ಕೋಡಿಂಬಾಳ ಬಳಿ ಡೀಸೆಲ್ ಸುರಿದು ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಗಾಯಾಳು ಹನುಮಪ್ಪ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ.
ಮಂಗಳೂರು-ಬೆ0ಗಳೂರು ರೈಲು ಮಾರ್ಗದ ಕೋಡಿಂಬಾಳ ಸಮೀಪ ಕೋರಿಯರ್ ರೈಲು ಟ್ರಾಕ್ ಬಳಿ ಘಟನೆ ನಡೆದಿತ್ತು. ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ನಾಗರಹಳ್ಳಿ ನಿವಾಸಿ ಹನುಮಪ್ಪ ತನ್ನ ತಮ್ಮನಿಂದಲೇ ಕೊಲೆಯಾಗಿದ್ದಾನೆ. ಸಹೋದರ ನಿಂಗಪ್ಪನನ್ನ ಮಂಗಳೂರು ವಿಭಾಗದ ರೈಲ್ವೇ ಪೊಲೀಸರು ತನಿಖೆಗೆ ಒಳಪಡಿಸಿದ್ದಾರೆ.
ಇನ್ಸ್ಪೆಕ್ಟರ್ ಜಯಾನಂದ, ಎಎಸ್ಐ ಮಧುಚಂದ್ರ, ವಿಧಿವಿಜ್ಞಾನ ತಂಡ ಹಾಗೂ ರೈಲ್ವೆ ಪೊಲೀಸರಿಂದ ತನಿಖೆ ನಡೆದಿದೆ.ವಿಪರೀತ ಕುಡಿತದ ಚಟವಿದ್ದ ಮೃತ ಹನುಮಪ್ಪನ ಹೆಂಡತಿ 14ವರ್ಷಗಳ ಹಿಂದೆ ಮನೆ ಬಿಟ್ಟು ಹೋಗಿದ್ದಾಳೆ. ಇತ್ತೀಚೆಗೆ ಕುಡಿದ ಮತ್ತಿನಲ್ಲಿ ನಮ್ಮ ತಾಯಿಯನ್ನೇ ಕಲ್ಲಿನಿಂದ ಜಜ್ಜಿ ಕೊಲೆ ಮಾಡಲು ಈತ ಯತ್ನಿಸಿದ್ದ. ಈ ಹಿನ್ನಲೆ ಹಿಂಸೆಯಿ0ದ ರೋಸಿಹೋಗಿ ನಿಂಗಪ್ಪ ತನ್ನ ಅಣ್ಣನನ್ನು ಕೊಲೆ ಮಾಡಲು ನಿರ್ಧರಿಸಿದ್ದೆ ಎಂದು ಆರೋಪಿ ಪೊಲೀಸರ ಬಳಿ ಹೇಳಿಕೊಂಡಿದ್ದಾನೆ. ಇಂದು ಸ್ಥಳ ಮಹಜರು ನಡೆದಿದ್ದು, ಹೆಚ್ಚಿನ ಮಾಹಿತಿ ಇನ್ನಷ್ಟೇ ಬರಬೇಕಿದೆ.
ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ, ಜಾನಪದ ಕಲಾವಿದ ಡಾ.ಗಣೇಶ್ ಗಂಗೊಳ್ಳಿ ಅವರು ಇಂದು ನಿಧನರಾಗಿದ್ದಾರೆ. ಕಳೆದ ರಾತ್ರಿ ಸಮಾರಂಭವೊಂದರಲ್ಲಿ…
ಕೆಎಸ್ಆರ್ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರೆಸಿಡೆಂಟ್ ಕನ್ವೆನ್ಷನ್ ಹಾಲ್ ಮುಂಭಾಗ…
ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…
ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…
ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…