ಮಂಗಳೂರು ಸೆಂಟ್ರಲ್ ರೈಲ್ವೇ ನಿಲ್ದಾಣಕ್ಕೆ ಹೋಗುವ ಫೂಟ್ಪಾತ್ ರಸ್ತೆಯು ಜರಿದು ಗುಂಡಿಯಾಗಿದ್ದು, ಪಾದಚಾರಿಗಳ ಬಲಿಗಾಗಿ ಆಹ್ವಾನಿಸುವಂತಿದೆ.
ದಿನವೂ ಕಿಕ್ಕಿರಿದು ಜನರು ಸಂಚರಿಸುವ ರಸ್ತೆಯು ಮಳೆಯಿಂದ ಹಾನಿಯಾಗಿದೆ. ಮಾತ್ರವಲ್ಲದೆ ಈ ಮೊದಲೇ ಅಲ್ಲಿ ಇದ್ದ ಡ್ರೈನೇಜ್ ಗುಂಡಿಯು ಬಾಯಿ ತೆರೆದಿದ್ದು ಅಪಾಯಕ್ಕೆ ದಾರಿಮಾಡಿಕೊಡುತ್ತಿದೆ. ಕೆಲ ದಿನಗಳ ಹಿಂದೆ ಈ ಗುಂಡಿಯಲ್ಲಿ ರೈಲ್ವೆ ನಿಲ್ದಾಣಕ್ಕೆ ಸಂಚರಿಸುತ್ತಿದ್ದ ವ್ಯಕ್ತಿಯೋರ್ವ ಬಿದ್ದ ಘಟನೆ ಕೂಡ ನಡೆದಿದೆ. ಅಪಾಯ ಕಣ್ಣೆದುರಿಗೇ ಇದ್ರೂ ಅಧಿಕಾರಿಗಳು ಯಾವುದೇ ಕ್ರಮವನ್ನು ಕೈಗೊಂಡಿಲ್ಲ. ಅದಕ್ಕೆ ತೇಪೆ ಹಚ್ಚುವ ಕೆಲಸವೂ ಮಾಡದೇ, ಗುಂಡಿಯ ಬದಿಗೆ ಯಾವುದೇ ಕನಿಷ್ಠ ಅಪಾಯವನ್ನು ತಡೆಯುವ ಸೂಚನಾ ಫಲಕವನ್ನೂ ಇಟ್ಟಿಲ್ಲ. ರಸ್ತೆಯಲ್ಲಿ ವಾಹನ ಸಂಚಾರ ದಟ್ಟವಾಗಿದ್ದು ಆ ಭಾಗವಾಗಿ ನಡೆದು ಹೋಗುವುದು ಸವಾಲಾಗಿದೆ.
ಮುಂಗಾರು ಚುರುಕಾಗಿದ್ದು, ಹಾನಿಯಾದ ರಸ್ತೆಯು ಬಾಯ್ತೆರೆದು ನಿಂತಿದೆ. ಮುಂದಿನ ದಿನಗಳಲ್ಲಿ ಈ ಗುಂಡಿಯಲ್ಲಿ ಬಿದ್ದು ಕೈ, ಕಾಲು ಮುರಿಯುವ ಸಾಧ್ಯತೆಯ ಜೊತೆಗೆ ದೊಡ್ದ ಅಪಾಯದ ಮುನ್ಸೂಚನೆಯಂತೆ ಗೋಚರಿಸುತ್ತಿದೆ. ಅಧಿಕಾರಿಗಳು ಈ ಬಗ್ಗೆ ಕೂಡಲೇ ಗಮನಹರಿಸಬೇಕಾಗಿ ಸಾರ್ವಜನಿಕರು ಆಗ್ರಹಿಸಿದ್ದಾರೆ.
ಬೇಕಲ ಕೋಟೆ ಸಮೀಪದ ಪಳ್ಳಿಕರೆ ಕಡಲತೀರದಲ್ಲಿ ಭಾನುವಾರ ಸಂಜೆ ಸಂಭವಿಸಿದ ದುರ್ಘಟನೆಯಲ್ಲಿ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸಮುದ್ರದಲ್ಲಿ ಕೊಚ್ಚಿಹೋಗಿದ್ದು, ಅವರಿಗಾಗಿ…
ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ ಹೊಡೆದ ಘಟನೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಎಂಬಲ್ಲಿ ನಡೆದಿದೆ. ರಾತ್ರಿ ವೇಳೆ…
ಕಡಬ ತಾಲೂಕು ಕೊಯಿಲ ಮತ್ತು ರಾಮಕುಂಜ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕ ರಸ್ತೆಯುದ್ದಕ್ಕೂ ಉಂಟಾಗಿರುವ ಹೊಂಡಗಳಿಗೆ ಸ್ಥಳಿಯರು ಶ್ರಮ…
ರಾಷ್ಟ್ರೀಯ ಹೆದ್ದಾರಿಯ ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದಲ್ಲಿ ಸರ್ವೀಸ್ ರಸ್ತೆ ಹೊಂಡಗುಂಡಿಗಳಿಂದ ತುಂಬಿ ವಾಹನ ಸಂಚಾರಕ್ಕೆ ತೊಂದರೆಯಾಗುತ್ತಿದೆ ಎಂದು ಸ್ಥಳೀಯರು…
ಮಾದಕ ದ್ರವ್ಯ ಸಾಗಾಟ ಹಾಗೂ ಮಾರಾಟ ಪ್ರಕರಣಗಳಲ್ಲಿ ಭಾಗಿಯಾಗಿರುವ ಆರೋಪದಡಿ ಮಣಿಪಾಲ ಪೊಲೀಸ್ ಠಾಣೆ ವ್ಯಾಪ್ತಿಯ 80 ಬಡಗಬೆಟ್ಟು ಗ್ರಾಮದ…
ಮಂಗಳೂರು ನಗರದ ಪದವು ಗ್ರಾಮದ ಜೋಡುಕಟ್ಟೆ ಮರೋಳಿ ಹತ್ತಿರ ಜೂನ್ 11 ರಂದು ಅಕ್ರಮವಾಗಿ ಆನೆದಂತಗಳನ್ನು ಮಾರಾಟಕ್ಕೆ ಯತ್ನಿಸುತಿದ್ದವರನ್ನು ಬಂಧಿಸಲಾಗಿದೆ.…