ಅಂತರರಾಷ್ಟ್ರೀಯ ಬೂಕರ್ ಪ್ರಶಸ್ತಿ ವಿಜೇತೆ ಮಡಿಕೇರಿಯ ಲೇಖಕಿ ದೀಪಾ ಭಾಸ್ತಿ ಅವರನ್ನು ಮಂಗಳೂರು ವಿಶ್ವವಿದ್ಯಾನಿಲಯ ಕುಲಪತಿ ಪಿ ಎಲ್ ಧರ್ಮ ಮಡಿಕೇರಿಯ ನಿವಾಸದಲ್ಲಿ ಭೇಟಿ ಮಾಡಿ ಅಭಿನಂದಿಸಿದರು. ಮಡಿಕೇರಿ ನಗರದಲ್ಲಿರುವ ದೀಪಾಭಾಸ್ತಿ ಅವರ ಮನೆಗೆ ಭೇಟಿ ನೀಡಿದ ಕುಲಪತಿ ದೀಪಾ ಭಾಸ್ತಿ ಹಾಗು ಮನೆಯವರೊಡನೆ ಮಾತನಾಡಿ 2004 ರಿಂದ 2006 ರವರೆಗೆ ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಪತ್ರಿಕೋದ್ಯಮ ವಿಭಾಗದಲ್ಲಿ ವ್ಯಾಸಂಗ ಮಾಡಿದ ದೀಪಾ ಭಾಸ್ತಿ ಅವರು ಇಂದು ಅಂತರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಿರುವುದು ಹೆಮ್ಮೆಯ ವಿಚಾರ.
ಕಾಲೇಜಿನ ದಿನಗಳಿಂದಲೂ ಸಾಹಿತ್ಯದ ಆಸಕ್ತಿ ಹೊಂದಿದ್ದ ದೀಪಾ ಇಂದು ಅಂತರಾಷ್ಟ್ರೀಯ ಮಟ್ಟದಲ್ಲಿ ಹೆಸರು ಮಾಡಿದ್ದು ಬಹಳ ವಿಶೇಷವಾದುದು ಎಂದರು. ದೀಪಾ ಭಾಸ್ತಿಯವರ ಸಾಧನೆಗೆ ಸಹಕಾರ ನೀಡಿದ ಪತಿ ಚೆಟ್ಟೀರ ನಾಣಯ್ಯ ಹಾಗೂ ಪೋಷಕರನ್ನು ಇದೇ ಸಂದರ್ಭ ಕುಲಪತಿ ಅಭಿನಂದಿಸಿದರು. ಹಾಗು ಇದೇ ಸಂದರ್ಭದಲ್ಲಿ ದೀಪಾ ಭಾಸ್ತಿಯವರನ್ನು ವಿಶ್ವವಿದ್ಯಾನಿಲಯಕ್ಕೆ ಆಹ್ವಾನಿಸಿದರು.
ಫೀಲ್ಡ್ ಮಾರ್ಷಲ್ ಕೆ. ಎಂ. ಕಾರ್ಯಪ್ಪ ಕಾಲೇಜಿನ ಹಳೇ ವಿದ್ಯಾರ್ಥಿ ಸಂಘದ ಅಧ್ಯಕ್ಷ ಬೊಳ್ಳಜಿರ ಬಿ.ಅಯ್ಯಪ್ಪ ಮಾತನಾಡಿ, ದೀಪಾ ಭಾಸ್ತಿ ಅವರು ಕಾಲೇಜಿನ ದಿನಗಳಿಂದಲೇ ಪರಿಚಿತರು, ಇಂದು ಕನ್ನಡದ ಹಣತೆ ವಿಶ್ವ ಮಟ್ಟದಲ್ಲಿ ರಾರಾಜಿಸುತ್ತಿದೆ ಎಂದರೆ ಅದಕ್ಕೆ ದೀಪಾ ಭಾಸ್ತಿ ಅವರ ಕೊಡುಗೆಯೂ ಬಹು ಮುಖ್ಯ ಕಾರಣ ಎಂದರು ಈ ಸಂದರ್ಭದಲ್ಲಿ ಹಳೇ ವಿದ್ಯಾರ್ಥಿ ಸಂಘದ ಪ್ರಧಾನ ಕಾರ್ಯದರ್ಶಿ ಚಂದನ್ ನಂದರಬೆಟ್ಟು, ಕೊಡಗು ಕನ್ನಡ ಭವನದ ನಿರ್ದೇಶಕ ಅರುಣ್ ಕುಮಾರ್ ಪಿ. ಹಾಜರಿದ್ದರು.
ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ ನೀಡಿ ದೇವಿ ಮೂಕಾಂಬಿಕಾ…
ಮಳೆಗಾಲ ಆರಂಭವಾಗುತ್ತಿದ್ದಂತೆ ಸೇತುವೆಯೊಂದು ಕುಸಿದು ಬಿದ್ದ ಪರಿಣಾಮ ಹಲವು ಗ್ರಾಮಗಳ ಸಂಪರ್ಕದ ಕೊಂಡಿ ಕಳಚಿ ಬಿದ್ದು, ಜನರು ದ್ವೀಪದಂತೆ, ಹಳ್ಳಿಯೊಳಗೆ…
ಜ್ವರದಿಂದ ಬಳಲುತ್ತಿದ್ದ ಬಾಲಕಿಯೊರ್ವಳು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ ಘಟನೆ ಬಂಟ್ವಾಳ ತಾಲೂಕಿನ ಅಲ್ಲಿಪಾದೆ ಎಂಬಲ್ಲಿ ನಡೆದಿದೆ. ಅಲ್ಲಿಪಾದೆ ಅನೇಜ…
ಬಿಸಿರೋಡಿನ ಪ್ರಸಿದ್ದ ಕ್ಯಾಂಟೀನ್ ಒಂದರಲ್ಲಿ ಅಡುಗೆ ಅನಿಲ ಸೋರಿಕೆಯಾಗಿ ಸ್ವಲ್ಪದರಲ್ಲಿ ದೊಡ್ಡ ದುರಂತವೊಂದು ತಪ್ಪಿದೆ. ಬಿಸಿರೋಡಿನ ಮಿನಿ ವಿಧಾನ ಸೌಧದ…
ಬೇಕಲ ಕೋಟೆ ಸಮೀಪದ ಪಳ್ಳಿಕರೆ ಕಡಲತೀರದಲ್ಲಿ ಭಾನುವಾರ ಸಂಜೆ ಸಂಭವಿಸಿದ ದುರ್ಘಟನೆಯಲ್ಲಿ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸಮುದ್ರದಲ್ಲಿ ಕೊಚ್ಚಿಹೋಗಿದ್ದು, ಅವರಿಗಾಗಿ…
ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ ಹೊಡೆದ ಘಟನೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಎಂಬಲ್ಲಿ ನಡೆದಿದೆ. ರಾತ್ರಿ ವೇಳೆ…