ಜನ ಮನದ ನಾಡಿ ಮಿಡಿತ

Advertisement

ಬಂಟ್ವಾಳ: ಕೃಷಿಕರಿಗೆ ಕೋಟ್ಯಾಂತರ ರೂಪಾಯಿ ವಂಚಿಸಿ ಪಾರಾರಿಯಾದ ಅಡಿಕೆ ವ್ಯಾಪಾರಿ

ಅಡಿಕೆ ವ್ಯಾಪಾರಿಯೋರ್ವ ಕೃಷಿಕರಿಗೆ ಕೋಟ್ಯಾಂತರ ರೂಪಾಯಿ ವಂಚಿಸಿ ಪಾರಾರಿಯಾಗಿದ್ದು ,ಇದೀಗ ಕೃಷಿಕರು ತಮ್ಮ ಹಣಕ್ಕಾಗಿ ಬಂಟ್ವಾಳ ನಗರ ಪೋಲೀಸ್ ಠಾಣೆಯ ಮೆಟ್ಟಿಲೇರಿದ್ದಾರೆ.

ಇಂದು ಸುಮಾರು 50 ಕ್ಕೂ ಅಧಿಕ ಕೃಷಿಕರು ಬಂಟ್ವಾಳ ನಗರ ಪೋಲೀಸ್ ಠಾಣೆಯ ಮುಂದೆ ಜಮಾಯಿಸಿದ್ದು, ಪ್ರತಿಯೊಬ್ಬರು ಕೂಡ ಅಡಿಕೆ ವ್ಯಾಪಾರಿ ಬಂಟ್ವಾಳ ಬಡ್ಡಕಟ್ಟೆಯಲ್ಲಿ ಎ.ಬಿ.ಸುಫಾರಿ ಅಂಗಡಿಯನ್ನು ಹೊಂದಿರುವ ನಾವೂರ ಗ್ರಾಮದ ಮೈಂದಾಳ ನಿವಾಸಿ ನೌಫಲ್ ಎನ್.ವಿರುದ್ದ ದೂರು ನೀಡಿದ್ದಾರೆ. ಸ್ಥಳೀಯ ಕೃಷಿಕ ಮಹಿಳೆಯೊಬ್ಬರು ತಮ್ಮ ಬ್ಯಾಂಕ್ ಸಾಲದ ಮೊತ್ತ ಪಾವತಿಯ ಹಿನ್ನಲೆಯಲ್ಲಿ ವ್ಯಾಪಾರಿಯ ಬಳಿ ಹಣಕ್ಕಾಗಿ ಹೋದಾಗ ಆತ ಪರಾರಿಯಾಗಿರುವುದು ಗಮನಕ್ಕೆ ಬಂದಿದೆ. ಬಳಿಕ ಕೃಷಿಕರೆಲ್ಲರು ಒಂದಾಗಿ ಆತನ ವಿರುದ್ದ ದೂರು ನೀಡಲು ಮುಂದಾಗಿದ್ದಾರೆ. ಈತ ಸ್ಥಳೀಯ ಕೃಷಿಕರ ವಿಶ್ವಾಸಾರ್ಹ ವರ್ತಕನಾಗಿದ್ದು, ಕಳೆದ ಎರಡು ಮೂರು ದಶಕಗಳಿಂದ ಕೃಷಿಕರು ಈತನಿಗೆ ಒಣ ಅಡಿಕೆ ನೀಡಿ ಸ್ವಲ್ಪ ಸಮಯದ ಬಳಿಕ ಹಣ ನೀಡುತ್ತಿದ್ದರು. ಆತ ಯಾವುದೇ ರೀತಿಯಲ್ಲಿ ವಂಚಿಸದೆ ಕೃಷಿಕರ ಅಗತ್ಯಕ್ಕೆ ತಕ್ಕಂತೆ ಹಣ ನೀಡುತ್ತಿದ್ದನು. ಆದರೆ ಈ ಬಾರಿ ಒಬ್ಬಬ್ಬ ಕೃಷಿಕನಿಗೆ ಲಕ್ಷಾಂತರ ರೂ ಹಣ ವಂಚನೆ ಮಾಡಿದ್ದು ಒಟ್ಟು ಮೊತ್ತ 10 ಕೋಟಿ ಆಗಬಹುದೆಂದು ಕೃಷಿಕರು ಆರೋಪಿಸಿದ್ದಾರೆ.

Leave a Reply

Your email address will not be published. Required fields are marked *

ಬಂಟ್ವಾಳ: ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಕುಸಿತಗೊಂಡ ಮನೆಯ ಚಾವಣಿ…!

ಬಂಟ್ವಾಳ: ಸಜೀಪಮೂಡದಲ್ಲಿ ವಿದ್ಯುತ್ ಅವಘಡ; ಪೀಠೋಪಕರಣಗಳು ಸೇರಿ ದಿನನಿತ್ಯದ ವಸ್ತುಗಳು ಸುಟ್ಟು ಭಸ್ಮ…!

ವಾಷಿಂಗ್ಟನ್: ಅಮೆರಿಕ ಕಾಂಗ್ರೆಸ್‌ನಿಂದ ಡಾ. ಯು.ಟಿ. ಖಾದರ್‌ಗೆ ಪ್ರತಿಷ್ಠಿತ ಗೌರವ…!

ವಿಶ್ವಕಪ್ ಗಲಾಟೆ: ಅರ್ಜೆಂಟೀನಾ ವಿರುದ್ಧ ಫಿಫಾ ಕಠಿಣ ಶಿಸ್ತು ಕ್ರಮ!

ನವದೆಹಲಿ: ‘ಪಾಕಿಸ್ತಾನಿ ಕಾಶ್ಮೀರ’ ಅಲ್ಲ, ಅದು PoK ಮಾತ್ರ: ನ್ಯೂಯಾರ್ಕ್ ಟೈಮ್ಸ್‌ಗೆ ಭಾರತದ ತಿರುಗೇಟು…!

ವಾಷಿಂಗ್ಟನ್: ಚೀನಾ-ಪಾಕ್ ಮೂಲಕ ಇರಾನ್‌ಗೆ 400 ರಾಕೆಟ್ ಲಾಂಚರ್? ಟ್ರಂಪ್ ಆತಂಕ…!

ಮೂಡುಬಿದಿರೆ: ಒಮಾನ್‌ನಲ್ಲಿ ಸಂಭವಿಸಿದ ವಾಹನ ಅಪ*ಘಾತದಲ್ಲಿ ಯುವಕ ಸಾ*ವು….!

ಬಂಟ್ವಾಳ: ಅಮ್ಮುಂಜೆ ವೃದ್ಧೆ ಕೊಲೆ ಪ್ರಕರಣ: ಮೂವರು ಆರೋಪಿಗಳಿಗೆ ಜೀವಾವಧಿ…!

ನವದೆಹಲಿ: ಚಿನ್ನದ ಬೆಲೆ ಇಳಿಯುತ್ತಾ? ವಿಶ್ವ ಚಿನ್ನ ಮಂಡಳಿಯ ಭವಿಷ್ಯ…!

error: Content is protected !!