ಕಡಬ ಠಾಣಾ ವ್ಯಾಪ್ತಿಯ ರಾಮಕುಂಜ ಸಮೀಪದ ಹಳೆನೇರೆಂಕಿ ಗ್ರಾಮದ ನೇರೆಂಕಿಯ ತೋಟವೊಂದರಲ್ಲಿ ನಡೆಯುತ್ತಿದ್ದ ಅಕ್ರಮ ಕೋಳಿ ಅಂಕಕ್ಕೆ ಪೊಲೀಸರು ಜೂ.10ರಂದು ದಾಳಿ ನಡೆಸಿದ್ದಾರೆ. ಘಟನಾ ಸ್ಥಳದಿಂದ ವಾಹನ, ಕೋಳಿ ಹಾಗೂ ನಗದು ವಶಪಡಿಸಿಕೊಂಡಿದಲ್ಲದೆ, ಅಕ್ರಮ ಕೋಳಿ ಅಂಕದ ಪ್ರಮುಖ ರೂವಾರಿ ಸಹಿತ ಮೂವರನ್ನು ವಶಕ್ಕೆ ಪಡೆದು ಬಂಧಿಸಿದ್ದಾರೆ.
ನೇರೆಂಕಿ ನಿವಾಸಿ ಮೋಹನ್ ದಾಸ್ ರೈ (48),ಪೆರಾಬೆ ಗ್ರಾಮದ ಬೇಲ್ವಾಡಿ ನಿವಾಸಿ ರಾಧಕೃಷ್ಣ, (51) ಆಲಂಕಾರು ನಿವಾಸಿ ವೆಂಕಟೇಶ(30) ಬಂಧಿತರು. ಇನ್ನು ಎಂಟು ಮಂದಿ ದಿಕ್ಕು ಪಾಲಾಗಿ ಓಡಿ ಪರಾರಿಯಾಗಿದ್ದಾರೆ. ಸ್ಥಳದಲ್ಲಿದ್ದ 6 ಬೈಕ್, 2 ಕಾರು, 4 ಕೋಳಿ, ಕೋಳಿ ಅಂಕಕ್ಕೆ ಬಳಸಲಾಗುವ ಕತ್ತಿ ಹಾಗೂ 3,560 ರೂ. ವಶಕ್ಕೆ ಪಡೆದುಕೊಂಡಿದ್ದಾರೆ. ಹಳೆನೇರಂಕಿ ಗ್ರಾಮದ ನೇರಂಕಿ ಎಂಬಲ್ಲಿ ಅಕ್ರಮ ಕೋಳಿ ಅಂಕದ ರೂವಾರಿಯ ತೋಟವೊಂದರಲ್ಲಿ ಅಕ್ರಮವಾಗಿ ಹಣವನ್ನು ಪಣವಾಗಿಟ್ಟು ಕೋಳಿ ಅಂಕ ನಡೆಯುತ್ತಿದ್ದ ಬಗ್ಗೆ ಮಾಹಿತಿ ಬಂದ ಮೇರೆಗೆ ಕಡಬ ಪೊಲೀಸ್ ಠಾಣಾ ಪೋಲಿಸ್ ಉಪನಿರೀಕ್ಷಕರಾದ ಅಬಿನಂದನ್ ಠಾಣಾ ಸಿಬ್ಬಂದಿಗಳೊAದಿಗೆ ದಾಳಿ ನಡೆಸಿರುವುದಾಗಿದೆ. ಈ ಬಗ್ಗೆ ಕಡಬ ಪೊಲೀಸ್ ಠಾಣೆಯಲ್ಲಿ ಅ.ಕ್ರ :44/2025 ಕಲಂ: 87, 93 KP Act ಹಾಗೂ 3,11 THE PREVENTION OF CRUELTY TO ANIMALS ACT, 1960 ರಂತೆ ಪ್ರಕರಣ ದಾಖಲಾಗಿದ್ದು ತನಿಖೆ ನಡೆಯುತ್ತಿದೆ. ನೂತನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಆಗಮನದ ಬಳಿಕ ಪೊಲೀಸರ ಅಪರೂಪದ ದಾಳಿಗೆ ಕೋಳಿ ಅಂಕ ಆಯೋಜಕರು ಬೆಚ್ಚಿಬಿದ್ದಿದ್ದಾರೆ. ಅಲ್ಲದೆ ಈ ಬಗ್ಗೆ ಚರ್ಚೆಯನ್ನೂ ಮಾಡುತ್ತಿದ್ದಾರೆ.
ಬೇಕಲ ಕೋಟೆ ಸಮೀಪದ ಪಳ್ಳಿಕರೆ ಕಡಲತೀರದಲ್ಲಿ ಭಾನುವಾರ ಸಂಜೆ ಸಂಭವಿಸಿದ ದುರ್ಘಟನೆಯಲ್ಲಿ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸಮುದ್ರದಲ್ಲಿ ಕೊಚ್ಚಿಹೋಗಿದ್ದು, ಅವರಿಗಾಗಿ…
ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ ಹೊಡೆದ ಘಟನೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಎಂಬಲ್ಲಿ ನಡೆದಿದೆ. ರಾತ್ರಿ ವೇಳೆ…
ಕಡಬ ತಾಲೂಕು ಕೊಯಿಲ ಮತ್ತು ರಾಮಕುಂಜ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕ ರಸ್ತೆಯುದ್ದಕ್ಕೂ ಉಂಟಾಗಿರುವ ಹೊಂಡಗಳಿಗೆ ಸ್ಥಳಿಯರು ಶ್ರಮ…
ರಾಷ್ಟ್ರೀಯ ಹೆದ್ದಾರಿಯ ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದಲ್ಲಿ ಸರ್ವೀಸ್ ರಸ್ತೆ ಹೊಂಡಗುಂಡಿಗಳಿಂದ ತುಂಬಿ ವಾಹನ ಸಂಚಾರಕ್ಕೆ ತೊಂದರೆಯಾಗುತ್ತಿದೆ ಎಂದು ಸ್ಥಳೀಯರು…
ಮಾದಕ ದ್ರವ್ಯ ಸಾಗಾಟ ಹಾಗೂ ಮಾರಾಟ ಪ್ರಕರಣಗಳಲ್ಲಿ ಭಾಗಿಯಾಗಿರುವ ಆರೋಪದಡಿ ಮಣಿಪಾಲ ಪೊಲೀಸ್ ಠಾಣೆ ವ್ಯಾಪ್ತಿಯ 80 ಬಡಗಬೆಟ್ಟು ಗ್ರಾಮದ…
ಮಂಗಳೂರು ನಗರದ ಪದವು ಗ್ರಾಮದ ಜೋಡುಕಟ್ಟೆ ಮರೋಳಿ ಹತ್ತಿರ ಜೂನ್ 11 ರಂದು ಅಕ್ರಮವಾಗಿ ಆನೆದಂತಗಳನ್ನು ಮಾರಾಟಕ್ಕೆ ಯತ್ನಿಸುತಿದ್ದವರನ್ನು ಬಂಧಿಸಲಾಗಿದೆ.…