ಜನ ಮನದ ನಾಡಿ ಮಿಡಿತ

Advertisement

ಮೂಡಬಿದ್ರೆ: ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಏಳನೇ ಕ್ಲಾಸಿನ ರಿಷಿತಾ ರೈ

ಮೂಡುಬಿದ್ರೆಯ ಪ್ರತಿಭಾ ಎಸ್ ರೈ ಮತ್ತು ಶಿವರಾಜ್ ರೈ ಅವರ ಪುತ್ರಿ ರಿಷಿತಾ ರೈ ಮೂಡಬಿದ್ರೆ ತನ್ನ ಕಿರಿವಯಸ್ಸನಲ್ಲಿಯೇ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದು ಬಾಲಸಾಧಕಿ ಎನಿಸಿಕೊಂಡಿದ್ದಾರೆ. ಸಾಧನೆಗೆ ವಯಸ್ಸಿನ ಮಿತಿಯಿಲ್ಲ ಎಂಬುದನ್ನು ಸಾಬೀತುಪಡಿಸಿರುವ ರಿಷಿತಾ ಶೈಕ್ಷಣಿಕ ಚಟುವಟಿಕೆ, ಕ್ರೀಡೆ, ಚಿತ್ರಕಲೆ, ಭಕ್ತಿಗೀತೆ ಹೀಗೆ ಹಲವು ಕ್ಷೇತ್ರದಲ್ಲಿ ಮಾಗಿದ ಪ್ರತಿಭೆಯಾಗಿದ್ದಾರೆ.

ಪ್ರಸ್ತುತ ದಿಗಂಬರ ಜೈನ್ ಆಂಗ್ಲಮಾಧ್ಯಮ ಶಾಲೆಯಲ್ಲಿ ಏಳನೇ ತರಗತಿ ಓದುತ್ತಿರುವ ಇವರು ವಾಯ್ಸ್ ಆಫ್ ಆರಾಧನಾ ತಂಡದ ಸಕ್ರಿಯ ಸದಸ್ಯರಾಗಿ ಅನೇಕ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದಾರೆ. ಆಸಕ್ತಿಯ ಕ್ಷೇತ್ರಗಳ ಜೊತೆಗೆ ಓದಿನಲ್ಲೂ ಮುಂದಿರುವ ರಿಷಿತಾ ತಾಲೂಕು ಮಟ್ಟದ ಅಬಾಕಸ್ ಜೂನಿಯರ್ ಪರೀಕ್ಷೆಯಲ್ಲಿ ದ್ವಿತೀಯ ಸ್ಥಾನ ಪಡೆದಿದ್ದು ಕರುನಾಡ ಕನ್ನಡ ಪ್ರತಿಭಾ ಪರೀಕ್ಷೆಯಲ್ಲೂ ಭಾಗವಹಿಸಿರುತ್ತಾರೆ. ಕ್ರೀಡೆಗೂ ಸೈ ಎಂದಿರುವ ಈ ಬಾಲಪ್ರತಿಭೆ ತಾಲ್ಲೂಕು ಮಟ್ಟದ ಕರಾಟೆಯಲ್ಲಿ ತೃತೀಯ ಮತ್ತು ವಲಯಮಟ್ಟದ ಹ್ಯಾಂಡ್ ಬಾಲ್ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ.

ಇನ್ನು ಭಾರತ್ ಸ್ಕೌಟ್ ಗೈಡ್ಸ್ ನ ಜಿಲ್ಲಾ ಮಟ್ಟದ ರ್ಯಾಲಿಯಲ್ಲೂ ಪಾಲ್ಗೊಂಡು ಪ್ರಶಂಸೆಗೆ ಪಾತ್ರರಾಗಿದ್ದಾರೆ. ಇದಲ್ಲದೆ ಕುಣಿತಭಜನೆ ಸ್ಪರ್ಧೆಯಲ್ಲಿ ರಾಜ್ಯಮಟ್ಟದಲ್ಲಿ ತನ್ನ ಛಾಪು ಮೂಡಿಸಿರುವ ರಿಷಿತ ರೈ ಅವರ ಅದ್ಭುತ ಚಿತ್ರಕಲಾ ಕೌಶಲ್ಯಕ್ಕೂ ಹತ್ತು ಹಲವಾರು ಪ್ರಶಸ್ತಿಗಳು ಸಂದಿವೆ. ಇವುಗಳ ಜೊತೆಗೆ ಭರತನಾಟ್ಯ ಮತ್ತು ಸಂಗೀತವನ್ನು ಕೂಡ ಅಭ್ಯಾಸ ಮಾಡುತ್ತಿರುವ ರಿಷಿತ ರೈ ಗೆ ಲಗ್ಗೆಯಿಟ್ಟ ಕ್ಷೇತ್ರದಲ್ಲೆಲ್ಲ ಛಾಪು ಮೂಡಿಸಿರುವ ಕೀರ್ತಿ ಸಲ್ಲುತ್ತದೆ.

Leave a Reply

Your email address will not be published. Required fields are marked *

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

ಬಂಟ್ವಾಳ: ಮೊಡಂಕಾಪು ಆಯ್ಯಪ್ಪ ಮಂದಿರದಲ್ಲಿ ನಡೆದ ಸಭೆಯಲ್ಲಿ ಮೂರನೇ ಅವಧಿಯ ಅಧ್ಯಕ್ಷರಾಗಿ ಆಯ್ಕೆಯಾದ ಸುನಿಲ್ ಎನ್

ಬಂಟ್ವಾಳ: ಸುರಿದ ಮಳೆಗೆ ಅವರಣಗೋಡೆ ಕುಸಿದು ಬಿದ್ದು ಹಾನಿ…!

ಪುತ್ತೂರಿನ ಪ್ರಕರಣ, ಕಾರ್ಕಳದ ಅಭಿಷೇಕ್ ಆತ್ಮಹತ್ಯೆಗೆ ಸಂಬಂಧಿಸಿ ಗ್ರಹಸಚಿವರಿಗೆ ಐವನ್ ಡಿಸೋಜಾ ಅವರಿಂದ ಮನವಿ

error: Content is protected !!