ಕೋಡಿಂಬಾಳ ಬಳಿ ಡೀಸೆಲ್ ಸುರಿದು ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಗಾಯಾಳು ಹನುಮಪ್ಪ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ.
ಮಂಗಳೂರು-ಬೆ0ಗಳೂರು ರೈಲು ಮಾರ್ಗದ ಕೋಡಿಂಬಾಳ ಸಮೀಪ ಕೋರಿಯರ್ ರೈಲು ಟ್ರಾಕ್ ಬಳಿ ಘಟನೆ ನಡೆದಿತ್ತು. ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ನಾಗರಹಳ್ಳಿ ನಿವಾಸಿ ಹನುಮಪ್ಪ ತನ್ನ ತಮ್ಮನಿಂದಲೇ ಕೊಲೆಯಾಗಿದ್ದಾನೆ. ಸಹೋದರ ನಿಂಗಪ್ಪನನ್ನ ಮಂಗಳೂರು ವಿಭಾಗದ ರೈಲ್ವೇ ಪೊಲೀಸರು ತನಿಖೆಗೆ ಒಳಪಡಿಸಿದ್ದಾರೆ.
ಇನ್ಸ್ಪೆಕ್ಟರ್ ಜಯಾನಂದ, ಎಎಸ್ಐ ಮಧುಚಂದ್ರ, ವಿಧಿವಿಜ್ಞಾನ ತಂಡ ಹಾಗೂ ರೈಲ್ವೆ ಪೊಲೀಸರಿಂದ ತನಿಖೆ ನಡೆದಿದೆ.ವಿಪರೀತ ಕುಡಿತದ ಚಟವಿದ್ದ ಮೃತ ಹನುಮಪ್ಪನ ಹೆಂಡತಿ 14ವರ್ಷಗಳ ಹಿಂದೆ ಮನೆ ಬಿಟ್ಟು ಹೋಗಿದ್ದಾಳೆ. ಇತ್ತೀಚೆಗೆ ಕುಡಿದ ಮತ್ತಿನಲ್ಲಿ ನಮ್ಮ ತಾಯಿಯನ್ನೇ ಕಲ್ಲಿನಿಂದ ಜಜ್ಜಿ ಕೊಲೆ ಮಾಡಲು ಈತ ಯತ್ನಿಸಿದ್ದ. ಈ ಹಿನ್ನಲೆ ಹಿಂಸೆಯಿ0ದ ರೋಸಿಹೋಗಿ ನಿಂಗಪ್ಪ ತನ್ನ ಅಣ್ಣನನ್ನು ಕೊಲೆ ಮಾಡಲು ನಿರ್ಧರಿಸಿದ್ದೆ ಎಂದು ಆರೋಪಿ ಪೊಲೀಸರ ಬಳಿ ಹೇಳಿಕೊಂಡಿದ್ದಾನೆ. ಇಂದು ಸ್ಥಳ ಮಹಜರು ನಡೆದಿದ್ದು, ಹೆಚ್ಚಿನ ಮಾಹಿತಿ ಇನ್ನಷ್ಟೇ ಬರಬೇಕಿದೆ.
ತುಳುನಾಡಿನ ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿಯ ಬೆಳವಣಿಗೆಗೆ ಕಯ್ಯಾರ ಕಿಞ್ಞಣ್ಣ ರೈ ಅವರ ಕೊಡುಗೆ ಅಪಾರವಾಗಿದ್ದು, ಅವರನ್ನು ಈ ನಾಡಿನ…
ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಕಾರಣಗಿರಿ ಗ್ರಾಮ ಭಾರತಿ ಟ್ರಸ್ಟ್ ಹಾಗೂ ಕಲಾದರ್ಶನ ಮಾಸಪತ್ರಿಕೆ ಆಶ್ರಯದಲ್ಲಿ ಪ್ರಥಮ ಸುದ್ದಿ ವಾಹಕ…
72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ಅತ್ಯುತ್ತಮ ಪೋಷಕ ನಟಿ ರಾಷ್ಟ್ರೀಯ ಪ್ರಶಸ್ತಿ ಪಡೆದ ಕಾಸರಗೋಡು ವರ್ಕಾಡಿ ಮೂಲದ ರೂಪಶ್ರೀ ವರ್ಕಾಡಿ…
ಬಿಜೆಪಿಯ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನಾವಾಲಾ ಅವರು ತಮ್ಮ ಹುದ್ದೆ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನುವ…
ದೇಶದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಏರಿಳಿತ ಮುಂದುವರಿದಿದೆ. ಶುಕ್ರವಾರ ಚಿನ್ನದ ಬೆಲೆ ಪ್ರತಿ ಗ್ರಾಂಗೆ 25 ರೂಪಾಯಿ ಏರಿಕೆಯಾದರೂ,…
ತುಮಕೂರಿನಲ್ಲಿ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮೂಡಿಸುತ್ತಿದ್ದ ಪೊಲೀಸ್ ಸಿಬ್ಬಂದಿಯ ಪುತ್ರನೇ ಹೈಡ್ರೋ ಗಾಂಜಾ…