ಜನ ಮನದ ನಾಡಿ ಮಿಡಿತ

Advertisement

ಬಂಟ್ವಾಳ: ಕಬ್ಬಿಣದ ಕಮಾನ್‌ನೊಳಗೆ ಸಿಲುಕಿಕೊಂಡ ಮೀನಿನ ಪಿಕಪ್ ವಾಹನ..!

ಪಾಣೆಮಂಗಳೂರು ಹಳೆಯ ಸೇತುವೆ ಮೂಲಕ ಘನ ವಾಹನಗಳ ಸಂಚಾರ ನಿಷೇಧ ಹೇರಿ ಹಾಕಲಾಗಿದ್ದ ಕಬ್ಬಿಣದ ಕಮಾನ್‌ನೊಳಗೆ ಪಿಕಪ್ ವಾಹನವೊಂದು ಸಿಲುಕಿಕೊಂಡ ಘಟನೆ ನಡೆದಿದೆ.

ಪಾಣೆಮಂಗಳೂರು ಉಕ್ಕಿನ ಸೇತುವೆ ಉಳಿಸುವ ಮತ್ತು ದುರ್ಬಲ ಸೇತುವೆ ಅಪಾಯಕಾರಿಯಾಗಿರುವ ಹಿನ್ನೆಲೆಯಲ್ಲಿ ಘನ ವಾಹನಗಳ ಸಂಚಾರಕ್ಕೆ ನಿಷೇಧವನ್ನು ಜಿಲ್ಲಾಡಳಿತ ಅದೇಶ ಹೊರಡಿಸಿ, ಸುಮಾರು ವರ್ಷಗಳ ಬಳಿಕ ಸೇತುವೆಯ ಎರಡು ಭಾಗಗಳಲ್ಲಿ ಕಬ್ಬಿಣದ ಕಮಾನ್ ಅಳವಡಿಸಲಾಗಿತ್ತು. ಅದಾದ ಬಳಿಕ ಕಬ್ಬಿಣದ ಕಮಾನ್ ಗಳನ್ನು ಮರಳು ವಾಹನ ಸಾಗಾಟ ಮಾಡುವ ವಾಹನಗಳು ತೆಗೆದು ಸಂಚಾರ ಮಾಡುವ ಬಗ್ಗೆ ದೂರುಗಳು ಕೇಳಿ ಬಂದ ಹಿನ್ನೆಲೆ, ಅತ್ಯಂತ ಹೆಚ್ಚು ತೂಕದ ಕಬ್ಬಿಣದ ಕಂಬಗಳನ್ನು ಅಳವಡಿಸಿ ಅದರ ಮೇಲೆ ಅಷ್ಟೇ ತೂಕದ ಕಮಾನ್ ಗಳನ್ನು ಹಾಕಲಾಗಿತ್ತು. ಇದೀಗ ಮೀನು ಸಾಗಾಟದ ಪಿಕಪ್ ವಾಹನವೊಂದು ಬಂದು ಗುದ್ದಿದ ರಭಸಕ್ಕೆ ಘನಗಾತ್ರದ ಕಮಾನ್ ಉರುಳಿ ಕೆಲಗೆ ಬಿದ್ದಿದೆ.ಅದೃಷ್ಟವಶಾತ್ ಯಾವುದೇ ಅಪಾಯ ಸಂಭವಿಸಿಲ್ಲ. ಘಟನೆಯಿಂದ ಒಂದು ಭಾಗದ ಕಮಾನ್ ತೆರವಾಗಿದೆ. ಘಟನೆಯ ಬಗ್ಗೆ ವಿಡಿಯೋ ವೈರಲ್ ಆಗಿದೆ. ವಿಡಿಯೋ ತೆಗೆಯಬೇಡಿ, ವೈರಲ್ ಆಗುತ್ತದೆ ಎಂಬ ಮಾತು ಕೂಡ ಇಲ್ಲಿ ವೈರಲ್ ಆಗಿದೆ. ಈ ಬಗ್ಗೆ ಯಾವುದೇ ದೂರು ದಾಖಲಾಗಿಲ್ಲ ಎಂದು ಟ್ರಾಫಿಕ್ ಪೋಲೀಸರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

ಬಂಟ್ವಾಳ: ಮೊಡಂಕಾಪು ಆಯ್ಯಪ್ಪ ಮಂದಿರದಲ್ಲಿ ನಡೆದ ಸಭೆಯಲ್ಲಿ ಮೂರನೇ ಅವಧಿಯ ಅಧ್ಯಕ್ಷರಾಗಿ ಆಯ್ಕೆಯಾದ ಸುನಿಲ್ ಎನ್

ಬಂಟ್ವಾಳ: ಸುರಿದ ಮಳೆಗೆ ಅವರಣಗೋಡೆ ಕುಸಿದು ಬಿದ್ದು ಹಾನಿ…!

ಪುತ್ತೂರಿನ ಪ್ರಕರಣ, ಕಾರ್ಕಳದ ಅಭಿಷೇಕ್ ಆತ್ಮಹತ್ಯೆಗೆ ಸಂಬಂಧಿಸಿ ಗ್ರಹಸಚಿವರಿಗೆ ಐವನ್ ಡಿಸೋಜಾ ಅವರಿಂದ ಮನವಿ

error: Content is protected !!