ಬೆಂಕಿ ಹೊತ್ತಿಕೊಂಡ ಸಿಂಗಾಪುರದ ವಾನ್ ಹೈ 503 ಕಂಟೇನರ್ ಹಡಗಿನಲ್ಲಿ ಬೆಂಕಿ ನಂದಿಸಲು ಭಾರತೀಯ ಕರಾವಳಿ ಕಾವಲು ಪಡೆ ಮತ್ತು ಭಾರತೀಯ ನೌಕಾಪಡೆ ಕೆಲಸ ಮಾಡುತ್ತಿವೆ.
ಸುತ್ತಲೂ ಸಮುದ್ರ ಇದ್ದರೂ ಹಡಗಿನ ಬೆಂಕಿ ನಂದಿಸಲು ಇನ್ನೂ ಕಷ್ಟವಾಗುತ್ತಿದೆ. ಬೆಂಕಿಯುಗುಳುತ್ತಲೇ ಇರುವ ಹಡಗನ್ನು 48 ಗಂಟೆ ಕಳೆದರೂ ನಿಯಂತ್ರಣಕ್ಕೆ ತರಲು ಸಾಧ್ಯವಾಗಿಲ್ಲ. ಇದರಿಂದ ಕ್ಷಣ ಕ್ಷಣಕ್ಕೂ ಆತಂಕ ಹೆಚ್ಚಾಗುತ್ತಿದೆ. ಕೊಲಂಬೊದಿ0ದ ಮುಂಬೈನ ನವಾ ಶೇವಾ ಬಂದರಿಗೆ ಪ್ರಯಾಣಿಸುತ್ತಿದ್ದ ಹಡಗಿನಲ್ಲಿ ಹೆಚ್ಚು ಸುಡುವ ವಸ್ತುಗಳ ಉಪಸ್ಥಿತಿಯು ಗಂಭೀರ ಕಳವಳವನ್ನು ಹುಟ್ಟುಹಾಕಿದೆ.
ಎರಡು ವಾರಗಳ ಹಿಂದೆ ಕೇರಳ ಕರಾವಳಿಯಲ್ಲಿ ಇತ್ತೀಚೆಗೆ MSC ELSA-3 ಮುಳುಗಿದ ನಂತರ ಭಯವು ಹೆಚ್ಚಾಗಿದೆ, ಆದರೆ ಹಡಗಿನಲ್ಲಿರುವ ಅಪಾಯಕಾರಿ ಸರಕುಗಳ ಬಗ್ಗೆ ಅನಿಶ್ಚಿತತೆ ಮುಂದುವರೆದಿದೆ. ಅಪಾಯಕಾರಿ ಸರಕುಗಳ ಜೊತೆಗೆ, ಹಡಗಿನಲ್ಲಿ ಸುಮಾರು 2,000 ಟನ್ ಇಂಧನವಿದೆ ಎಂದು ಅಂದಾಜಿಸಲಾಗಿದೆ. ಹಡಗಿನಲ್ಲಿದ್ದ ತಂಡದಲ್ಲಿ ಇಂಜಿನಿಯರ್ಗಳಿದ್ರೂ, ಇಂಜಿನ್ ವಿಭಾಗಗಳನ್ನು ಪರಿಶೀಲಿಸುತ್ತಿದ್ದರೂ ಇಂತಹ ಅವಘಡ ಸಂಭವಿಸಿರುವುದು ಆಶ್ಚರ್ಯ ಮೂಡಿಸಿದೆ. ಯಾವೊಂದು ಸಿಗ್ನಲ್ ಅನ್ನು ಕೂಡಾ ಹಡಗು ನೀಡಿರಲಿಲ್ಲವೇ ಎಂಬ ಪ್ರಶ್ನೆಗೂ ಸದ್ಯ ಉತ್ತರವಿಲ್ಲದಾಗಿದೆ.
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…
ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ (ರಿ) ದುಬೈ ಘಟಕದ ನಾಲ್ಕನೇ ವರ್ಷದ ದುಬೈ "ಗಡಿನಾಡ ಉತ್ಸವ -2025" ಕಾರ್ಯಕ್ರಮವು ನಗರದ…
ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿದ ಕಾರ್ಯಕ್ರಮದಲ್ಲಿ ನೂಕು ನುಗ್ಗಲು ಉಂಟಾಗಿ 11ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು…
ಪ್ರತೀ ಕಲಾವಿದರ ಕುಟುಂಬದೊಂದಿಗೆ ಅವರ ಕಷ್ಟ ಸುಖದಲ್ಲಿ ಇರುವಂತಹ ವಾತಾವರಣ ನಿರ್ಮಿಸಬೇಕು. ಕಲಾವಿದರ ಸಂಘಟನಾತ್ಮಕ ಬಲವನ್ನು ಹೆಚ್ಚಿಸುವ ಕೆಲಸವಾಗಲು ಎಲ್ಲರ…