ಮೂಡುಬಿದ್ರೆಯ ಪ್ರತಿಭಾ ಎಸ್ ರೈ ಮತ್ತು ಶಿವರಾಜ್ ರೈ ಅವರ ಪುತ್ರಿ ರಿಷಿತಾ ರೈ ಮೂಡಬಿದ್ರೆ ತನ್ನ ಕಿರಿವಯಸ್ಸನಲ್ಲಿಯೇ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದು ಬಾಲಸಾಧಕಿ ಎನಿಸಿಕೊಂಡಿದ್ದಾರೆ. ಸಾಧನೆಗೆ ವಯಸ್ಸಿನ ಮಿತಿಯಿಲ್ಲ ಎಂಬುದನ್ನು ಸಾಬೀತುಪಡಿಸಿರುವ ರಿಷಿತಾ ಶೈಕ್ಷಣಿಕ ಚಟುವಟಿಕೆ, ಕ್ರೀಡೆ, ಚಿತ್ರಕಲೆ, ಭಕ್ತಿಗೀತೆ ಹೀಗೆ ಹಲವು ಕ್ಷೇತ್ರದಲ್ಲಿ ಮಾಗಿದ ಪ್ರತಿಭೆಯಾಗಿದ್ದಾರೆ.
ಪ್ರಸ್ತುತ ದಿಗಂಬರ ಜೈನ್ ಆಂಗ್ಲಮಾಧ್ಯಮ ಶಾಲೆಯಲ್ಲಿ ಏಳನೇ ತರಗತಿ ಓದುತ್ತಿರುವ ಇವರು ವಾಯ್ಸ್ ಆಫ್ ಆರಾಧನಾ ತಂಡದ ಸಕ್ರಿಯ ಸದಸ್ಯರಾಗಿ ಅನೇಕ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದಾರೆ. ಆಸಕ್ತಿಯ ಕ್ಷೇತ್ರಗಳ ಜೊತೆಗೆ ಓದಿನಲ್ಲೂ ಮುಂದಿರುವ ರಿಷಿತಾ ತಾಲೂಕು ಮಟ್ಟದ ಅಬಾಕಸ್ ಜೂನಿಯರ್ ಪರೀಕ್ಷೆಯಲ್ಲಿ ದ್ವಿತೀಯ ಸ್ಥಾನ ಪಡೆದಿದ್ದು ಕರುನಾಡ ಕನ್ನಡ ಪ್ರತಿಭಾ ಪರೀಕ್ಷೆಯಲ್ಲೂ ಭಾಗವಹಿಸಿರುತ್ತಾರೆ. ಕ್ರೀಡೆಗೂ ಸೈ ಎಂದಿರುವ ಈ ಬಾಲಪ್ರತಿಭೆ ತಾಲ್ಲೂಕು ಮಟ್ಟದ ಕರಾಟೆಯಲ್ಲಿ ತೃತೀಯ ಮತ್ತು ವಲಯಮಟ್ಟದ ಹ್ಯಾಂಡ್ ಬಾಲ್ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ.
ಇನ್ನು ಭಾರತ್ ಸ್ಕೌಟ್ ಗೈಡ್ಸ್ ನ ಜಿಲ್ಲಾ ಮಟ್ಟದ ರ್ಯಾಲಿಯಲ್ಲೂ ಪಾಲ್ಗೊಂಡು ಪ್ರಶಂಸೆಗೆ ಪಾತ್ರರಾಗಿದ್ದಾರೆ. ಇದಲ್ಲದೆ ಕುಣಿತಭಜನೆ ಸ್ಪರ್ಧೆಯಲ್ಲಿ ರಾಜ್ಯಮಟ್ಟದಲ್ಲಿ ತನ್ನ ಛಾಪು ಮೂಡಿಸಿರುವ ರಿಷಿತ ರೈ ಅವರ ಅದ್ಭುತ ಚಿತ್ರಕಲಾ ಕೌಶಲ್ಯಕ್ಕೂ ಹತ್ತು ಹಲವಾರು ಪ್ರಶಸ್ತಿಗಳು ಸಂದಿವೆ. ಇವುಗಳ ಜೊತೆಗೆ ಭರತನಾಟ್ಯ ಮತ್ತು ಸಂಗೀತವನ್ನು ಕೂಡ ಅಭ್ಯಾಸ ಮಾಡುತ್ತಿರುವ ರಿಷಿತ ರೈ ಗೆ ಲಗ್ಗೆಯಿಟ್ಟ ಕ್ಷೇತ್ರದಲ್ಲೆಲ್ಲ ಛಾಪು ಮೂಡಿಸಿರುವ ಕೀರ್ತಿ ಸಲ್ಲುತ್ತದೆ.
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ್ಯರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್ನಲ್ಲಿ ಖಾಸಗಿ ಬಸ್ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…
ಹೆಮ್ಮಾಡಿ ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಯಾನಕ ವ್ಹೀಲಿಂಗ್ ಮಾಡಿದ ಯುವಕ ಕಳ್ಳತನ ಪ್ರಕರಣದಲ್ಲೂ ಭಾಗಿಯಾಗಿದ್ದು, ಈತನನ್ನು ಪೊಲೀಸರು ಬಂಧಿಸಿದ್ದಾರೆ. ಪೌಜಾನ್…