ಮಧ್ಯ ಪ್ರದೇಶದ ಇಂಧೋರ್ ನವ ಜೋಡಿಯ ಹನಿಮೂನ್ ಪ್ರಕರಣ ದೇಶದಲ್ಲಿ ಭಾರೀ ಸಂಚಲನ ಸೃಷ್ಟಿಸಿದೆ. ಪ್ರಕರಣ ನಡೆಸ್ತಿರುವ ಪೊಲೀಸರಿಗೆ ಒಂದೊಂದೇ ಅಸಲಿ ವಿಚಾರಗಳು ಗೊತ್ತಾಗುತ್ತಿವೆ. ರಾಜಾ ರಘುವಂಶಿ ಮೇಲೆ ಇಷ್ಟವಿಲ್ಲದೇ ಮನೆಯವರ ಒತ್ತಾಯಕ್ಕೆ ಮದುವೆ ಮಾಡಿಕೊಂಡಿದ್ದ ಸೋನಂ ಮದ್ವೆಯಾದ ಮೂರೇ ದಿನಕ್ಕೆ ರಾಜಾ ರಂಘುವಂಶಿಯನ್ನು ಮುಗಿಸಲು ಪ್ಲಾನ್ ಮಾಡಿದ್ದಳು ಅನ್ನೋದು ಈಗಾಗಲೇ ತಿಳಿದಿದೆ.
ತನಿಖೆಯಲ್ಲಿ ಗೊತ್ತಾಗಿರುವ ಮತ್ತೊಂದು ವಿಚಾರವೆಂದರೆ, ಹನಿಮೂನ್ಗೆ ಹೋದಾಗ ಮೆಘಾಲಯದಲ್ಲಿ ತನ್ನ ಸುಪಾರಿ ಪ್ಲಾನ್ ಸಕ್ಸಸ್ ಆಗದಿದ್ರೆ ಪ್ಲಾನ್-ಬಿ ರೆಡಿ ಮಾಡಿದ್ದಳಂತೆ! ಊಟದಲ್ಲಿ ವಿಷ ನೀಡಿ ಪ್ರಾಣ ತೆಗೆಯಲು ಪ್ಲಾನ್ ಮಾಡಿದ್ದಂತೆ.. ಇನ್ನು ಆರೋಪಿ ಸೋನಮ್ಗೆ ರಾಜು ಕುಶ್ವಾಹಾ ಜೊತೆ ಅಫೇರ್ ಇರೋದು ಆಕೆಯ ತಂದೆ-ತಾಯಿಗೆ ಮುಂಚೆಯೇ ಗೊತ್ತಿತ್ತು ಎಂದು ಮೃತ ರಾಜಾ ರಘುವಂಶಿ ಸೋದರ ವಿಪಿನ್ ರಘುವಂಶಿ ಮಾಹಿತಿ ನೀಡಿದ್ದಾರೆ. ಸೋನಂ ತನ್ನ ತಾಯಿಯ ಬಳಿ ತಾನು ರಾಜು ಕುಶ್ವಾಹನ ಮದುವೆ ಆಗುತ್ತೇನೆ ಎಂದಿದ್ದಾಳೆ. ಆದರೆ ಇದಕ್ಕೆ ಆಕೆಯ ತಾಯಿ ಒಪ್ಪಿಲ್ಲ. ನಮ್ಮ ಸಮುದಾಯದವರ ಜೊತೆ ಮಾತ್ರವೇ ವಿವಾಹವಾಗಬೇಕು ಎಂದಿದ್ದರಂತೆ. ಅದಕ್ಕೆ ಸೋನಂ ನಾನು ಬೇರೆಯವರನ್ನು ಮದುವೆಯಾಗುತ್ತೇನೆ. ಆದರೆ ನಂತರ ಏನಾದರೂ ಅನಾಹುತವಾದರೆ ಅದಕ್ಕೆ ನಾನು ಹೊಣೆಯಲ್ಲ. ನನ್ನ ಮದುವೆಯಾದ ವ್ಯಕ್ತಿಗೆ ಏನು ಮಾಡುತ್ತೇನೆ ಅಂತಾ ನೋಡುತ್ತೀರಿ ಎಂದು ಎಚ್ಚರಿಕೆ ನೀಡಿದ್ದಳಂತೆ ಎಂದು ಹೇಳಿರುವ ವಿಚಾರವಾಗಿ ವಿಪಿನ್ ರಘುವಂಶಿ ಮಾಹಿತಿ ನೀಡಿದ್ದಾರೆ.
ಬಂಟ್ವಾಳ ತಾಲೂಕಿನ ತೆಂಕಬೆಳ್ಳೂರು ಗ್ರಾಮದ ಕಾಗುಡ್ಡೆ ಎಂಬಲ್ಲಿ ರಾತ್ರಿ ಸುರಿದ ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಮನೆಯ ಚಾವಣಿ…
ಬಂಟ್ವಾಳ ತಾಲೂಕಿನ ಸಜೀಪಮೂಡ ಗ್ರಾಮದ ಕೊಳಕೆ ಎಂಬಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಸಂಭವಿಸಿದಂತಹ ಅವಘಡದಲ್ಲಿ ಮನೆಯ ಪೀಠೋಪಕರಣಗಳು ಹಾಗೂ ದಿನನಿತ್ಯ…
ವಾಷಿಂಗ್ಟನ್ ಕರ್ನಾಟಕದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಯು. ಟಿ. ಖಾದರ್ ಫರೀದ್ ಅವರ ಸಾರ್ವಜನಿಕ ಸೇವೆ…
ಫಿಫಾ ವಿಶ್ವಕಪ್ 2026ರ ಫೈನಲ್ ಹಾಗೂ ಸೆಮಿಫೈನಲ್ ಪಂದ್ಯಗಳ ವೇಳೆ ನಡೆದ ಗಲಾಟೆ ಮತ್ತು ನಿಯಮ ಉಲ್ಲಂಘನೆಗಳ ಹಿನ್ನೆಲೆಯಲ್ಲಿ, ಅರ್ಜೆಂಟೀನಾ…
'ನ್ಯೂಯಾರ್ಕ್ ಟೈಮ್ಸ್' ತನ್ನ ವರದಿಯಲ್ಲಿ 'ಪಾಕಿಸ್ತಾನಿ ಕಾಶ್ಮೀರ' ಎಂದು ಉಲ್ಲೇಖಿಸಿರುವುದಕ್ಕೆ ಭಾರತ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಅಮೆರಿಕದಲ್ಲಿರುವ ಭಾರತೀಯ ರಾಯಭಾರ…
ಚೀನಾ ಪಾಕಿಸ್ತಾನದ ಮೂಲಕ ಇರಾನ್ಗೆ 400 ರಾಕೆಟ್ ಲಾಂಚರ್ಗಳನ್ನು ಪೂರೈಸಿದೆ ಎಂಬ ವರದಿಗಳು ಜಾಗತಿಕ ಆತಂಕಕ್ಕೆ ಕಾರಣವಾಗಿವೆ. ಈ ಕುರಿತು…