ಪಾಣೆಮಂಗಳೂರು ಹಳೆಯ ಸೇತುವೆ ಮೂಲಕ ಘನ ವಾಹನಗಳ ಸಂಚಾರ ನಿಷೇಧ ಹೇರಿ ಹಾಕಲಾಗಿದ್ದ ಕಬ್ಬಿಣದ ಕಮಾನ್ನೊಳಗೆ ಪಿಕಪ್ ವಾಹನವೊಂದು ಸಿಲುಕಿಕೊಂಡ ಘಟನೆ ನಡೆದಿದೆ.
ಪಾಣೆಮಂಗಳೂರು ಉಕ್ಕಿನ ಸೇತುವೆ ಉಳಿಸುವ ಮತ್ತು ದುರ್ಬಲ ಸೇತುವೆ ಅಪಾಯಕಾರಿಯಾಗಿರುವ ಹಿನ್ನೆಲೆಯಲ್ಲಿ ಘನ ವಾಹನಗಳ ಸಂಚಾರಕ್ಕೆ ನಿಷೇಧವನ್ನು ಜಿಲ್ಲಾಡಳಿತ ಅದೇಶ ಹೊರಡಿಸಿ, ಸುಮಾರು ವರ್ಷಗಳ ಬಳಿಕ ಸೇತುವೆಯ ಎರಡು ಭಾಗಗಳಲ್ಲಿ ಕಬ್ಬಿಣದ ಕಮಾನ್ ಅಳವಡಿಸಲಾಗಿತ್ತು. ಅದಾದ ಬಳಿಕ ಕಬ್ಬಿಣದ ಕಮಾನ್ ಗಳನ್ನು ಮರಳು ವಾಹನ ಸಾಗಾಟ ಮಾಡುವ ವಾಹನಗಳು ತೆಗೆದು ಸಂಚಾರ ಮಾಡುವ ಬಗ್ಗೆ ದೂರುಗಳು ಕೇಳಿ ಬಂದ ಹಿನ್ನೆಲೆ, ಅತ್ಯಂತ ಹೆಚ್ಚು ತೂಕದ ಕಬ್ಬಿಣದ ಕಂಬಗಳನ್ನು ಅಳವಡಿಸಿ ಅದರ ಮೇಲೆ ಅಷ್ಟೇ ತೂಕದ ಕಮಾನ್ ಗಳನ್ನು ಹಾಕಲಾಗಿತ್ತು. ಇದೀಗ ಮೀನು ಸಾಗಾಟದ ಪಿಕಪ್ ವಾಹನವೊಂದು ಬಂದು ಗುದ್ದಿದ ರಭಸಕ್ಕೆ ಘನಗಾತ್ರದ ಕಮಾನ್ ಉರುಳಿ ಕೆಲಗೆ ಬಿದ್ದಿದೆ.ಅದೃಷ್ಟವಶಾತ್ ಯಾವುದೇ ಅಪಾಯ ಸಂಭವಿಸಿಲ್ಲ. ಘಟನೆಯಿಂದ ಒಂದು ಭಾಗದ ಕಮಾನ್ ತೆರವಾಗಿದೆ. ಘಟನೆಯ ಬಗ್ಗೆ ವಿಡಿಯೋ ವೈರಲ್ ಆಗಿದೆ. ವಿಡಿಯೋ ತೆಗೆಯಬೇಡಿ, ವೈರಲ್ ಆಗುತ್ತದೆ ಎಂಬ ಮಾತು ಕೂಡ ಇಲ್ಲಿ ವೈರಲ್ ಆಗಿದೆ. ಈ ಬಗ್ಗೆ ಯಾವುದೇ ದೂರು ದಾಖಲಾಗಿಲ್ಲ ಎಂದು ಟ್ರಾಫಿಕ್ ಪೋಲೀಸರು ತಿಳಿಸಿದ್ದಾರೆ.
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…
ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…