ಜನ ಮನದ ನಾಡಿ ಮಿಡಿತ

Advertisement

ಹೈದರಾಬಾದ್: ಮಂಗ್ಲಿ ಬರ್ತ್ ಡೇ ಪಾರ್ಟಿ ಮೇಲೆ ಏಕಾಏಕಿ ಪೊಲೀಸ್ ದಾಳಿ

ಖ್ಯಾತ ಹಿನ್ನೆಲೆ ಗಾಯಕಿ ಮಂಗ್ಲಿ ಅವರಿಗೆ ಇದೀಗ ಸಂಕಷ್ಟ ಎದುರಾಗಿದೆ. ಮಂಗ್ಲಿ ಬರ್ತ್ ಡೇ ಪಾರ್ಟಿ ಮೇಲೆ ದಾಳಿ ಮಾಡಿರುವ ಪೊಲೀಸರು ತೀವ್ರ ಶೋಧ ನಡೆಸಿದ್ದಾರೆ. ಸ್ನೇಹಿತರಿಗಾಗಿ ಮಂಗ್ಲಿ ಪಾರ್ಟಿ ಪ್ಲಾನ್ ಮಾಡಿದ್ದು, ಡ್ರಗ್ಸ್ ಪರೀಕ್ಷೆಯಲ್ಲಿ ಪಾಸಿಟಿವ್ ರಿಪೋರ್ಟ್ ಬಂದಿದೆ. ಗಾಯಕಿ ಮಂಗ್ಲಿ ಅವರು ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಚೆವೆಲ್ಲಾದ ತ್ರಿಪುರಾ ರೆಸಾರ್ಟ್ನಲ್ಲಿ ನಿನ್ನೆ ತಮ್ಮ ಬರ್ತ್ ಡೇ ಪಾರ್ಟಿ ಆಯೋಜನೆ ಮಾಡಿದ್ದರು.

ಪೊಲೀಸರು ಈ ಪಾರ್ಟಿ ಮೇಲೆ ರೇಡ್ ಮಾಡಿದ್ದು, ಕಾರ್ಯಕ್ರಮದ ಆಯೋಜಕರಿಂದ ಅಪಾರ ಪ್ರಮಾಣದ ವಿದೇಶಿ ಮದ್ಯ, ಡ್ರಗ್ಸ್ ವಶಕ್ಕೆ ಪಡೆದಿದ್ದಾರೆ. ಮಂಗ್ಲಿ ಬರ್ತ್ ಡೇ ಪಾರ್ಟಿಯಲ್ಲಿ ಆಪ್ತ ಸ್ನೇಹಿತರು, ಕುಟುಂಬಸ್ಥರು ಸೇರಿ 48 ಮಂದಿಯಷ್ಟೇ ಭಾಗಿಯಾಗಿದ್ದರು. 48 ಮಂದಿಯ ಡ್ರಗ್ಸ್ ಪರೀಕ್ಷೆಯಲ್ಲಿ 9 ಜನಕ್ಕೆ ಡ್ರಗ್ಸ್ ಪಾಸಿಟಿವ್ ಬಂದಿದೆ. ಎನ್‌ಡಿಪಿಎಸ್ ಆ್ಯಕ್ಟ್ ಹಾಗೂ ಶಬ್ದ ಮಾಲಿನ್ಯ ಕಾಯಿದೆಯಡಿ ಪೊಲೀಸರು ಕೇಸ್ ದಾಖಲಿಸಿಕೊಂಡು ವಿಚಾರಣೆ ನಡೆಸುತ್ತಿದ್ದಾರೆ. ಬಹುಭಾಷಾ ಗಾಯಕಿ ಮಂಗ್ಲಿ ಅವರು ಪೊಲೀಸರ ಅನುಮತಿ ಪಡೆಯದೆ ಪಾರ್ಟಿ ಆಯೋಜನೆ ಮಾಡಿದ್ದಾರೆ.

ಪಾರ್ಟಿ ಮೇಲೆ ಏಕಾಏಕಿ ದಾಳಿ ಮಾಡಿರುವ ಪೊಲೀಸರು, ಅನುಮತಿಯಿಲ್ಲದೆ ಬಳಸಲಾಗಿದ್ದ ಡಿಜೆ ಸಿಸ್ಟಂ, ವಿದೇಶಿ ಮದ್ಯ ಹಾಗೂ ಡ್ರಗ್ಸ್ ವಶಕ್ಕೆ ಪಡೆದಿದ್ದಾರೆ. ಗಾಂಜಾ ಸೇವನೆ ಮಾಡಿದ್ದ 9 ಜನರನ್ನು ಬಂಧಿಸಿ ಪರೀಕ್ಷೆ ನಡೆಸಿದ್ದಾರೆ. ಗಾಯಕಿ ಮಂಗ್ಲಿ ಹಾಗೂ ತ್ರಿಪುರಾ ರೆಸಾರ್ಟ್ ಜನರಲ್ ಮ್ಯಾನೇಜರ್ ಶಿವರಾಮ ಕೃಷ್ಣ ವಿರುದ್ಧ ಕೇಸ್ ದಾಖಲಾಗಿದೆ.

Leave a Reply

Your email address will not be published. Required fields are marked *

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

ಮಂಗಳೂರು: ಅಕ್ರಮ ಆನೆದಂತಗಳ ಮಾರಾಟ; ಆರೋಪಿಗಳ ಬಂಧನ..!

ಬೆಂಗಳೂರು: ಕಾರ್ಕಳದಲ್ಲಿ ತುಳು ಭವನ ನಿರ್ಮಾಣಕ್ಕೆ ಅನುದಾನ ಬಿಡುಗಡೆಗೊಳಿಸುವಂತೆ ಮನವಿ..!

ಬೆಂಗಳೂರು: ಭೀಕರ ರಸ್ತೆ ಅಪಘಾತದಲ್ಲಿ ಕೇರಳ ಮೂಲದ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಮೃತ್ಯು…!

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ತಮಿಳುನಾಡು ಮುಖ್ಯಮಂತ್ರಿ ವಿಜಯ್ ಭೇಟಿ…!

error: Content is protected !!