ಮಧ್ಯ ಪ್ರದೇಶದ ಇಂಧೋರ್ ನವ ಜೋಡಿಯ ಹನಿಮೂನ್ ಪ್ರಕರಣ ದೇಶದಲ್ಲಿ ಭಾರೀ ಸಂಚಲನ ಸೃಷ್ಟಿಸಿದೆ. ಪ್ರಕರಣ ನಡೆಸ್ತಿರುವ ಪೊಲೀಸರಿಗೆ ಒಂದೊಂದೇ ಅಸಲಿ ವಿಚಾರಗಳು ಗೊತ್ತಾಗುತ್ತಿವೆ. ರಾಜಾ ರಘುವಂಶಿ ಮೇಲೆ ಇಷ್ಟವಿಲ್ಲದೇ ಮನೆಯವರ ಒತ್ತಾಯಕ್ಕೆ ಮದುವೆ ಮಾಡಿಕೊಂಡಿದ್ದ ಸೋನಂ ಮದ್ವೆಯಾದ ಮೂರೇ ದಿನಕ್ಕೆ ರಾಜಾ ರಂಘುವಂಶಿಯನ್ನು ಮುಗಿಸಲು ಪ್ಲಾನ್ ಮಾಡಿದ್ದಳು ಅನ್ನೋದು ಈಗಾಗಲೇ ತಿಳಿದಿದೆ.
ತನಿಖೆಯಲ್ಲಿ ಗೊತ್ತಾಗಿರುವ ಮತ್ತೊಂದು ವಿಚಾರವೆಂದರೆ, ಹನಿಮೂನ್ಗೆ ಹೋದಾಗ ಮೆಘಾಲಯದಲ್ಲಿ ತನ್ನ ಸುಪಾರಿ ಪ್ಲಾನ್ ಸಕ್ಸಸ್ ಆಗದಿದ್ರೆ ಪ್ಲಾನ್-ಬಿ ರೆಡಿ ಮಾಡಿದ್ದಳಂತೆ! ಊಟದಲ್ಲಿ ವಿಷ ನೀಡಿ ಪ್ರಾಣ ತೆಗೆಯಲು ಪ್ಲಾನ್ ಮಾಡಿದ್ದಂತೆ.. ಇನ್ನು ಆರೋಪಿ ಸೋನಮ್ಗೆ ರಾಜು ಕುಶ್ವಾಹಾ ಜೊತೆ ಅಫೇರ್ ಇರೋದು ಆಕೆಯ ತಂದೆ-ತಾಯಿಗೆ ಮುಂಚೆಯೇ ಗೊತ್ತಿತ್ತು ಎಂದು ಮೃತ ರಾಜಾ ರಘುವಂಶಿ ಸೋದರ ವಿಪಿನ್ ರಘುವಂಶಿ ಮಾಹಿತಿ ನೀಡಿದ್ದಾರೆ. ಸೋನಂ ತನ್ನ ತಾಯಿಯ ಬಳಿ ತಾನು ರಾಜು ಕುಶ್ವಾಹನ ಮದುವೆ ಆಗುತ್ತೇನೆ ಎಂದಿದ್ದಾಳೆ. ಆದರೆ ಇದಕ್ಕೆ ಆಕೆಯ ತಾಯಿ ಒಪ್ಪಿಲ್ಲ. ನಮ್ಮ ಸಮುದಾಯದವರ ಜೊತೆ ಮಾತ್ರವೇ ವಿವಾಹವಾಗಬೇಕು ಎಂದಿದ್ದರಂತೆ. ಅದಕ್ಕೆ ಸೋನಂ ನಾನು ಬೇರೆಯವರನ್ನು ಮದುವೆಯಾಗುತ್ತೇನೆ. ಆದರೆ ನಂತರ ಏನಾದರೂ ಅನಾಹುತವಾದರೆ ಅದಕ್ಕೆ ನಾನು ಹೊಣೆಯಲ್ಲ. ನನ್ನ ಮದುವೆಯಾದ ವ್ಯಕ್ತಿಗೆ ಏನು ಮಾಡುತ್ತೇನೆ ಅಂತಾ ನೋಡುತ್ತೀರಿ ಎಂದು ಎಚ್ಚರಿಕೆ ನೀಡಿದ್ದಳಂತೆ ಎಂದು ಹೇಳಿರುವ ವಿಚಾರವಾಗಿ ವಿಪಿನ್ ರಘುವಂಶಿ ಮಾಹಿತಿ ನೀಡಿದ್ದಾರೆ.
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…
ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…