ಮಧ್ಯ ಪ್ರದೇಶದ ಇಂಧೋರ್ ನವ ಜೋಡಿಯ ಹನಿಮೂನ್ ಪ್ರಕರಣ ದೇಶದಲ್ಲಿ ಭಾರೀ ಸಂಚಲನ ಸೃಷ್ಟಿಸಿದೆ. ಪ್ರಕರಣ ನಡೆಸ್ತಿರುವ ಪೊಲೀಸರಿಗೆ ಒಂದೊಂದೇ ಅಸಲಿ ವಿಚಾರಗಳು ಗೊತ್ತಾಗುತ್ತಿವೆ. ರಾಜಾ ರಘುವಂಶಿ ಮೇಲೆ ಇಷ್ಟವಿಲ್ಲದೇ ಮನೆಯವರ ಒತ್ತಾಯಕ್ಕೆ ಮದುವೆ ಮಾಡಿಕೊಂಡಿದ್ದ ಸೋನಂ ಮದ್ವೆಯಾದ ಮೂರೇ ದಿನಕ್ಕೆ ರಾಜಾ ರಂಘುವಂಶಿಯನ್ನು ಮುಗಿಸಲು ಪ್ಲಾನ್ ಮಾಡಿದ್ದಳು ಅನ್ನೋದು ಈಗಾಗಲೇ ತಿಳಿದಿದೆ.
ತನಿಖೆಯಲ್ಲಿ ಗೊತ್ತಾಗಿರುವ ಮತ್ತೊಂದು ವಿಚಾರವೆಂದರೆ, ಹನಿಮೂನ್ಗೆ ಹೋದಾಗ ಮೆಘಾಲಯದಲ್ಲಿ ತನ್ನ ಸುಪಾರಿ ಪ್ಲಾನ್ ಸಕ್ಸಸ್ ಆಗದಿದ್ರೆ ಪ್ಲಾನ್-ಬಿ ರೆಡಿ ಮಾಡಿದ್ದಳಂತೆ! ಊಟದಲ್ಲಿ ವಿಷ ನೀಡಿ ಪ್ರಾಣ ತೆಗೆಯಲು ಪ್ಲಾನ್ ಮಾಡಿದ್ದಂತೆ.. ಇನ್ನು ಆರೋಪಿ ಸೋನಮ್ಗೆ ರಾಜು ಕುಶ್ವಾಹಾ ಜೊತೆ ಅಫೇರ್ ಇರೋದು ಆಕೆಯ ತಂದೆ-ತಾಯಿಗೆ ಮುಂಚೆಯೇ ಗೊತ್ತಿತ್ತು ಎಂದು ಮೃತ ರಾಜಾ ರಘುವಂಶಿ ಸೋದರ ವಿಪಿನ್ ರಘುವಂಶಿ ಮಾಹಿತಿ ನೀಡಿದ್ದಾರೆ. ಸೋನಂ ತನ್ನ ತಾಯಿಯ ಬಳಿ ತಾನು ರಾಜು ಕುಶ್ವಾಹನ ಮದುವೆ ಆಗುತ್ತೇನೆ ಎಂದಿದ್ದಾಳೆ. ಆದರೆ ಇದಕ್ಕೆ ಆಕೆಯ ತಾಯಿ ಒಪ್ಪಿಲ್ಲ. ನಮ್ಮ ಸಮುದಾಯದವರ ಜೊತೆ ಮಾತ್ರವೇ ವಿವಾಹವಾಗಬೇಕು ಎಂದಿದ್ದರಂತೆ. ಅದಕ್ಕೆ ಸೋನಂ ನಾನು ಬೇರೆಯವರನ್ನು ಮದುವೆಯಾಗುತ್ತೇನೆ. ಆದರೆ ನಂತರ ಏನಾದರೂ ಅನಾಹುತವಾದರೆ ಅದಕ್ಕೆ ನಾನು ಹೊಣೆಯಲ್ಲ. ನನ್ನ ಮದುವೆಯಾದ ವ್ಯಕ್ತಿಗೆ ಏನು ಮಾಡುತ್ತೇನೆ ಅಂತಾ ನೋಡುತ್ತೀರಿ ಎಂದು ಎಚ್ಚರಿಕೆ ನೀಡಿದ್ದಳಂತೆ ಎಂದು ಹೇಳಿರುವ ವಿಚಾರವಾಗಿ ವಿಪಿನ್ ರಘುವಂಶಿ ಮಾಹಿತಿ ನೀಡಿದ್ದಾರೆ.
ಬೇಕಲ ಕೋಟೆ ಸಮೀಪದ ಪಳ್ಳಿಕರೆ ಕಡಲತೀರದಲ್ಲಿ ಭಾನುವಾರ ಸಂಜೆ ಸಂಭವಿಸಿದ ದುರ್ಘಟನೆಯಲ್ಲಿ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸಮುದ್ರದಲ್ಲಿ ಕೊಚ್ಚಿಹೋಗಿದ್ದು, ಅವರಿಗಾಗಿ…
ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ ಹೊಡೆದ ಘಟನೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಎಂಬಲ್ಲಿ ನಡೆದಿದೆ. ರಾತ್ರಿ ವೇಳೆ…
ಕಡಬ ತಾಲೂಕು ಕೊಯಿಲ ಮತ್ತು ರಾಮಕುಂಜ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕ ರಸ್ತೆಯುದ್ದಕ್ಕೂ ಉಂಟಾಗಿರುವ ಹೊಂಡಗಳಿಗೆ ಸ್ಥಳಿಯರು ಶ್ರಮ…
ರಾಷ್ಟ್ರೀಯ ಹೆದ್ದಾರಿಯ ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದಲ್ಲಿ ಸರ್ವೀಸ್ ರಸ್ತೆ ಹೊಂಡಗುಂಡಿಗಳಿಂದ ತುಂಬಿ ವಾಹನ ಸಂಚಾರಕ್ಕೆ ತೊಂದರೆಯಾಗುತ್ತಿದೆ ಎಂದು ಸ್ಥಳೀಯರು…
ಮಾದಕ ದ್ರವ್ಯ ಸಾಗಾಟ ಹಾಗೂ ಮಾರಾಟ ಪ್ರಕರಣಗಳಲ್ಲಿ ಭಾಗಿಯಾಗಿರುವ ಆರೋಪದಡಿ ಮಣಿಪಾಲ ಪೊಲೀಸ್ ಠಾಣೆ ವ್ಯಾಪ್ತಿಯ 80 ಬಡಗಬೆಟ್ಟು ಗ್ರಾಮದ…
ಮಂಗಳೂರು ನಗರದ ಪದವು ಗ್ರಾಮದ ಜೋಡುಕಟ್ಟೆ ಮರೋಳಿ ಹತ್ತಿರ ಜೂನ್ 11 ರಂದು ಅಕ್ರಮವಾಗಿ ಆನೆದಂತಗಳನ್ನು ಮಾರಾಟಕ್ಕೆ ಯತ್ನಿಸುತಿದ್ದವರನ್ನು ಬಂಧಿಸಲಾಗಿದೆ.…