಾಜಿಸುತ್ತಿದೆ ಎಂದರೆ ಅದಕ್ಕೆ ದೀಪಾ ಭಾಸ್ತಿ ಅವರ ಕೊಡುಗೆಯೂ ಬಹು ಮುಖ್ಯ ಕಾರಣ ಎಂದರು ಈ ಸಂದರ್ಭದಲ್ಲಿ ಹಳೇ ವಿದ್ಯಾರ್ಥಿ ಸಂಘದ ಪ್ರಧಾನ ಕಾರ್ಯದರ್ಶಿ ಚಂದನ್ ನಂದರಬೆಟ್ಟು, ಕೊಡಗು ಕನ್ನಡ ಭವನದ ನಿರ್ದೇಶಕ ಅರುಣ್ ಕುಮಾರ್ ಪಿ. ಹಾಜರಿದ್ದರು.
ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ, ಜಾನಪದ ಕಲಾವಿದ ಡಾ.ಗಣೇಶ್ ಗಂಗೊಳ್ಳಿ ಅವರು ಇಂದು ನಿಧನರಾಗಿದ್ದಾರೆ. ಕಳೆದ ರಾತ್ರಿ ಸಮಾರಂಭವೊಂದರಲ್ಲಿ…
ಕೆಎಸ್ಆರ್ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರೆಸಿಡೆಂಟ್ ಕನ್ವೆನ್ಷನ್ ಹಾಲ್ ಮುಂಭಾಗ…
ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…
ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…
ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…