ಜನ ಮನದ ನಾಡಿ ಮಿಡಿತ

Advertisement

ಬಂಟ್ವಾಳ: ಕಬ್ಬಿಣದ ಕಮಾನ್‌ನೊಳಗೆ ಸಿಲುಕಿಕೊಂಡ ಮೀನಿನ ಪಿಕಪ್ ವಾಹನ..!

ಪಾಣೆಮಂಗಳೂರು ಹಳೆಯ ಸೇತುವೆ ಮೂಲಕ ಘನ ವಾಹನಗಳ ಸಂಚಾರ ನಿಷೇಧ ಹೇರಿ ಹಾಕಲಾಗಿದ್ದ ಕಬ್ಬಿಣದ ಕಮಾನ್‌ನೊಳಗೆ ಪಿಕಪ್ ವಾಹನವೊಂದು ಸಿಲುಕಿಕೊಂಡ ಘಟನೆ ನಡೆದಿದೆ.

ಪಾಣೆಮಂಗಳೂರು ಉಕ್ಕಿನ ಸೇತುವೆ ಉಳಿಸುವ ಮತ್ತು ದುರ್ಬಲ ಸೇತುವೆ ಅಪಾಯಕಾರಿಯಾಗಿರುವ ಹಿನ್ನೆಲೆಯಲ್ಲಿ ಘನ ವಾಹನಗಳ ಸಂಚಾರಕ್ಕೆ ನಿಷೇಧವನ್ನು ಜಿಲ್ಲಾಡಳಿತ ಅದೇಶ ಹೊರಡಿಸಿ, ಸುಮಾರು ವರ್ಷಗಳ ಬಳಿಕ ಸೇತುವೆಯ ಎರಡು ಭಾಗಗಳಲ್ಲಿ ಕಬ್ಬಿಣದ ಕಮಾನ್ ಅಳವಡಿಸಲಾಗಿತ್ತು. ಅದಾದ ಬಳಿಕ ಕಬ್ಬಿಣದ ಕಮಾನ್ ಗಳನ್ನು ಮರಳು ವಾಹನ ಸಾಗಾಟ ಮಾಡುವ ವಾಹನಗಳು ತೆಗೆದು ಸಂಚಾರ ಮಾಡುವ ಬಗ್ಗೆ ದೂರುಗಳು ಕೇಳಿ ಬಂದ ಹಿನ್ನೆಲೆ, ಅತ್ಯಂತ ಹೆಚ್ಚು ತೂಕದ ಕಬ್ಬಿಣದ ಕಂಬಗಳನ್ನು ಅಳವಡಿಸಿ ಅದರ ಮೇಲೆ ಅಷ್ಟೇ ತೂಕದ ಕಮಾನ್ ಗಳನ್ನು ಹಾಕಲಾಗಿತ್ತು. ಇದೀಗ ಮೀನು ಸಾಗಾಟದ ಪಿಕಪ್ ವಾಹನವೊಂದು ಬಂದು ಗುದ್ದಿದ ರಭಸಕ್ಕೆ ಘನಗಾತ್ರದ ಕಮಾನ್ ಉರುಳಿ ಕೆಲಗೆ ಬಿದ್ದಿದೆ.ಅದೃಷ್ಟವಶಾತ್ ಯಾವುದೇ ಅಪಾಯ ಸಂಭವಿಸಿಲ್ಲ. ಘಟನೆಯಿಂದ ಒಂದು ಭಾಗದ ಕಮಾನ್ ತೆರವಾಗಿದೆ. ಘಟನೆಯ ಬಗ್ಗೆ ವಿಡಿಯೋ ವೈರಲ್ ಆಗಿದೆ. ವಿಡಿಯೋ ತೆಗೆಯಬೇಡಿ, ವೈರಲ್ ಆಗುತ್ತದೆ ಎಂಬ ಮಾತು ಕೂಡ ಇಲ್ಲಿ ವೈರಲ್ ಆಗಿದೆ. ಈ ಬಗ್ಗೆ ಯಾವುದೇ ದೂರು ದಾಖಲಾಗಿಲ್ಲ ಎಂದು ಟ್ರಾಫಿಕ್ ಪೋಲೀಸರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

ಬಂಟ್ವಾಳ: ಬಡಗಬೆಳ್ಳೂರಿನಲ್ಲಿ ಕುಸಿದು ಬಿದ್ದ ಸೇತುವೆ; ಜನ ಸಂಚಾರಕ್ಕೆ ಭಾರೀ ಸಂಕಷ್ಟ…..!

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ನಿಧನ….!

ಬಂಟ್ವಾಳ: ಮಿನಿ ವಿಧಾನಸೌಧ ಮುಂಭಾಗದ ಕ್ಯಾಂಟೀನ್‌ನಲ್ಲಿ ಅನಿಲ ಸೋರಿಕೆ ಆತಂಕ….!

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

error: Content is protected !!