ಅಡಿಕೆ ವ್ಯಾಪಾರಿಯೋರ್ವ ಕೃಷಿಕರಿಗೆ ಕೋಟ್ಯಾಂತರ ರೂಪಾಯಿ ವಂಚಿಸಿ ಪಾರಾರಿಯಾಗಿದ್ದು ,ಇದೀಗ ಕೃಷಿಕರು ತಮ್ಮ ಹಣಕ್ಕಾಗಿ ಬಂಟ್ವಾಳ ನಗರ ಪೋಲೀಸ್ ಠಾಣೆಯ ಮೆಟ್ಟಿಲೇರಿದ್ದಾರೆ.
ಇಂದು ಸುಮಾರು 50 ಕ್ಕೂ ಅಧಿಕ ಕೃಷಿಕರು ಬಂಟ್ವಾಳ ನಗರ ಪೋಲೀಸ್ ಠಾಣೆಯ ಮುಂದೆ ಜಮಾಯಿಸಿದ್ದು, ಪ್ರತಿಯೊಬ್ಬರು ಕೂಡ ಅಡಿಕೆ ವ್ಯಾಪಾರಿ ಬಂಟ್ವಾಳ ಬಡ್ಡಕಟ್ಟೆಯಲ್ಲಿ ಎ.ಬಿ.ಸುಫಾರಿ ಅಂಗಡಿಯನ್ನು ಹೊಂದಿರುವ ನಾವೂರ ಗ್ರಾಮದ ಮೈಂದಾಳ ನಿವಾಸಿ ನೌಫಲ್ ಎನ್.ವಿರುದ್ದ ದೂರು ನೀಡಿದ್ದಾರೆ. ಸ್ಥಳೀಯ ಕೃಷಿಕ ಮಹಿಳೆಯೊಬ್ಬರು ತಮ್ಮ ಬ್ಯಾಂಕ್ ಸಾಲದ ಮೊತ್ತ ಪಾವತಿಯ ಹಿನ್ನಲೆಯಲ್ಲಿ ವ್ಯಾಪಾರಿಯ ಬಳಿ ಹಣಕ್ಕಾಗಿ ಹೋದಾಗ ಆತ ಪರಾರಿಯಾಗಿರುವುದು ಗಮನಕ್ಕೆ ಬಂದಿದೆ. ಬಳಿಕ ಕೃಷಿಕರೆಲ್ಲರು ಒಂದಾಗಿ ಆತನ ವಿರುದ್ದ ದೂರು ನೀಡಲು ಮುಂದಾಗಿದ್ದಾರೆ. ಈತ ಸ್ಥಳೀಯ ಕೃಷಿಕರ ವಿಶ್ವಾಸಾರ್ಹ ವರ್ತಕನಾಗಿದ್ದು, ಕಳೆದ ಎರಡು ಮೂರು ದಶಕಗಳಿಂದ ಕೃಷಿಕರು ಈತನಿಗೆ ಒಣ ಅಡಿಕೆ ನೀಡಿ ಸ್ವಲ್ಪ ಸಮಯದ ಬಳಿಕ ಹಣ ನೀಡುತ್ತಿದ್ದರು. ಆತ ಯಾವುದೇ ರೀತಿಯಲ್ಲಿ ವಂಚಿಸದೆ ಕೃಷಿಕರ ಅಗತ್ಯಕ್ಕೆ ತಕ್ಕಂತೆ ಹಣ ನೀಡುತ್ತಿದ್ದನು. ಆದರೆ ಈ ಬಾರಿ ಒಬ್ಬಬ್ಬ ಕೃಷಿಕನಿಗೆ ಲಕ್ಷಾಂತರ ರೂ ಹಣ ವಂಚನೆ ಮಾಡಿದ್ದು ಒಟ್ಟು ಮೊತ್ತ 10 ಕೋಟಿ ಆಗಬಹುದೆಂದು ಕೃಷಿಕರು ಆರೋಪಿಸಿದ್ದಾರೆ.
ಬಂಟ್ವಾಳ ತಾಲೂಕಿನ ತೆಂಕಬೆಳ್ಳೂರು ಗ್ರಾಮದ ಕಾಗುಡ್ಡೆ ಎಂಬಲ್ಲಿ ರಾತ್ರಿ ಸುರಿದ ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಮನೆಯ ಚಾವಣಿ…
ಬಂಟ್ವಾಳ ತಾಲೂಕಿನ ಸಜೀಪಮೂಡ ಗ್ರಾಮದ ಕೊಳಕೆ ಎಂಬಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಸಂಭವಿಸಿದಂತಹ ಅವಘಡದಲ್ಲಿ ಮನೆಯ ಪೀಠೋಪಕರಣಗಳು ಹಾಗೂ ದಿನನಿತ್ಯ…
ವಾಷಿಂಗ್ಟನ್ ಕರ್ನಾಟಕದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಯು. ಟಿ. ಖಾದರ್ ಫರೀದ್ ಅವರ ಸಾರ್ವಜನಿಕ ಸೇವೆ…
ಫಿಫಾ ವಿಶ್ವಕಪ್ 2026ರ ಫೈನಲ್ ಹಾಗೂ ಸೆಮಿಫೈನಲ್ ಪಂದ್ಯಗಳ ವೇಳೆ ನಡೆದ ಗಲಾಟೆ ಮತ್ತು ನಿಯಮ ಉಲ್ಲಂಘನೆಗಳ ಹಿನ್ನೆಲೆಯಲ್ಲಿ, ಅರ್ಜೆಂಟೀನಾ…
'ನ್ಯೂಯಾರ್ಕ್ ಟೈಮ್ಸ್' ತನ್ನ ವರದಿಯಲ್ಲಿ 'ಪಾಕಿಸ್ತಾನಿ ಕಾಶ್ಮೀರ' ಎಂದು ಉಲ್ಲೇಖಿಸಿರುವುದಕ್ಕೆ ಭಾರತ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಅಮೆರಿಕದಲ್ಲಿರುವ ಭಾರತೀಯ ರಾಯಭಾರ…
ಚೀನಾ ಪಾಕಿಸ್ತಾನದ ಮೂಲಕ ಇರಾನ್ಗೆ 400 ರಾಕೆಟ್ ಲಾಂಚರ್ಗಳನ್ನು ಪೂರೈಸಿದೆ ಎಂಬ ವರದಿಗಳು ಜಾಗತಿಕ ಆತಂಕಕ್ಕೆ ಕಾರಣವಾಗಿವೆ. ಈ ಕುರಿತು…