ಜನ ಮನದ ನಾಡಿ ಮಿಡಿತ

Advertisement

ಮಂಗಳೂರು: “ಪೊಲೀಸರ ಆತ್ಮ ಸ್ಥೈರ್ಯ ಕುಗ್ಗಿಸುವ ಕೆಲಸ ಮಾಡ್ತಾಯಿದೆ”; ಪದ್ಮರಾಜ್ ಪೂಜಾರಿ

ದಕ್ಷಿಣ ಕನ್ನಡ ಜಿಲ್ಲೆಗೆ ಆಗಮಿಸಿದ ಬಿಜೆಪಿ ನಿಯೋಗ ಪೊಲೀಸರ ಆತ್ಮ ಸ್ಥೈರ್ಯವನ್ನು ಕುಗ್ಗಿಸುವ ಕೆಲಸ ಮಾಡ್ತಾ ಇದೆ ಎಂದು ದಕ್ಷಿಣ ಕನ್ನಡ ಜಿಲ್ಲೆಯ ಕೆಪಿಸಿಸಿ ಮಾಜಿ ಪ್ರಧಾನ ಕಾರ್ಯದರ್ಶಿ ಪದ್ಮನಾಭ ಪೂಜಾರಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇವರು ಮಂಗಳೂರಿನಲ್ಲಿರುವ ಜಿಲ್ಲಾ ಕಾಂಗ್ರೆಸ್ ಕಛೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿ, ಕಾಂಗ್ರೆಸ್ ಪಕ್ಷದ ನಿಯೋಗವು ಇಲ್ಲಿನ ಅಧಿಕಾರಿಗಳನ್ನು, ಧಾರ್ಮಿಕ ಮುಖಂಡರನ್ನು, ಕಾರ್ಮಿಕ ವಲಯ ಸದಸ್ಯರನ್ನು, ಜನ ಸಾಮಾನ್ಯರನ್ನು ಬೇಟಿಯಾಗಿ ಈ ಜಿಲ್ಲೆಯಲ್ಲಿ ಶಾಶ್ವತವಾಗಿ ಶಾಂತಿ ಸೌಹಾರ್ದತೆಯನ್ನು ಕಾಪಾಡುವುದರ ಬಗ್ಗೆ ಚರ್ಚೆ ನಡೆಸಿದ್ರು. ಇನ್ನೆರಡು ದಿನಗಳಲ್ಲಿ ನಿಯೋಗದ ವರದಿಯು ಜಾರಿಗೆ ಬರಲಿದೆ. ಆದ್ರೆ ಎರಡು ದಿನಗಳ ಹಿಂದೆ ಬಂದ ಬಿಜೆಪಿ ಪಕ್ಷ ಪೊಲೀಸರ ಕ್ರಮಗಳನ್ನು ಪ್ರಶ್ನೆ ಮಾಡ್ತಾ ಇದ್ದಾರೆ. ಪೊಲೀಸರ ವಿರುದ್ದ ಲಘುವಾದ ಹೇಳಿಕೆಗಳನ್ನು ನೀಡ್ತಾ ಇದ್ದಾರೆ. ಅವರಿಗೆ ಈ ಜಿಲ್ಲೆಯ ಅಭಿವೃದ್ಧಿ ಮುಖ್ಯವಲ್ಲ. ಬದಲಾಗಿ ಅಶಾಂತಿ ನಿರ್ಮಾಣ ಎಂದಿದ್ದಾರೆ. ಇನ್ನು ಈ ಸುದ್ದಿಗೋಷ್ಠಿಯಲ್ಲಿ ಮಾಜಿ ಮೇಯರ್ ಶಶಿಧರ್ ಹೆಗ್ಡೆ, ನವೀನ್ ಡಿ ಸೌಝ, ಪ್ರಕಾಶ್ ಸಾಲಿಯಾನ್, ನಿರಾಜ್ ಚಂದ್ರಪಾಲ್, ಕೇಶವ ಮಾರೋಳಿ, ಲಾರೆನ್ಸ್ ಡಿ ಸೌಝ, ಸುಹಾನ್ ಆಳ್ವಾ, ಶುಭೋದಯ ಆಳ್ವಾ ಉಪಸ್ಥಿತರಿದ್ರು.

Leave a Reply

Your email address will not be published. Required fields are marked *

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಮಂಜುನಾಥ್ ಶೆಟ್ಟಿ ದಂಪತಿಗೆ ಸನ್ಮಾನ

ಉಡುಪಿ: ಕರಾವಳಿ ನಿವಾಸಿಗಳ ಸಂಕಷ್ಟಕ್ಕೆ ಸ್ಪಂದಿಸಿದ ಜಿಲ್ಲಾಡಳಿತ…!

ಬಂಟ್ವಾಳ: ಮಾಣಿ ಸಮೀಪ ಜೋಗಿಬೆಟ್ಟು ರಸ್ತೆ ಕೆರೆಯಂತಾದ ದೃಶ್ಯ….!

ವಾಷಿಂಗ್ಟನ್: ಉತ್ತರ ಅಮೆರಿಕಾ ಬಂಟರ ಸಂಘದ `ದಿಬ್ಬಣ’ ಮಹಾ ಅಧಿವೇಶನ..!

ಮಂಗಳೂರು: ಮಂಗಳೂರಿನಲ್ಲಿ ಎಐ ಸಿ.ಸಿ ಕ್ಯಾಮರಾಗಳ ಅಳವಡಿಕೆ….!

ಬಂಟ್ವಾಳ: ಮಳೆ ಅನಾಹುತ: ರಾಯಿಯ ಜೀವನ್ ಪಿಂಟೋ ಮೃತದೇಹ ಪ*ತ್ತೆ…..!

ಬಂಟ್ವಾಳದಲ್ಲಿ ಮಳೆ ಅವಾಂತರ; ಮರ ಬಿದ್ದು ಸ್ಥಳೀಯರ ಪರದಾಟ

ಶ್ರೀಲಂಕಾ ಟೆಸ್ಟ್ ಸರಣಿಗೆ ಟೀಮ್ ಇಂಡಿಯಾಗೆ ಆಕಿಬ್ ನಬಿ ಎಂಟ್ರಿ

ಬಿಹಾರದ ಸಹರ್ಸಾದಲ್ಲಿ ರೈಲು ಅಗ್ನಿ ಅವಘಡ; ತಪ್ಪಿದ ಭಾರೀ ಅನಾಹುತ

error: Content is protected !!