ಮಂಗಳೂರು ಸೆಂಟ್ರಲ್ ರೈಲ್ವೇ ನಿಲ್ದಾಣಕ್ಕೆ ಹೋಗುವ ಫೂಟ್ಪಾತ್ ರಸ್ತೆಯು ಜರಿದು ಗುಂಡಿಯಾಗಿದ್ದು, ಪಾದಚಾರಿಗಳ ಬಲಿಗಾಗಿ ಆಹ್ವಾನಿಸುವಂತಿದೆ.
ದಿನವೂ ಕಿಕ್ಕಿರಿದು ಜನರು ಸಂಚರಿಸುವ ರಸ್ತೆಯು ಮಳೆಯಿಂದ ಹಾನಿಯಾಗಿದೆ. ಮಾತ್ರವಲ್ಲದೆ ಈ ಮೊದಲೇ ಅಲ್ಲಿ ಇದ್ದ ಡ್ರೈನೇಜ್ ಗುಂಡಿಯು ಬಾಯಿ ತೆರೆದಿದ್ದು ಅಪಾಯಕ್ಕೆ ದಾರಿಮಾಡಿಕೊಡುತ್ತಿದೆ. ಕೆಲ ದಿನಗಳ ಹಿಂದೆ ಈ ಗುಂಡಿಯಲ್ಲಿ ರೈಲ್ವೆ ನಿಲ್ದಾಣಕ್ಕೆ ಸಂಚರಿಸುತ್ತಿದ್ದ ವ್ಯಕ್ತಿಯೋರ್ವ ಬಿದ್ದ ಘಟನೆ ಕೂಡ ನಡೆದಿದೆ. ಅಪಾಯ ಕಣ್ಣೆದುರಿಗೇ ಇದ್ರೂ ಅಧಿಕಾರಿಗಳು ಯಾವುದೇ ಕ್ರಮವನ್ನು ಕೈಗೊಂಡಿಲ್ಲ. ಅದಕ್ಕೆ ತೇಪೆ ಹಚ್ಚುವ ಕೆಲಸವೂ ಮಾಡದೇ, ಗುಂಡಿಯ ಬದಿಗೆ ಯಾವುದೇ ಕನಿಷ್ಠ ಅಪಾಯವನ್ನು ತಡೆಯುವ ಸೂಚನಾ ಫಲಕವನ್ನೂ ಇಟ್ಟಿಲ್ಲ. ರಸ್ತೆಯಲ್ಲಿ ವಾಹನ ಸಂಚಾರ ದಟ್ಟವಾಗಿದ್ದು ಆ ಭಾಗವಾಗಿ ನಡೆದು ಹೋಗುವುದು ಸವಾಲಾಗಿದೆ.
ಮುಂಗಾರು ಚುರುಕಾಗಿದ್ದು, ಹಾನಿಯಾದ ರಸ್ತೆಯು ಬಾಯ್ತೆರೆದು ನಿಂತಿದೆ. ಮುಂದಿನ ದಿನಗಳಲ್ಲಿ ಈ ಗುಂಡಿಯಲ್ಲಿ ಬಿದ್ದು ಕೈ, ಕಾಲು ಮುರಿಯುವ ಸಾಧ್ಯತೆಯ ಜೊತೆಗೆ ದೊಡ್ದ ಅಪಾಯದ ಮುನ್ಸೂಚನೆಯಂತೆ ಗೋಚರಿಸುತ್ತಿದೆ. ಅಧಿಕಾರಿಗಳು ಈ ಬಗ್ಗೆ ಕೂಡಲೇ ಗಮನಹರಿಸಬೇಕಾಗಿ ಸಾರ್ವಜನಿಕರು ಆಗ್ರಹಿಸಿದ್ದಾರೆ.
ಮನೆಯ ಸ್ಲಾಬ್ ಸೋರಿಕೆ ಸ್ಥಳವನ್ನು ಪರೀಕ್ಷಿಸುತ್ತಿದ್ದ ವೇಳೆ ಕ್ರೇನ್ ತೊಟ್ಟಿಲಿನಿಂದ ಆಯತಪ್ಪಿ ನೆಲಕ್ಕೆ ಬಿದ್ದ ಪರಿಣಾಮ ಓರ್ವ ಸ್ಥಳದಲ್ಲೇ ಮೃತಪಟ್ಟಿದ್ದು,…
ಮೂಲ್ಕಿಯ ಶಾಂಭವಿ ಹೊಳೆಯ ಬಪ್ಪನಾಡು ಭಾಗದಲ್ಲಿ ಅಪರಿಚಿತ ಶವ ಕಂಡುಬ0ದಿದೆ. ಕೊಳೆತ ಸ್ಥಿತಿಯಲ್ಲಿ ಶವ ಪತ್ತೆಯಾಗಿದ್ದು, ಸ್ಥಳೀಯರು ಮೃತದೇಹವನ್ನ…
ಹಿ0ದೂ ಸಂಘಟನೆ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣವನ್ನು ಕೈಗೆತ್ತಿಕೊಂಡಿರುವ ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ಮಂಗಳೂರಿಗೆ ಆಗಮಿಸಿದ್ದು ಹತ್ಯಾ…
ಮಂಗಳೂರಿನಲ್ಲಿ ಧಾರಕಾರ ಮಳೆ ಸುರಿಯುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಬೆಳಗ್ಗಿನಿಂದಲೇ ಮೋಡಕವಿದ ವಾತಾವರಣವಿತ್ತು. ಸಂಜೆಯಾಗುತ್ತಲೇ ಎಡೆಬಿಡದೇ ಮಳೆ ಸುರಿಯುತ್ತಿದೆ. ವಾಹನ ಸಂಚಾರಕ್ಕೂ…
ಕೊಲ್ಲೂರು ದೇವಳಕ್ಕೆ ಗೃಹ ಸಚಿವ ಜಿ.ಪರಮೇಶ್ವರ ಭೇಟಿ ನೀಡಿದ್ದಾರೆ. ಕೊಲ್ಲೂರಿನಲ್ಲಿ ಮೂಕಾಂಬಿಕೆಯ ದರ್ಶನ ಪಡೆದ ಗೃಹಸಚಿವರು, ಬಳಿಕ ದೇವಳದಲ್ಲಿ ವಿಶೇಷ…
ಕನ್ಸ್ಟಕ್ಷನ್ ಸಂಸ್ಥೆಯೊ0ದರ ಸಹ ಗುತ್ತಿಗೆದಾರನ ಬಿಲ್ ಕೇಳಲು ಹೋದಾಗ ಅಲ್ಲಿನ ಡೆಪ್ಯುಟಿ ಚೇರ್ಮೆನ್ ಜೊತೆ ಗೌರವಯುತವಾಗಿ ವರ್ತಿಸಿದ್ದೇನೆ. ಆದರೆ 26…