ಬೆಂಕಿ ಹೊತ್ತಿಕೊಂಡ ಸಿಂಗಾಪುರದ ವಾನ್ ಹೈ 503 ಕಂಟೇನರ್ ಹಡಗಿನಲ್ಲಿ ಬೆಂಕಿ ನಂದಿಸಲು ಭಾರತೀಯ ಕರಾವಳಿ ಕಾವಲು ಪಡೆ ಮತ್ತು ಭಾರತೀಯ ನೌಕಾಪಡೆ ಕೆಲಸ ಮಾಡುತ್ತಿವೆ.
ಸುತ್ತಲೂ ಸಮುದ್ರ ಇದ್ದರೂ ಹಡಗಿನ ಬೆಂಕಿ ನಂದಿಸಲು ಇನ್ನೂ ಕಷ್ಟವಾಗುತ್ತಿದೆ. ಬೆಂಕಿಯುಗುಳುತ್ತಲೇ ಇರುವ ಹಡಗನ್ನು 48 ಗಂಟೆ ಕಳೆದರೂ ನಿಯಂತ್ರಣಕ್ಕೆ ತರಲು ಸಾಧ್ಯವಾಗಿಲ್ಲ. ಇದರಿಂದ ಕ್ಷಣ ಕ್ಷಣಕ್ಕೂ ಆತಂಕ ಹೆಚ್ಚಾಗುತ್ತಿದೆ. ಕೊಲಂಬೊದಿ0ದ ಮುಂಬೈನ ನವಾ ಶೇವಾ ಬಂದರಿಗೆ ಪ್ರಯಾಣಿಸುತ್ತಿದ್ದ ಹಡಗಿನಲ್ಲಿ ಹೆಚ್ಚು ಸುಡುವ ವಸ್ತುಗಳ ಉಪಸ್ಥಿತಿಯು ಗಂಭೀರ ಕಳವಳವನ್ನು ಹುಟ್ಟುಹಾಕಿದೆ.
ಎರಡು ವಾರಗಳ ಹಿಂದೆ ಕೇರಳ ಕರಾವಳಿಯಲ್ಲಿ ಇತ್ತೀಚೆಗೆ MSC ELSA-3 ಮುಳುಗಿದ ನಂತರ ಭಯವು ಹೆಚ್ಚಾಗಿದೆ, ಆದರೆ ಹಡಗಿನಲ್ಲಿರುವ ಅಪಾಯಕಾರಿ ಸರಕುಗಳ ಬಗ್ಗೆ ಅನಿಶ್ಚಿತತೆ ಮುಂದುವರೆದಿದೆ. ಅಪಾಯಕಾರಿ ಸರಕುಗಳ ಜೊತೆಗೆ, ಹಡಗಿನಲ್ಲಿ ಸುಮಾರು 2,000 ಟನ್ ಇಂಧನವಿದೆ ಎಂದು ಅಂದಾಜಿಸಲಾಗಿದೆ. ಹಡಗಿನಲ್ಲಿದ್ದ ತಂಡದಲ್ಲಿ ಇಂಜಿನಿಯರ್ಗಳಿದ್ರೂ, ಇಂಜಿನ್ ವಿಭಾಗಗಳನ್ನು ಪರಿಶೀಲಿಸುತ್ತಿದ್ದರೂ ಇಂತಹ ಅವಘಡ ಸಂಭವಿಸಿರುವುದು ಆಶ್ಚರ್ಯ ಮೂಡಿಸಿದೆ. ಯಾವೊಂದು ಸಿಗ್ನಲ್ ಅನ್ನು ಕೂಡಾ ಹಡಗು ನೀಡಿರಲಿಲ್ಲವೇ ಎಂಬ ಪ್ರಶ್ನೆಗೂ ಸದ್ಯ ಉತ್ತರವಿಲ್ಲದಾಗಿದೆ.
ತುಳುನಾಡಿನ ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿಯ ಬೆಳವಣಿಗೆಗೆ ಕಯ್ಯಾರ ಕಿಞ್ಞಣ್ಣ ರೈ ಅವರ ಕೊಡುಗೆ ಅಪಾರವಾಗಿದ್ದು, ಅವರನ್ನು ಈ ನಾಡಿನ…
ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಕಾರಣಗಿರಿ ಗ್ರಾಮ ಭಾರತಿ ಟ್ರಸ್ಟ್ ಹಾಗೂ ಕಲಾದರ್ಶನ ಮಾಸಪತ್ರಿಕೆ ಆಶ್ರಯದಲ್ಲಿ ಪ್ರಥಮ ಸುದ್ದಿ ವಾಹಕ…
72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ಅತ್ಯುತ್ತಮ ಪೋಷಕ ನಟಿ ರಾಷ್ಟ್ರೀಯ ಪ್ರಶಸ್ತಿ ಪಡೆದ ಕಾಸರಗೋಡು ವರ್ಕಾಡಿ ಮೂಲದ ರೂಪಶ್ರೀ ವರ್ಕಾಡಿ…
ಬಿಜೆಪಿಯ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನಾವಾಲಾ ಅವರು ತಮ್ಮ ಹುದ್ದೆ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನುವ…
ದೇಶದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಏರಿಳಿತ ಮುಂದುವರಿದಿದೆ. ಶುಕ್ರವಾರ ಚಿನ್ನದ ಬೆಲೆ ಪ್ರತಿ ಗ್ರಾಂಗೆ 25 ರೂಪಾಯಿ ಏರಿಕೆಯಾದರೂ,…
ತುಮಕೂರಿನಲ್ಲಿ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮೂಡಿಸುತ್ತಿದ್ದ ಪೊಲೀಸ್ ಸಿಬ್ಬಂದಿಯ ಪುತ್ರನೇ ಹೈಡ್ರೋ ಗಾಂಜಾ…