ಬೆಂಕಿ ಹೊತ್ತಿಕೊಂಡ ಸಿಂಗಾಪುರದ ವಾನ್ ಹೈ 503 ಕಂಟೇನರ್ ಹಡಗಿನಲ್ಲಿ ಬೆಂಕಿ ನಂದಿಸಲು ಭಾರತೀಯ ಕರಾವಳಿ ಕಾವಲು ಪಡೆ ಮತ್ತು ಭಾರತೀಯ ನೌಕಾಪಡೆ ಕೆಲಸ ಮಾಡುತ್ತಿವೆ.
ಸುತ್ತಲೂ ಸಮುದ್ರ ಇದ್ದರೂ ಹಡಗಿನ ಬೆಂಕಿ ನಂದಿಸಲು ಇನ್ನೂ ಕಷ್ಟವಾಗುತ್ತಿದೆ. ಬೆಂಕಿಯುಗುಳುತ್ತಲೇ ಇರುವ ಹಡಗನ್ನು 48 ಗಂಟೆ ಕಳೆದರೂ ನಿಯಂತ್ರಣಕ್ಕೆ ತರಲು ಸಾಧ್ಯವಾಗಿಲ್ಲ. ಇದರಿಂದ ಕ್ಷಣ ಕ್ಷಣಕ್ಕೂ ಆತಂಕ ಹೆಚ್ಚಾಗುತ್ತಿದೆ. ಕೊಲಂಬೊದಿ0ದ ಮುಂಬೈನ ನವಾ ಶೇವಾ ಬಂದರಿಗೆ ಪ್ರಯಾಣಿಸುತ್ತಿದ್ದ ಹಡಗಿನಲ್ಲಿ ಹೆಚ್ಚು ಸುಡುವ ವಸ್ತುಗಳ ಉಪಸ್ಥಿತಿಯು ಗಂಭೀರ ಕಳವಳವನ್ನು ಹುಟ್ಟುಹಾಕಿದೆ.
ಎರಡು ವಾರಗಳ ಹಿಂದೆ ಕೇರಳ ಕರಾವಳಿಯಲ್ಲಿ ಇತ್ತೀಚೆಗೆ MSC ELSA-3 ಮುಳುಗಿದ ನಂತರ ಭಯವು ಹೆಚ್ಚಾಗಿದೆ, ಆದರೆ ಹಡಗಿನಲ್ಲಿರುವ ಅಪಾಯಕಾರಿ ಸರಕುಗಳ ಬಗ್ಗೆ ಅನಿಶ್ಚಿತತೆ ಮುಂದುವರೆದಿದೆ. ಅಪಾಯಕಾರಿ ಸರಕುಗಳ ಜೊತೆಗೆ, ಹಡಗಿನಲ್ಲಿ ಸುಮಾರು 2,000 ಟನ್ ಇಂಧನವಿದೆ ಎಂದು ಅಂದಾಜಿಸಲಾಗಿದೆ. ಹಡಗಿನಲ್ಲಿದ್ದ ತಂಡದಲ್ಲಿ ಇಂಜಿನಿಯರ್ಗಳಿದ್ರೂ, ಇಂಜಿನ್ ವಿಭಾಗಗಳನ್ನು ಪರಿಶೀಲಿಸುತ್ತಿದ್ದರೂ ಇಂತಹ ಅವಘಡ ಸಂಭವಿಸಿರುವುದು ಆಶ್ಚರ್ಯ ಮೂಡಿಸಿದೆ. ಯಾವೊಂದು ಸಿಗ್ನಲ್ ಅನ್ನು ಕೂಡಾ ಹಡಗು ನೀಡಿರಲಿಲ್ಲವೇ ಎಂಬ ಪ್ರಶ್ನೆಗೂ ಸದ್ಯ ಉತ್ತರವಿಲ್ಲದಾಗಿದೆ.
ಬೇಕಲ ಕೋಟೆ ಸಮೀಪದ ಪಳ್ಳಿಕರೆ ಕಡಲತೀರದಲ್ಲಿ ಭಾನುವಾರ ಸಂಜೆ ಸಂಭವಿಸಿದ ದುರ್ಘಟನೆಯಲ್ಲಿ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸಮುದ್ರದಲ್ಲಿ ಕೊಚ್ಚಿಹೋಗಿದ್ದು, ಅವರಿಗಾಗಿ…
ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ ಹೊಡೆದ ಘಟನೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಎಂಬಲ್ಲಿ ನಡೆದಿದೆ. ರಾತ್ರಿ ವೇಳೆ…
ಕಡಬ ತಾಲೂಕು ಕೊಯಿಲ ಮತ್ತು ರಾಮಕುಂಜ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕ ರಸ್ತೆಯುದ್ದಕ್ಕೂ ಉಂಟಾಗಿರುವ ಹೊಂಡಗಳಿಗೆ ಸ್ಥಳಿಯರು ಶ್ರಮ…
ರಾಷ್ಟ್ರೀಯ ಹೆದ್ದಾರಿಯ ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದಲ್ಲಿ ಸರ್ವೀಸ್ ರಸ್ತೆ ಹೊಂಡಗುಂಡಿಗಳಿಂದ ತುಂಬಿ ವಾಹನ ಸಂಚಾರಕ್ಕೆ ತೊಂದರೆಯಾಗುತ್ತಿದೆ ಎಂದು ಸ್ಥಳೀಯರು…
ಮಾದಕ ದ್ರವ್ಯ ಸಾಗಾಟ ಹಾಗೂ ಮಾರಾಟ ಪ್ರಕರಣಗಳಲ್ಲಿ ಭಾಗಿಯಾಗಿರುವ ಆರೋಪದಡಿ ಮಣಿಪಾಲ ಪೊಲೀಸ್ ಠಾಣೆ ವ್ಯಾಪ್ತಿಯ 80 ಬಡಗಬೆಟ್ಟು ಗ್ರಾಮದ…
ಮಂಗಳೂರು ನಗರದ ಪದವು ಗ್ರಾಮದ ಜೋಡುಕಟ್ಟೆ ಮರೋಳಿ ಹತ್ತಿರ ಜೂನ್ 11 ರಂದು ಅಕ್ರಮವಾಗಿ ಆನೆದಂತಗಳನ್ನು ಮಾರಾಟಕ್ಕೆ ಯತ್ನಿಸುತಿದ್ದವರನ್ನು ಬಂಧಿಸಲಾಗಿದೆ.…