ಮಂಗಳೂರು ಸೆಂಟ್ರಲ್ ರೈಲ್ವೇ ನಿಲ್ದಾಣಕ್ಕೆ ಹೋಗುವ ಫೂಟ್ಪಾತ್ ರಸ್ತೆಯು ಜರಿದು ಗುಂಡಿಯಾಗಿದ್ದು, ಪಾದಚಾರಿಗಳ ಬಲಿಗಾಗಿ ಆಹ್ವಾನಿಸುವಂತಿದೆ.
ದಿನವೂ ಕಿಕ್ಕಿರಿದು ಜನರು ಸಂಚರಿಸುವ ರಸ್ತೆಯು ಮಳೆಯಿಂದ ಹಾನಿಯಾಗಿದೆ. ಮಾತ್ರವಲ್ಲದೆ ಈ ಮೊದಲೇ ಅಲ್ಲಿ ಇದ್ದ ಡ್ರೈನೇಜ್ ಗುಂಡಿಯು ಬಾಯಿ ತೆರೆದಿದ್ದು ಅಪಾಯಕ್ಕೆ ದಾರಿಮಾಡಿಕೊಡುತ್ತಿದೆ. ಕೆಲ ದಿನಗಳ ಹಿಂದೆ ಈ ಗುಂಡಿಯಲ್ಲಿ ರೈಲ್ವೆ ನಿಲ್ದಾಣಕ್ಕೆ ಸಂಚರಿಸುತ್ತಿದ್ದ ವ್ಯಕ್ತಿಯೋರ್ವ ಬಿದ್ದ ಘಟನೆ ಕೂಡ ನಡೆದಿದೆ. ಅಪಾಯ ಕಣ್ಣೆದುರಿಗೇ ಇದ್ರೂ ಅಧಿಕಾರಿಗಳು ಯಾವುದೇ ಕ್ರಮವನ್ನು ಕೈಗೊಂಡಿಲ್ಲ. ಅದಕ್ಕೆ ತೇಪೆ ಹಚ್ಚುವ ಕೆಲಸವೂ ಮಾಡದೇ, ಗುಂಡಿಯ ಬದಿಗೆ ಯಾವುದೇ ಕನಿಷ್ಠ ಅಪಾಯವನ್ನು ತಡೆಯುವ ಸೂಚನಾ ಫಲಕವನ್ನೂ ಇಟ್ಟಿಲ್ಲ. ರಸ್ತೆಯಲ್ಲಿ ವಾಹನ ಸಂಚಾರ ದಟ್ಟವಾಗಿದ್ದು ಆ ಭಾಗವಾಗಿ ನಡೆದು ಹೋಗುವುದು ಸವಾಲಾಗಿದೆ.
ಮುಂಗಾರು ಚುರುಕಾಗಿದ್ದು, ಹಾನಿಯಾದ ರಸ್ತೆಯು ಬಾಯ್ತೆರೆದು ನಿಂತಿದೆ. ಮುಂದಿನ ದಿನಗಳಲ್ಲಿ ಈ ಗುಂಡಿಯಲ್ಲಿ ಬಿದ್ದು ಕೈ, ಕಾಲು ಮುರಿಯುವ ಸಾಧ್ಯತೆಯ ಜೊತೆಗೆ ದೊಡ್ದ ಅಪಾಯದ ಮುನ್ಸೂಚನೆಯಂತೆ ಗೋಚರಿಸುತ್ತಿದೆ. ಅಧಿಕಾರಿಗಳು ಈ ಬಗ್ಗೆ ಕೂಡಲೇ ಗಮನಹರಿಸಬೇಕಾಗಿ ಸಾರ್ವಜನಿಕರು ಆಗ್ರಹಿಸಿದ್ದಾರೆ.
ತುಳುನಾಡಿನ ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿಯ ಬೆಳವಣಿಗೆಗೆ ಕಯ್ಯಾರ ಕಿಞ್ಞಣ್ಣ ರೈ ಅವರ ಕೊಡುಗೆ ಅಪಾರವಾಗಿದ್ದು, ಅವರನ್ನು ಈ ನಾಡಿನ…
ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಕಾರಣಗಿರಿ ಗ್ರಾಮ ಭಾರತಿ ಟ್ರಸ್ಟ್ ಹಾಗೂ ಕಲಾದರ್ಶನ ಮಾಸಪತ್ರಿಕೆ ಆಶ್ರಯದಲ್ಲಿ ಪ್ರಥಮ ಸುದ್ದಿ ವಾಹಕ…
72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ಅತ್ಯುತ್ತಮ ಪೋಷಕ ನಟಿ ರಾಷ್ಟ್ರೀಯ ಪ್ರಶಸ್ತಿ ಪಡೆದ ಕಾಸರಗೋಡು ವರ್ಕಾಡಿ ಮೂಲದ ರೂಪಶ್ರೀ ವರ್ಕಾಡಿ…
ಬಿಜೆಪಿಯ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನಾವಾಲಾ ಅವರು ತಮ್ಮ ಹುದ್ದೆ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನುವ…
ದೇಶದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಏರಿಳಿತ ಮುಂದುವರಿದಿದೆ. ಶುಕ್ರವಾರ ಚಿನ್ನದ ಬೆಲೆ ಪ್ರತಿ ಗ್ರಾಂಗೆ 25 ರೂಪಾಯಿ ಏರಿಕೆಯಾದರೂ,…
ತುಮಕೂರಿನಲ್ಲಿ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮೂಡಿಸುತ್ತಿದ್ದ ಪೊಲೀಸ್ ಸಿಬ್ಬಂದಿಯ ಪುತ್ರನೇ ಹೈಡ್ರೋ ಗಾಂಜಾ…